AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ರಾಜಸ್ಥಾನದ ಕೋಚಿಂಗ್ ಹಾಸ್ಟೆಲ್‌ನಲ್ಲಿ 18 ವರ್ಷದ ವಿದ್ಯಾರ್ಥಿಯ ಶವ ಪತ್ತೆ; ಮರಣೋತ್ತರ ಪರೀಕ್ಷೆಗೆ ಪೋಷಕರು ನಿರಾಕರಣೆ

Shocking News: ರಾಜಸ್ಥಾನದ ಕೋಟಾದಲ್ಲಿ ಮೃತ ವಿದ್ಯಾರ್ಥಿಯ ಪೋಷಕರು ಮರಣೋತ್ತರ ಪರೀಕ್ಷೆ ನಡೆಸಲು ನಿರಾಕರಿಸಿದ್ದು, ಬಳಿಕ ಅವರ ಮನವೊಲಿಸಿ ಮೃತದೇಹವನ್ನು ಅಂತಿಮ ವಿಧಿವಿಧಾನಗಳಿಗಾಗಿ ಅವರಿಗೆ ಹಸ್ತಾಂತರಿಸಲಾಗಿದೆ. ಮೃತರು ಉತ್ತರ ಪ್ರದೇಶದ ಪ್ರಯಾಗರಾಜ್ ನಿವಾಸಿಯಾಗಿದ್ದಾರೆ.

Crime News: ರಾಜಸ್ಥಾನದ ಕೋಚಿಂಗ್ ಹಾಸ್ಟೆಲ್‌ನಲ್ಲಿ 18 ವರ್ಷದ ವಿದ್ಯಾರ್ಥಿಯ ಶವ ಪತ್ತೆ; ಮರಣೋತ್ತರ ಪರೀಕ್ಷೆಗೆ ಪೋಷಕರು ನಿರಾಕರಣೆ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Aug 20, 2024 | 6:16 PM

Share

ಜೈಪುರ: ರಾಜಸ್ಥಾನದ ಕೋಟಾದಲ್ಲಿ 18 ವರ್ಷದ ಕೋಚಿಂಗ್ ವಿದ್ಯಾರ್ಥಿಯೊಬ್ಬ ತನ್ನ ಹಾಸ್ಟೆಲ್ ಕೊಠಡಿಯ ಸ್ನಾನಗೃಹದಲ್ಲಿ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾನೆ. ಹಾಸ್ಟೆಲ್​ನ ಉಸ್ತುವಾರಿಯಿಂದ ಮಾಹಿತಿ ಪಡೆದ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿ ಸಾಕ್ಷ್ಯ ಸಂಗ್ರಹಿಸಿದೆ. ಆದರೆ, ಆ ಬಾಲಕನ ಪೋಷಕರ ಕೋರಿಕೆಯ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿಲ್ಲ. ಮರಣೋತ್ತರ ಪರೀಕ್ಷೆ ನಡೆಸಲು ಪೋಷಕರು ಕೂಡ ನಿರಾಕರಿಸಿದ್ದಾರೆ. ಅವರ ಇಚ್ಛೆಯ ಮೇರೆಗೆ ಮೃತದೇಹವನ್ನು ಅಂತಿಮ ವಿಧಿವಿಧಾನಕ್ಕಾಗಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತನನ್ನು ಉತ್ತರ ಪ್ರದೇಶದ ಪ್ರಯಾಗರಾಜ್ ನಿವಾಸಿ ಕುಶಾಗ್ರಾ ರಸ್ತೋಗಿ ಎಂದು ಗುರುತಿಸಲಾಗಿದ್ದು, ಸೋಮವಾರದಂದು ಆತನ ಶವ ಪತ್ತೆಯಾಗಿರುವ ಜವಾಹರ್ ನಗರ ಪ್ರದೇಶದ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ವರ್ಷದ ಏಪ್ರಿಲ್‌ನಲ್ಲಿ ಇಂಜಿನಿಯರಿಂಗ್ ಕೋರ್ಸ್‌ಗೆ ಪ್ರವೇಶಕ್ಕಾಗಿ ಕೋಟಾದ ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ಕುಶಾಗ್ರಾ ರಸ್ತೋಗಿ ದಾಖಲಾಗಿದ್ದರು ಮತ್ತು ಹಾಸ್ಟೆಲ್‌ನಲ್ಲಿ ವಾಸಿಸಲು ಪ್ರಾರಂಭಿಸಿದರು ಎಂದು ಅವರು ಹೇಳಿದರು.

ಇದನ್ನೂ ಓದಿ: Shocking News: 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಸ್ತನ, ಗುಪ್ತಾಂಗ ಕತ್ತರಿಸಿ ಬರ್ಬರ ಹತ್ಯೆ

ಸೋಮವಾರ ಬೆಳಿಗ್ಗೆ ಆತ ಎಂದಿನಂತೆ ಎದ್ದ ನಂತರ ಫ್ರೆಶ್ ಆಗಲು ಸ್ನಾನಗೃಹಕ್ಕೆ ಹೋಗಿದ್ದ. ಅಲ್ಲೇ ಆತನ ಶವ ಪತ್ತೆಯಾಗಿದೆ ಎಂದು ಡಿಎಸ್ಪಿ ರಾಜೇಶ್ ಟೇಲರ್ ತಿಳಿಸಿದ್ದಾರೆ. 15-20 ನಿಮಿಷಗಳ ನಂತರವೂ ಹುಡುಗ ಹೊರಗೆ ಬರದಿದ್ದಾಗ, ಅಲ್ಲಿದ್ದವರು ಸ್ನಾನಗೃಹದ ಬಾಗಿಲನ್ನು ಬಡಿದರು. ಆದರೂ ಲಾಕ್ ತೆರೆಯದ ಕಾರಣ ಬಾಗಿಲನ್ನು ಒಡೆಯಲಾಗಿತ್ತು. ಆಗ ಆತ ನೆಲದ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿರುವುದನ್ನು ಕಂಡು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ವೈದ್ಯರು ಅವರಿಗೆ ಸಿಪಿಆರ್ ನೀಡಿದರು ಆದರೆ ಅಷ್ಟರಲ್ಲಾಗಲೇ ಆತ ಸಾವನ್ನಪ್ಪಿದ್ದ. ಬಳಿಕ ಮೃತನ ಪೋಷಕರು ಮರಣೋತ್ತರ ಪರೀಕ್ಷೆಯನ್ನು ನಿರಾಕರಿಸಿದರು, ಆದ್ದರಿಂದ ಈ ವಿಷಯದಲ್ಲಿ ಯಾವುದೇ ಪ್ರಕರಣವನ್ನು ದಾಖಲಿಸದೆ ದೇಹವನ್ನು ಅವರಿಗೆ ಹಸ್ತಾಂತರಿಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?