AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ: ಪ್ರೇಯಸಿಯ ಗಂಡನನ್ನು ಹತ್ಯೆ ಮಾಡಿ ಮೃತದೇಹವನ್ನು 6 ತುಂಡುಗಳಾಗಿ ಕತ್ತರಿಸಿ ಹೂತಿಟ್ಟ ವ್ಯಕ್ತಿ ಬಂಧನ

ಜುಲೈ 13 ರಂದು ಜೋಗೇಂದ್ರನ ತಂದೆ ಸ್ಥಳೀಯ ಪೊಲೀಸರಿಗೆ ದೂರು ನೀಡಿದ ನಂತರ ಬಂಧನ ನಡೆದಿದೆ. ದೂರಿನ ಪ್ರಕಾರ, ಜುಲೈ 11 ರಂದು ಜೋಗೇಂದ್ರ ಮನೆಯಿಂದ ಹೋಗಿದ್ದು, ಅನಂತರ ಹಿಂದಿರುಗಿಲ್ಲ ಎಂದು ಅವರು ದೂರಿನಲ್ಲಿ ಹೇಳಿದ್ದು ಮದನ್ ಲಾಲ್ ಮೇಲೆ ಶಂಕೆ ಇರುವುದಾಗಿ ತಿಳಿಸಿದ್ದರು.

ರಾಜಸ್ಥಾನ: ಪ್ರೇಯಸಿಯ ಗಂಡನನ್ನು ಹತ್ಯೆ ಮಾಡಿ ಮೃತದೇಹವನ್ನು 6 ತುಂಡುಗಳಾಗಿ ಕತ್ತರಿಸಿ ಹೂತಿಟ್ಟ ವ್ಯಕ್ತಿ ಬಂಧನ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on: Jul 19, 2023 | 3:53 PM

Share

ರಾಜಸ್ಥಾನದ (Rajasthan) ಪಾಲಿಯಲ್ಲಿ 33 ವರ್ಷದ ವ್ಯಕ್ತಿಯನ್ನು ಪತ್ನಿಯ ಪ್ರಿಯಕರನೇ ಕೊಲೆ (Murder Case) ಮಾಡಿ, ಶವವನ್ನು ಆರು ತುಂಡುಗಳಾಗಿ ಕತ್ತರಿಸಿ ವಿವಿಧ ಸ್ಥಳಗಳಲ್ಲಿ ಹೂತಿಟ್ಟಿ ಪ್ರಕರಣ ವರದಿ ಆಗಿದೆ. ಮದನಲಾಲ್ ಎಂದು ಗುರುತಿಸಲಾದ ಆರೋಪಿ ಜೋಗೇಂದ್ರನನ್ನು ಕೊಂದು ಮೃತದೇಹವನ್ನು ಕತ್ತರಿಸಿ ಸಮೀಪದ ಕಾಡಿನಲ್ಲಿ ಹೂತಿಟ್ಟಿದ್ದ. ಮನೆಯಿಂದ 100 ಮೀಟರ್ ದೂರದಲ್ಲಿರುವ ತೋಟದಿಂದ ತಲೆ, ಕೈ ಮತ್ತು ಕಾಲುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಮಾಧಿ ಸ್ಥಳದ ಮೇಲೆ ಮಾವಿನ ಸಸಿ ನೆಟ್ಟಿದ್ದ ಆರೋಪಿಯನ್ನು ಮಂಗಳವಾರ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಜುಲೈ 13 ರಂದು ಜೋಗೇಂದ್ರನ ತಂದೆ ಸ್ಥಳೀಯ ಪೊಲೀಸರಿಗೆ ದೂರು ನೀಡಿದ ನಂತರ ಬಂಧನ ನಡೆದಿದೆ. ದೂರಿನ ಪ್ರಕಾರ, ಜುಲೈ 11 ರಂದು ಜೋಗೇಂದ್ರ ಮನೆಯಿಂದ ಹೋಗಿದ್ದು, ಅನಂತರ ಹಿಂದಿರುಗಿಲ್ಲ ಎಂದು ಅವರು ದೂರಿನಲ್ಲಿ ಹೇಳಿದ್ದು ಮದನ್ ಲಾಲ್ ಮೇಲೆ ಶಂಕೆ ಇರುವುದಾಗಿ ತಿಳಿಸಿದ್ದರು.

ನನ್ನ ಮಗನ ಹತ್ಯೆಯಲ್ಲಿ ಹೆಚ್ಚಿನ ಜನರು ಭಾಗಿಯಾಗಿದ್ದಾರೆಂದು ನಾನು ನಂಬುತ್ತೇನೆ ಎಂದು ಮೃತನ ತಂದೆ ಮಿಶ್ರಾಲಾಲ್ ಮೇಘವಾಲ್ ಹೇಳಿದ್ದಾರೆ.

ಇದನ್ನೂ ಓದಿ: Rajasthan Crime: 6 ತಿಂಗಳ ಮಗು ಸೇರಿ ನಾಲ್ವರನ್ನು ಬರ್ಬರವಾಗಿ ಕೊಲೆ ಮಾಡಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ತಕ್ಷಣ ಪೊಲೀಸರು ತನಿಖೆ ನಡೆಸಿ ಮದನ್‌ಲಾಲ್‌ನನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಮದನ್‌ಲಾಲ್ ತಾನು ಜೋಗೇಂದ್ರನ ಪತ್ನಿಯೊಂದಿಗೆ ಸಂಬಂಧ ಹೊಂದಿದ್ದು, ಆತನನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?