ರಾಜಸ್ಥಾನ: ಪ್ರೇಯಸಿಯ ಗಂಡನನ್ನು ಹತ್ಯೆ ಮಾಡಿ ಮೃತದೇಹವನ್ನು 6 ತುಂಡುಗಳಾಗಿ ಕತ್ತರಿಸಿ ಹೂತಿಟ್ಟ ವ್ಯಕ್ತಿ ಬಂಧನ

|

Updated on: Jul 19, 2023 | 3:53 PM

ಜುಲೈ 13 ರಂದು ಜೋಗೇಂದ್ರನ ತಂದೆ ಸ್ಥಳೀಯ ಪೊಲೀಸರಿಗೆ ದೂರು ನೀಡಿದ ನಂತರ ಬಂಧನ ನಡೆದಿದೆ. ದೂರಿನ ಪ್ರಕಾರ, ಜುಲೈ 11 ರಂದು ಜೋಗೇಂದ್ರ ಮನೆಯಿಂದ ಹೋಗಿದ್ದು, ಅನಂತರ ಹಿಂದಿರುಗಿಲ್ಲ ಎಂದು ಅವರು ದೂರಿನಲ್ಲಿ ಹೇಳಿದ್ದು ಮದನ್ ಲಾಲ್ ಮೇಲೆ ಶಂಕೆ ಇರುವುದಾಗಿ ತಿಳಿಸಿದ್ದರು.

ರಾಜಸ್ಥಾನ: ಪ್ರೇಯಸಿಯ ಗಂಡನನ್ನು ಹತ್ಯೆ ಮಾಡಿ ಮೃತದೇಹವನ್ನು 6 ತುಂಡುಗಳಾಗಿ ಕತ್ತರಿಸಿ ಹೂತಿಟ್ಟ ವ್ಯಕ್ತಿ ಬಂಧನ
ಪ್ರಾತಿನಿಧಿಕ ಚಿತ್ರ
Follow us on

ರಾಜಸ್ಥಾನದ (Rajasthan) ಪಾಲಿಯಲ್ಲಿ 33 ವರ್ಷದ ವ್ಯಕ್ತಿಯನ್ನು ಪತ್ನಿಯ ಪ್ರಿಯಕರನೇ ಕೊಲೆ (Murder Case) ಮಾಡಿ, ಶವವನ್ನು ಆರು ತುಂಡುಗಳಾಗಿ ಕತ್ತರಿಸಿ ವಿವಿಧ ಸ್ಥಳಗಳಲ್ಲಿ ಹೂತಿಟ್ಟಿ ಪ್ರಕರಣ ವರದಿ ಆಗಿದೆ. ಮದನಲಾಲ್ ಎಂದು ಗುರುತಿಸಲಾದ ಆರೋಪಿ ಜೋಗೇಂದ್ರನನ್ನು ಕೊಂದು ಮೃತದೇಹವನ್ನು ಕತ್ತರಿಸಿ ಸಮೀಪದ ಕಾಡಿನಲ್ಲಿ ಹೂತಿಟ್ಟಿದ್ದ. ಮನೆಯಿಂದ 100 ಮೀಟರ್ ದೂರದಲ್ಲಿರುವ ತೋಟದಿಂದ ತಲೆ, ಕೈ ಮತ್ತು ಕಾಲುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಮಾಧಿ ಸ್ಥಳದ ಮೇಲೆ ಮಾವಿನ ಸಸಿ ನೆಟ್ಟಿದ್ದ ಆರೋಪಿಯನ್ನು ಮಂಗಳವಾರ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಜುಲೈ 13 ರಂದು ಜೋಗೇಂದ್ರನ ತಂದೆ ಸ್ಥಳೀಯ ಪೊಲೀಸರಿಗೆ ದೂರು ನೀಡಿದ ನಂತರ ಬಂಧನ ನಡೆದಿದೆ. ದೂರಿನ ಪ್ರಕಾರ, ಜುಲೈ 11 ರಂದು ಜೋಗೇಂದ್ರ ಮನೆಯಿಂದ ಹೋಗಿದ್ದು, ಅನಂತರ ಹಿಂದಿರುಗಿಲ್ಲ ಎಂದು ಅವರು ದೂರಿನಲ್ಲಿ ಹೇಳಿದ್ದು ಮದನ್ ಲಾಲ್ ಮೇಲೆ ಶಂಕೆ ಇರುವುದಾಗಿ ತಿಳಿಸಿದ್ದರು.

ನನ್ನ ಮಗನ ಹತ್ಯೆಯಲ್ಲಿ ಹೆಚ್ಚಿನ ಜನರು ಭಾಗಿಯಾಗಿದ್ದಾರೆಂದು ನಾನು ನಂಬುತ್ತೇನೆ ಎಂದು ಮೃತನ ತಂದೆ ಮಿಶ್ರಾಲಾಲ್ ಮೇಘವಾಲ್ ಹೇಳಿದ್ದಾರೆ.

ಇದನ್ನೂ ಓದಿ: Rajasthan Crime: 6 ತಿಂಗಳ ಮಗು ಸೇರಿ ನಾಲ್ವರನ್ನು ಬರ್ಬರವಾಗಿ ಕೊಲೆ ಮಾಡಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ತಕ್ಷಣ ಪೊಲೀಸರು ತನಿಖೆ ನಡೆಸಿ ಮದನ್‌ಲಾಲ್‌ನನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಮದನ್‌ಲಾಲ್ ತಾನು ಜೋಗೇಂದ್ರನ ಪತ್ನಿಯೊಂದಿಗೆ ಸಂಬಂಧ ಹೊಂದಿದ್ದು, ಆತನನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ