AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಅಪರಿಚಿತ ಯುವಕನ ಕತ್ತು ಕೊಯ್ದು, ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ

ಗ್ರಾಮದ ಹೊರವಲಯದ ರಸ್ತೆಯಲ್ಲಿ ಅಪರಿಚಿತ ಯುವಕನನ್ನ ಕತ್ತು ಕೊಯ್ದು, ತಲೆಯ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಯುವಕನ ಕೊಲೆಯ ಹಿಂದೆ ಸಾಕಷ್ಟು ಅನುಮಾನಗಳು ಮೂಡಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ರಾಮನಗರ: ಅಪರಿಚಿತ ಯುವಕನ ಕತ್ತು ಕೊಯ್ದು, ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 27, 2023 | 6:55 AM

Share

ರಾಮನಗರ: ಅಪರಿಚಿತ ಯುವಕನೊಬ್ಬನ ಕತ್ತು ಕೊಯ್ದು, ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಆನೆಹೊಸಳ್ಳಿ ಗ್ರಾಮದ ಬಳಿ ನಡೆದಿದೆ. ಸುಮಾರು 18ರಿಂದ 22 ವರ್ಷದ ಯುವಕನನ್ನ ಭೀಕರವಾಗಿ ಹತ್ಯೆ ಮಾಡಿದ್ದು, ಕೊಲೆಯ ಹಿಂದೆ ಸಾಕಷ್ಟು ಅನುಮಾನ ಮೂಡಿದೆ. ಯುವಕನ ಮೈಮೇಲೆ ಒಳಉಡುಪು ಬಿಟ್ಟರೇ ಬೇರೆ ಯಾವುದೇ ಬಟ್ಟೆಗಳು ಇಲ್ಲ. ಹತ್ಯೆ ಮಾಡುವುದಕ್ಕೂ ಮೊದಲು ಯುವಕನ್ನ ವಿವಸ್ತ್ರಗೊಳಿಸಿ, ಯಾವುದೇ ಸಣ್ಣ ಸುಳಿವು ಸಿಗಬಾರದು ಎಂದು ಆತನ ಬಟ್ಟೆಗಳನ್ನ ಎತ್ತಿಕೊಂಡು, ನಂತರ ಭೀಕರವಾಗಿ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ. ಇವತ್ತು(ಫೆ.25) ಬೆಳಗಿನ ಜಾವ ಗ್ರಾಮಸ್ಥರು ಮೃತದೇಹವನ್ನ ಕಂಡು ಹಾರೋಹಳ್ಳಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇನ್ನು ಗ್ರಾಮದ ಹೊರವಲಯದಲ್ಲಿ ಅಪರಿಚಿತ ಯುಕವನ ಹತ್ಯೆ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಯುವಕನನ್ನ ಬೇರೆಡೆಯಿಂದ ಕರೆತಂದು ಹತ್ಯೆ ಮಾಡಲಾಗಿದೆ ಎನ್ನಲಾಗುತ್ತಿದೆ. ಇನ್ನು ಸಲಿಂಗಕಾಮ ಅಥವಾ ಹುಡುಗಿ ವಿಚಾರಕ್ಕೆ ಹತ್ಯೆ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸಾಕಷ್ಟು ಪ್ಲಾನ್ ಮಾಡಿ, ಪೊಲೀಸರ ಕೈಗೆ ಸಿಗಬಾರದು, ಪೊಲೀಸರ ದಿಕ್ಕು ತಪ್ಪಿಸಬೇಕು ಎಂದು ವಿವಸ್ತ್ರಗೊಳಿಸಲಾಗಿದ್ದು, ಯಾವು ಸುಳಿವನ್ನು ಕೂಡ ಹಂತಕರು ಬಿಟ್ಟಿಲ್ಲ. ಕೊಲೆ ರಹಸ್ಯವನ್ನ ಬೇಧಿಸುವ ನಿಟ್ಟಿನಲ್ಲಿ ಈಗಾಗಲೇ ಎರಡು ಪ್ರತ್ಯೇಕ ತಂಡಗಳನ್ನ ಕೂಡ ರಚನೆ ಮಾಡಲಾಗಿದ್ದು ಪೊಲೀಸರು ಕೊಲೆ ರಹಸ್ಯ ಬೇಧಿಸಲು ಮುಂದಾಗಿದ್ದಾರೆ.

ಇದನ್ನೂ ಓದಿ:‘ಹೈದರಾಬಾದ್: ಗರ್ಲ್​​ಫ್ರೆಂಡ್​​ಗೆ ಕರೆ ಮಾಡಿದ್ದಕ್ಕೆ ಸ್ನೇಹಿತನ ಕೊಲೆ ಮಾಡಿ ಹೃದಯ ಕಿತ್ತು, ಬೆರಳು ಕತ್ತರಿಸಿದ ಯುವಕ

ಒಟ್ಟಾರೆ ಅಪರಿಚಿತ ಯುವಕನ ಭೀಕರ ಹತ್ಯೆ ಜಿಲ್ಲೆಯ ಜನರನ್ನ ಬೆಚ್ಚಿ ಬೀಳುವಂತೆ ಮಾಡಿದ್ದು, ಈ ನಿಟ್ಟಿನಲ್ಲಿ ಪೊಲೀಸರು ಹಂತರಕ ಬೇಟೆಗೆ ಮುಂದಾಗಿದ್ದಾರೆ. ಈ ಕೊಲೆಯಲ್ಲಿ ಯಾವುದೇ ಸುಳಿವು ಇಲ್ಲದೆ ಇರುವುದು ಪೊಲೀಸರಿಗೆ ಇದೊಂದು ಸವಾಲಾಗಿ ಪರಿಣಮಿಸಿದೆ.

ವರದಿ: ಪ್ರಶಾಂತ್ ಹುಲಿಕೆರೆ ಟಿವಿ9 ರಾಮನಗರ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ