AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಮಣ್ಣು ಸಾಗಿಟ ಬಗ್ಗೆ ಪ್ರಶ್ನಿಸಿದ್ದಕ್ಕೆ ತಹಶೀಲ್ದಾರ್​ ಮೇಲೆ ಲಾರಿ ಹತ್ತಿಸಿ ಕೊಲೆಗೆ ಯತ್ನ: ದೂರು ದಾಖಲು

ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಭೀಮಸಂದ್ರ ಬಳಿ ಅಕ್ರಮವಾಗಿ ಮಣ್ಣು ಸಾಗಿಸುತ್ತಿದ್ದ ಬಗ್ಗೆ ಪ್ರಶ್ನಿಸಿದ್ದಕ್ಕೆ ತಹಶೀಲ್ದಾರ್​ ಮೇಲೆ ಲಾರಿ ಹತ್ತಿಸಿ ಕೊಲೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ತಹಶಿಲ್ದಾರ್ ವಿಜಯಣ್ಣ ಮೇಲೆ ಕೊಲೆಗೆ ಯತ್ನಿಸಲಾಗಿದೆ. ಗೋಮಾಳ ಜಮೀನಿನಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ಆರೋಪ ಕೇಳಿಬಂದಿದೆ. ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಅಕ್ರಮ ಮಣ್ಣು ಸಾಗಿಟ ಬಗ್ಗೆ ಪ್ರಶ್ನಿಸಿದ್ದಕ್ಕೆ ತಹಶೀಲ್ದಾರ್​ ಮೇಲೆ ಲಾರಿ ಹತ್ತಿಸಿ ಕೊಲೆಗೆ ಯತ್ನ: ದೂರು ದಾಖಲು
ತಹಶೀಲ್ದಾರ್​ ವಿಜಯಣ್ಣ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Mar 03, 2024 | 6:40 PM

Share

ರಾಮನಗರ, ಮಾರ್ಚ್​​​ 3: ಅಕ್ರಮವಾಗಿ ಮಣ್ಣು ಸಾಗಿಸುತ್ತಿದ್ದ ಬಗ್ಗೆ ಪ್ರಶ್ನಿಸಿದ್ದಕ್ಕೆ ತಹಶೀಲ್ದಾರ್ (Tehsildar)​ ಮೇಲೆ ಲಾರಿ ಹತ್ತಿಸಿ ಕೊಲೆಗೆ ಯತ್ನಿಸಿರುವಂತಹ ಘಟನೆ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಭೀಮಸಂದ್ರ ಬಳಿ ನಡೆದಿದೆ. ತಹಶಿಲ್ದಾರ್ ವಿಜಯಣ್ಣ ಮೇಲೆ ಕೊಲೆಗೆ ಯತ್ನಿಸಲಾಗಿದೆ. ಗೋಮಾಳ ಜಮೀನಿನಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ಆರೋಪ ಕೇಳಿಬಂದಿದೆ. ನಿಲ್ಲಿಸು ಎಂದಿದ್ದಕ್ಕೆ ಲಾರಿ ಹತ್ತಿಸಿ ಕೊಲೆಗೆ ಯತ್ನಿಸಿದ್ದಾರೆಂದು ಹಾರೋಹಳ್ಳಿ ಠಾಣೆಯಲ್ಲಿ ವಿಜಯಣ್ಣ ದೂರು ದಾಖಲಿಸಿದ್ದಾರೆ. ಚೇಸ್ ಮಾಡಿ ಆರೋಪಿಯನ್ನು ಹಿಡಿದಿದ್ದಾರೆ. ಫೆ.29‌ರಂದು ಭೀಮಸಂದ್ರ ಬಳಿ ಘಟನೆ‌ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚೆಕ್‌ಪೋಸ್ಟ್‌ನಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಅಕ್ಕಿ ಕಳ್ಳರು ಎಸ್ಕೇಪ್‌

ಗದಗ: ಪೊಲೀಸರ ಮೇಲೆ ಹಲ್ಲೆ ಮಾಡಿ ಅಕ್ಕಿ ಕಳ್ಳರು ಎಸ್ಕೇಪ್ ಆಗಿರುವಂತಹ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ರಾಮಗೇರಿ ಚೆಕ್ ಪೋಸ್ಟ್ ಬಳಿ ನಡೆದಿದೆ. ಲಕ್ಷ್ಮೇಶ್ವರ ಠಾಣೆಯ ಪೊಲೀಸ್ ಪೇದೆ ಎಚ್.ಎನ್.ಗೊರವರ್ ಮೇಲೆ ಹಲ್ಲೆ ಮಾಡಲಾಗಿದೆ. ಅನ್ನಭಾಗ್ಯ ಅಕ್ಕಿ ವಾಹನ ತಪಾಸಣೆ ಮಾಡುವ ವೇಳೆ ಘಟನೆ ಸಂಭವಿಸಿದೆ.

ಇದನ್ನೂ ಓದಿ: ರಾಯಚೂರು: ಗ್ರಾಮ ದೇವಿ ಜಾತ್ರೆಗೆ ಬಂದಿದ್ದವನ ಹತ್ಯೆ! ಪಾರ್ಟಿಗೆಂದು ಹೋದವ ಮೂರು ದಿನದ ಬಳಿಕ ಶವವಾಗಿ ಪತ್ತೆ

ರಾಮಗೇರಿ ಚೆಕ್ ಪೋಸ್ಟ್​​ನಲ್ಲಿ ಪೊಲೀಸ್ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದರು. ಪೊಲೀಸ್ ಸಮವಸ್ತ್ರ ಧರಿಸಿ ಕರ್ತವ್ಯ ನಿರತ ಪೇದೆಯ ಮೇಲೆಯೇ ಪುಂಡರು ಹಲ್ಲೆ ಮಾಡಿದ್ದಾರೆ. ಸಮವಸ್ತ್ರ ಹರಿದು, ಮೈ ಕೈ ಮೇಲೆ ಬಾಸುಂಡೆ ಬೀಳುವಂತೆ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಮಾಡಲಾಗಿದೆ. ಘಟನೆ ನಡೆದ ಕೂಡಲೇ ವಾಹನ ಸಮೇತವಾಗಿ ಸ್ಥಳದಿಂದ ಆರೋಪಿಗಳು ಪರಾರಿಯಾಗಿದ್ದಾರೆ. ಜಿಲ್ಲೆಯಲ್ಲಿ ಎಗ್ಗಿಲ್ಲದೇ ಅಕ್ರಮ ಅನ್ನ ಭಾಗ್ಯ ಅಕ್ಕಿ ಸಾಗಾಟ ನಡೆದಿದೆ. ಲಕ್ಷ್ಮೇಶ್ವರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬೈಕ್​ಗೆ ಟೆಂಪೋ ಡಿಕ್ಕಿ: ಸವಾರ ಸ್ಥಳದಲ್ಲಿಯೇ ಸಾವು

ಉಡುಪಿ: ಬೈಕ್​ಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವಂತಹ ಘಟನೆ  ಜಿಲ್ಲೆಯ ಕಾಪು ತಾಲೂಕಿನ ಉದ್ಯಾವರ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಸವಾರ ಮೃತಪಟ್ಟಿದ್ದು, ಸಹ ಸವಾರ ಮಹಿಳೆಗೆ ತೀವ್ರಗಾಯಗೊಂಡಿದ್ದಾರೆ.

ಇದನ್ನೂ ಓದಿ: ನಿಶಾನಿ ಬೆಟ್ಟದಲ್ಲಿ ಕಾಡಾನೆ ದಾಳಿಗೆ ವೃದ್ಧ ಸಾವು: ಶವ ಕಂಡು ಸ್ಥಳೀಯರಿಗೆ ಮಾಹಿತಿ ನೀಡಿದ ಚಾರಣಿಗರು

ಉಚ್ಚಿಲ ಪೊಲ್ಯ ಮೂಲದ ಪಡುಬಿದ್ರೆ ಕನ್ನಂಗಾರು ನಿವಾಸಿ ಮುಫ್ರೀನ್(18) ಮೃತ ವ್ಯಕ್ತಿ. ಹಿಂಬದಿ ಕುಳಿತ ಮೃತರ ತಾಯಿ ಹಾಜಿರಾ ಅವರಿಗೆ ಗಾಯಗಳಾಗಿವೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಟಪಾಡಿ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ