AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ: ವಿಡಿಯೋ ರೂವಾರಿ ಸೇರಿ ಮೂವರಿಗೆ 14 ದಿನ ನ್ಯಾಯಾಂಗ ಬಂಧನ

ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾಗಡಿ ತಾಲೂಕಿನ ಕಣ್ಣೂರು ಮಠದ ಮೃತ್ಯುಂಜಯಶ್ರೀ ಜೈಲುಪಾಲಾಗಿದ್ದಾರೆ.

ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ: ವಿಡಿಯೋ ರೂವಾರಿ ಸೇರಿ ಮೂವರಿಗೆ 14 ದಿನ ನ್ಯಾಯಾಂಗ ಬಂಧನ
ಕಣ್ಣೂರು ಮಠದ ಮೃತ್ಯುಂಜಯಶ್ರೀ
TV9 Web
| Edited By: |

Updated on:Oct 30, 2022 | 6:04 PM

Share

ರಾಮನಗರ: ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯನ್ನು ಮುಂದಿಟ್ಟುಕೊಂಡು ಹನಿಟ್ರ್ಯಾಪ್ ಮಾಡಿದ್ದ ಮೃತ್ಯುಂಜಯಶ್ರೀ ಸೇರಿದಂತೆ ಮೂವರು ಆರೋಪಿಗಳಿಗೆ ನ್ಯಾಯಾಲಯ​ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ಬಂಡೇಮಠದ ಸ್ವಾಮೀಜಿ ಮತ್ತು ಹನಿಟ್ರ್ಯಾಪ್ ಜಾಲ ಹೆಣೆದ ಕಣ್ಣೂರು ಮಠದ ಡಾ ಮೃತ್ಯುಂಜಯ ಸ್ವಾಮೀಜಿ ಹಾಗೂ ಎ2 ನೀಲಾಂಬಿಕೆ, ಎ3 ಮಹದೇವಯ್ಯನನ್ನು ಇಂದು(ಅಕ್ಟೋಬರ್ 30) ಪೊಲೀಸರು ಬಂಧಿಸಿ ನ್ಯಾಯಾಲಕ್ಕೆ ಒಪ್ಪಿಸಿದ್ದರು. ಇದೀಗ ಕೋರ್ಟ್, ಮೂವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಬಂಡೇಮಠ ಸ್ವಾಮೀಜಿ ಆತ್ಮಹತ್ಯೆ: ಹನಿಟ್ರ್ಯಾಪ್ ಬಲೆ ಬೀಸಿದ್ದ ಯುವತಿಯೊಂದಿಗೆ ಕಣ್ಣೂರು ಮಠದ ಸ್ವಾಮೀಜಿ, ವಕೀಲ ಬಂಧನ

ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸುತ್ತಿದ್ದಂತೆಯೇ ಆರೋಪಿ ಕಣ್ಣೂರು ಮಠದ ಮೃತ್ಯುಂಜಯಶ್ರೀ ಹಾಗೂ ಎ3 ಆರೋಪಿ ಮಹದೇವಯ್ಯ ಅವರನ್ನು ಪೊಲೀಸರು ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್ ಮಾಡಿದರು. ಇನ್ನು ಎ2 ಆರೋಪಿ ನೀಲಾಂಬಿಕೆಯನ್ನು ಬೆಂಗಳೂರಿನ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ಬಂಡೇಮಠದ ಸ್ವಾಮೀಜಿ ಮತ್ತು ಹನಿಟ್ರ್ಯಾಪ್ ಜಾಲ ಹೆಣೆದ ಕಣ್ಣೂರು ಮಠದ ಡಾ ಮೃತ್ಯುಂಜಯ ಸ್ವಾಮೀಜಿ ಪೂರ್ವಾಶ್ರಮದಲ್ಲಿ ಅಣ್ಣತಮ್ಮಂದಿರು. ಎರಡೂ ಮಠಗಳ ನಡುವೆ ಆಸ್ತಿ ವಿವಾದ ಇತ್ತು. ಈ ಹಿನ್ನೆಲೆಯಲ್ಲಿ ಹನಿಟ್ರ್ಯಾಪ್ ನಡೆದಿದೆ ಎಂದು ಪೊಲೀಸರು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ತನಿಖೆ ನಡೆಸಿದ್ದಾರೆ.

ಣ್ಣೂರು ಮಠದ ಮೃತ್ಯುಂಜಯ ಸ್ವಾಮೀಜಿ ಸೂಚನೆಯಂತೆ ನೀಲಾಂಬಿಕೆ ಅಲಿಯಾಸ್​​ ಚಂದು ಎನ್ನುವಾಕೆ ಬಸವಲಿಂಗ ಸ್ವಾಮೀಜಿ ಜೊತೆ ಕ್ಲೋಸ್ ಆಗಿ ಬಳಿಕ ಅವರೊಂದಿಗೆ ವಿಡಿಯೋ ಮಾಡಿಕೊಂಡು ಮೃತ್ಯುಂಜಯಶ್ರೀಗೆ ನೀಡಿದ್ದಾಳೆ. ಬಳಿಕ ಆ ವಿಡಿಯೋವನ್ನು ಮಹದೇವಯ್ಯ ಎನ್ನುವಾತ ಎಡಿಟ್ ಮಾಡಿ ಬಂಡೇಮಠದ ಸ್ವಾಮೀಜಿಗೆ ಕಳುಹಿಸಿ ಬ್ಲ್ಯಾಕ್ ಮೇಲ್ ಮಾಡಿದ್ದಾರೆ.

Published On - 5:19 pm, Sun, 30 October 22

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ