AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಕಸಾಯಿಖಾನೆಗೆ ಜಾನುವಾರು ಸಾಗಾಟ ವಾಹನದ ಮೇಲೆ ದಾಳಿ, ವಾಹನದಲ್ಲಿದ್ದ ವ್ಯಕ್ತಿ ನಿಗೂಢ ಸಾವು

ರಾಮನಗರದಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ಹಿಂದೂ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ನಿನ್ನೆ ನಡೆದಿತ್ತು. ಇದೀಗ ಘಟನೆ ನಡೆದ ಸ್ವಲ್ಪ ದೂರದಲ್ಲೇ ವಾಹನದಲ್ಲಿದ್ದ ವ್ಯಕ್ತಿಯ ಶವ ಪತ್ತೆಯಾಗಿದೆ.

ರಾಮನಗರ: ಕಸಾಯಿಖಾನೆಗೆ ಜಾನುವಾರು ಸಾಗಾಟ ವಾಹನದ ಮೇಲೆ ದಾಳಿ, ವಾಹನದಲ್ಲಿದ್ದ ವ್ಯಕ್ತಿ ನಿಗೂಢ ಸಾವು
ರಾಮನಗರದಲ್ಲಿ ಕಸಾಯಿಖಾನೆಗೆ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನದಲ್ಲಿದ್ದ ವ್ಯಕ್ತಿ ಅನುಮಾನಸ್ಪದವಾಗಿ ಸಾವು (ಸಾಂದರ್ಭಿಕ ಚಿತ್ರ)Image Credit source: istock
Rakesh Nayak Manchi
|

Updated on:Apr 01, 2023 | 2:43 PM

Share

ರಾಮನಗರ: ಕಸಾಯಿಖಾನೆಗೆ ಜಾನುವಾರು ಸಾಗಣೆ (Transportation of cattle to slaughterhouses) ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರ (Hindu activists) ದಾಳಿಗೆ ಹೆದರಿ ಪರಾರಿಯಾಗಿದ್ದ ವಾಹನದಲ್ಲಿದ್ದ ವ್ಯಕ್ತಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ (Suspicious death). ಮಂಡ್ಯ ಜಿಲ್ಲೆ ಮಳವಳ್ಳಿಯ ಇರ್ಗೀಷ್ ಪಾಷಾ (35) ಸಾವನ್ನಪ್ಪಿದ ವ್ಯಕ್ತಿ. ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಬಳಿ ಇರ್ಗೀಷ್ ಪಾಷಾ ಶವ ಪತ್ತೆಯಾಗಿದ್ದು, ಆಕ್ರೋಶಗೊಂಡ ಕುಟುಂಬಸ್ಥರು ಸಾತನೂರು ಠಾಣೆ ಬಳಿ ಪ್ರತಿಭಟನೆ ನಡೆಸಿ ಇರ್ಗೀಷ್ ಪಾಷಾ ಸಾವಿಗೆ ಪುನೀತ್ ಕೆರೆಹಳ್ಳಿ ಕಾರಣ ಎಂದು ಆರೋಪಿಸಿದ್ದಾರೆ. ಅಲ್ಲದೆ, ಕೂಡಲೇ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಕ್ಯಾಂಟರ್ ವಾಹನದಲ್ಲಿ ಇರ್ಗೀಷ್ ಪಾಷಾ ಎಂಬಾತ 16 ಜಾನುವಾರುಗಳನ್ನು ಕಸಾಯಿಖಾನೆಗೆ ಕೊಂಡೊಯ್ಯುತ್ತಿದ್ದನು. ಈ ವಿಚಾರ ತಿಳಿದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮತ್ತು ತಂಡ ವಾಹನದ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಭಯಬೀತನಾದ ಇರ್ಗೀಷ್ ಪಾಷಾ ವಾಹನ ಬಿಟ್ಟು ಪರಾರಿಯಾಗಿದ್ದು, ವಾಹನದಲ್ಲಿದ್ದ 16 ಜಾನುವಾರುಗಳನ್ನು ರಕ್ಷಿಸಲಾಗಿತ್ತು. ಜಾನುವಾರು ರಕ್ಷಣೆ ಸಂಬಂಧ ಸಾತನೂರು ಠಾಣೆಯಲ್ಲಿ ಕೇಸ್​ ದಾಖಲಾಗಿತ್ತು.

ಇದನ್ನೂ ಓದಿ: ಕಾಸರಗೋಡು: ರೊಚ್ಚಿಗೆದ್ದು ತಿವಿಯಿತು ಕಸಾಯಿಖಾನೆಗೆ ತಂದ ಎಮ್ಮೆ: ಯುವಕ ಸಾವು, 25 ಮಂದಿಗೆ ಗಾಯ

ಆದರೆ, ದಾಳಿ ನಡೆದ ಸ್ವಲ್ಪ ದೂರದಲ್ಲೇ ಇರುವ ಸಾತನೂರು ಗ್ರಾಮದಲ್ಲಿ ಇರ್ಗೀಷ್ ಪಾಷಾ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು, ಶವ ಕೂಡ ಪತ್ತೆಯಾಗಿದೆ. ಸದ್ಯ ಪಾಷಾ ಸಾವಿಗೆ ಪುನೀತ್ ಕೆರೆಹಳ್ಳಿ ಕಾರಣ ಎಂದು ಮೃತನ ಕುಟುಂಬಸ್ಥರು ಆರೋಪಿಸಲಾಗುತ್ತಿದ್ದು, ಬಂಧನಕ್ಕೆ ಆಗ್ರಹಿಸುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:43 pm, Sat, 1 April 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ