AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ಕಾನ್ಸ್‌ಟೇಬಲ್ ಶವ ಪತ್ತೆ

ರಾಮನಗರದ ದ್ಯಾವಸಂದ್ರದಿಂದ ಬೆಂಗಳೂರಿಗೆ ಬಂದು ಪೊಲೀಸ್ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಂಜುಶ್ರೀ ಅವರು ಕಳೆದ ಕೆಲ ದಿನಗಳಿಂದ ಕೆಲಸಕ್ಕೆ ಹಾಕರಾಗಿರಲಿಲ್ಲ. ರಜೆ ಹಾಕಿದ್ದರು. ಆದರೆ ಈಗ ಅವರ ಶವ ಮನೆಯಲ್ಲಿ ಪತ್ತೆಯಾಗಿದೆ. ದ್ಯಾವಸಂದ್ರದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ರಾಮನಗರ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ಕಾನ್ಸ್‌ಟೇಬಲ್ ಶವ ಪತ್ತೆ
ಮಂಜುಶ್ರೀ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Feb 17, 2024 | 10:46 AM

Share

ರಾಮನಗರ, ಫೆ.17: ಜಿಲ್ಲೆಯ ಹಾರೋಹಳ್ಳಿ ತಾಲೂಕಿನ‌ ದ್ಯಾವಸಂದ್ರದ ಮನೆಯಲ್ಲಿ ನೇಣು (Hanging) ಬಿಗಿದ ಸ್ಥಿತಿಯಲ್ಲಿ ಮಹಿಳಾ ಕಾನ್ಸ್‌ಟೇಬಲ್ ಶವ (Dead Body) ಪತ್ತೆಯಾಗಿದೆ. ಮಂಜುಶ್ರೀ (27) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2020-21‌ರಿಂದ ಪೊಲೀಸ್ ಸಿಬ್ಬಂದಿಯಾಗಿ ಕೆಲಸ‌ ಮಾಡುತ್ತಿದ್ದ ಮಂಜುಶ್ರೀ ಬೆಂಗಳೂರಿನ ಮೈಕೋ ಲೇಔಟ್​ನಲ್ಲಿ ಪೊಲೀಸ್ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಶಿವಾಜಿನಗರಕ್ಕೆ ನಿಯೋಜನೆ ಆಗಿದ್ದರು. ಕೆಲ ದಿನಗಳಿಂದ ಕೆಲಸಕ್ಕೆ ರಜೆ ಹಾಕಿದ್ದ ಮಂಜುಶ್ರೀ ನಿನ್ನೆ ರಾತ್ರಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮರಣೋತ್ತರ ಪರೀಕ್ಷೆಗೆ ಶವ ರವಾನಿಸಲಾಗಿದೆ. ಹಾರೋಹಳ್ಳಿಯ ದಯಾನಂದ್ ಆಸ್ಪತ್ರೆಯಲ್ಲಿ‌ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.

ಬಾವಿಗೆ ಹಾಕಿ ಮಹಿಳೆ ಆತ್ಮಹತ್ಯೆ

ಇನ್ನು ಮತ್ತೊಂದೆಡೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಹೊನ್ನಟಗಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಲಿಂಗಸೂಗೂರು ಮೂಲದ ಮಹಿಳೆ ದೇವಮ್ಮ(35) ಮೃತ ದುರ್ದೈವಿ. ಗ್ರಾಮದ ಬಸನಗೌಡ ಮಾಲಿ ಪಾಟೀಲ್ ಅನ್ನೋರ ಜಮೀನು ಕೆಲಸಕ್ಕೆ ಬಂದಿದ್ದ ಮಹಿಳೆ, ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಮತ್ತೊಬ್ಬ ಮಹಿಳೆ ದುರ್ಗಮ್ಮ ಅನ್ನೋರ ಜೊತೆ ಜಗಳವಾಡಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಜಮೀನಿನಲ್ಲಿ ಇದ್ದ ಬಾವಿಗೆ ಹಾರಿ ದೇವಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಮೀನಿನ ಶೆಡ್ ನಲ್ಲಿ ಮೂವರು ಮಕ್ಕಳನ್ನ ಬಿಟ್ಟು ಬಳಿಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಬ್ಬೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಬೆಂಗಳೂರು: ಮಹಿಳಾ ಪೊಲೀಸ್ ಮೊಬೈಲ್ ಕಳ್ಳನ ಹಿಡಿದ ಪ್ರಕರಣಕ್ಕೆ ಟ್ವಿಸ್ಟ್, ಘಟನೆ ಹಿಂದಿದೆ ಪ್ರೇಮ್ ಕಹಾನಿ!

ಪರೀಕ್ಷೆ ಭೀತಿಯಿಂದ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆ ಭೀತಿಯಿಂದ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಮಣಿಪಾಲ ಮಾಹೆ ವಿವಿಯಲ್ಲಿ ನಡೆದಿದೆ. ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಸತ್ಯಂ ಸುಮನ್(19) ಪರೀಕ್ಷೆ ನಡೆಯುತ್ತಿದ್ದ ವೇಳೆಯಲ್ಲೇ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗಾಬರಿಯಿಂದ ವಿದ್ಯಾರ್ಥಿಗಳು ಓಡಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅನೈತಿಕ ಸಂಬಂಧದ ಶಂಕೆ ಕೊಲೆ

ಹಾವೇರಿ ತಾಲೂಕಿನ ನೆಲ್ಲೋಗಲ್ಲ ತಾಂಡಾದಲ್ಲಿ ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ತಮ್ಮನಿಗೆ ಚೂರಿ ಇರಿದು ಅಣ್ಣ ಕೊಲೆಗೈದ ಘಟನೆ ನಡೆದಿದೆ. ತನ್ನ ಹೆಂಡತಿ ಜೊತೆಯೇ ತಮ್ಮ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಸಂಶಯದಿಂದ ತಮ್ಮನ ಎದೆಗೆ ಚೂರಿ ಹಾಕಿ ಕೊಲೆ ಮಾಡಿಲಾಗಿದೆ. ತಮ್ಮ ಹನುಮಂತಪ್ಪ ಲಮಾಣಿ (42) ಕೊಲೆಯಾದ ಮೃತ ದುರ್ದೈವಿ. ಶಂಕ್ರಪ್ಪ ಲಮಾಣಿ(55) ತಮ್ಮನಿಗೆ ಚೂರಿ ಇರಿದು ಕೊಲೆಗೈದ ಅಣ್ಣ.

ಆರೋಪಿ ಶಂಕ್ರಪ್ಪ ಕುಡಿದು ಬಂದು ಮನೆಯಲ್ಲಿ ಜಗಳಮಾಡುತ್ತಿದ್ದ ಈ ವೇಳೆ ಜಗಳ ವಿಕೋಪಕ್ಕೆ ತಿರುಗಿ ತಮ್ಮ ಹನುಮಂತಪ್ಪನಿಗೆ ಚೂರಿ ಇರಿದಿದ್ದಾನೆ. ಚಿಕಿತ್ಸೆ ಫಲಿಸದೆ ಸರ್ಕಾರಿ ಆಸ್ಪತ್ರೆಯಲ್ಲಿ ಹನುಮಂತಪ್ಪ ಲಮಾಣಿ ಮೃತಪಟ್ಟಿದ್ದಾರೆ. ತಮ್ಮನನ್ನು ಕೊಲೆಗೈದ ಅಣ್ಣ ಶಂಕ್ರಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ