AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಹರಿದು ಶಾಲಾ ಮಕ್ಕಳಿಬ್ಬರು ಸಾವು: 5ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

Ramanagara News: ಟ್ಯೂಷನ್ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಬೊಲೆರೊ ಕಾರು ಹರಿದು ಶಾಲಾ ಮಕ್ಕಳಿಬ್ಬರು ಸಾವನ್ನಪ್ಪಿದ್ದು, 5ಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಳಾಗಿರುವಂತಹ ಘಟನೆ ರಾಮನಗರದ ಗೌಡರದೊಡ್ಡಿ ಬಳಿ ನಡೆದಿದೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಹರಿದು ಶಾಲಾ ಮಕ್ಕಳಿಬ್ಬರು ಸಾವು: 5ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ
ಪ್ರಾತಿನಿಧಿಕ ಚಿತ್ರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ | Edited By: |

Updated on:Aug 09, 2023 | 9:43 PM

Share

ರಾಮನಗರ, ಆಗಸ್ಟ್​ 09: ಕಾರು ಹರಿದು ಇಬ್ಬರು ಶಾಲಾ ಮಕ್ಕಳ ಸಾವನ್ನಪ್ಪಿದ್ದು (death) , ಐದಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಳಾಗಿರುವಂತಹ ಘಟನೆ ರಾಮನಗರದ ಲಕ್ಷ್ಮೀಪುರ ಬಳಿ ನಡೆದಿದೆ. ಶಾಲಿನಿ(8), ದರ್ಶನ್ (5) ಮೃತ ದುರ್ದೈವಿಗಳು. ಉಳಿದ ಮಕ್ಕಳಿಗೆ ರಾಮಚಂದ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಟ್ಯೂಷನ್ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಾಮನಗರ ಗ್ರಾಮಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಗೋವುಗಳನ್ನು ಕದ್ದು ಜಾನುವಾರು ‌ಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಕಳ್ಳ ಅಂದರ್

ಬೀದರ್‌: ಜೈಭೀಮ್‌ ನಗರದಲ್ಲಿ ಮನೆ ಮುಂದೆ ಕಟ್ಟಿಹಾಕಿದ್ದ ಜಾನುವಾರು ಕಳ್ಳತನ ಮಾಡಿ ಸಂತೆಯಲ್ಲಿ ಮಾರಾಟ ಮಾಡಿದ್ದ ಓರ್ವ ಕಳ್ಳನನ್ನು ಬಂಧಿಸಲಾಗಿದೆ. ಆರೋಪಿಯಿಂದ 70 ಸಾವಿರ ರೂ. ನಗದು, 2 ಗೂಡ್ಸ್ ಆಟೋ ಜಪ್ತಿ ಮಾಡಲಾಗಿದೆ. ಬೀದರ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸಿನಿಮೀಯ ರೀತಿಯಲ್ಲಿ ಜ್ಯೋತಿಷಿ ಪುತ್ರನ ಕಿಡ್ನಾಪ್ ಮಾಡಿದ ಯುವಕ: 5 ಲಕ್ಷ ರೂ ಡಿಮ್ಯಾಂಡ್, ಬಂಧನ

ಬೈಕ್ ಸ್ಕಿಡ್ ಆಗಿ ಬಿದ್ದು ವ್ಯಕ್ತಿ ಸಾವು

ಧಾರವಾಡ: ಮುಮ್ಮಿಗಟ್ಟಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೈಕ್ ಸ್ಕೀಡ್ ಆಗಿ ಬಿದ್ದು ಸವಾರ ಮೃತಪಟ್ಟಿರುವಂತಹ ಘಟನೆ ನಡೆದಿದೆ. ದುಬ್ಬನಮರಡಿ ಗ್ರಾಮದ ನಿವಾಸಿ ಮೌಲಾಸಾಬ್(58) ಮೃತ ಬೈಕ್​ ಸವಾರ. ಧಾರವಾಡ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮಂಗಳೂರು: ಮೊಬೈಲ್ ಅಂಗಡಿಗೆ ನುಗ್ಗಿ ಯುವಕರ ಗುಂಪಿನಿಂದ ಮಾಲೀಕನಿಗೆ ಥಳಿತ; ಇಬ್ಬರು ಆರೋಪಿಗಳು ಅಂದರ್​

ಹಾಸನದಲ್ಲಿ ಹಾಡಹಗಲೇ ಗ್ರಾನೈಟ್ ಉದ್ಯಮಿ ಬರ್ಬರ ಹತ್ಯೆ

ಹಾಸನ: ಹಾಡಹಗಲೇ ಗ್ರಾನೈಟ್ ಉದ್ಯಮಿ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ಹಾಸನ ನಗರದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಮಾಜಿ ಸಚಿವ ಹೆಚ್.ಡಿ.ರೇವಣ್ಣನ ಅತ್ಯಾಪ್ತ ಕೃಷ್ಣೇಗೌಡ(53) ಮೃತ ವ್ಯಕ್ತಿ. ಕಾರಿನಲ್ಲಿ ತೆರಳುತ್ತಿದ್ದ ಕೃಷ್ಣೇಗೌಡನನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು ಗ್ರಾನೈಟ್ ಫ್ಯಾಕ್ಟರಿ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಘಟನಾ ಸ್ಥಳಕ್ಕೆ ಎಸ್​ಪಿ ಹರಿರಾಮ್ ಶಂಕರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಸ್ಥಳಕ್ಕೆ ಹಾಸನ ಕ್ಷೇತ್ರದ JDS ಶಾಸಕ ಸ್ವರೂಪ್ ಪ್ರಕಾಶ್ ಕೂಡ ಭೇಟಿ ನೀಡಿದ್ದರು. ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:32 pm, Wed, 9 August 23

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ