ರಾಮನಗರ: ಅಪ್ರಾಪ್ತ ಪತ್ನಿಯನ್ನು ಕೊಂದು ರಾತ್ರಿಯಿಡೀ ಶವದ ಜತೆ ಮಲಗಿದ ಪತಿ

ಪ್ರೀತಿಸಿ ಮದುವೆ ಆಗಿದ್ದ ಅಪ್ರಾಪ್ತಳನ್ನು ಕೊಂದು ರಾತ್ರಿಯಿಡೀ ಶವದ ಜೊತೆ ಮಲಗಿದ ಅಮಾನುಷ ಘಟನೆ ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆ(Kanakapura Rural Police Station)ವ್ಯಾಪ್ತಿಯಲ್ಲಿ ನಡೆದಿದೆ. ಇದೀಗ ಆರೋಪಿಯನ್ನ ಬಂಧಿಸಿ ಜೈಲಿಗಟ್ಟಿರುವ ಕನಕಪುರ ಗ್ರಾಮಾಂತರ ಪೊಲೀಸರು, ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನ ಜೈಲಿಗೆ ಅಟ್ಟಿದ್ದಾರೆ.

ರಾಮನಗರ: ಅಪ್ರಾಪ್ತ ಪತ್ನಿಯನ್ನು ಕೊಂದು ರಾತ್ರಿಯಿಡೀ ಶವದ ಜತೆ ಮಲಗಿದ ಪತಿ
ಅಪ್ರಾಪ್ತ ಪತ್ನಿ ಕೊಂದ ಪತಿ
Edited By: ಕಿರಣ್ ಹನುಮಂತ್​ ಮಾದಾರ್

Updated on: Apr 01, 2024 | 5:12 PM

ರಾಮನಗರ, ಏ.01: ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆ(Kanakapura Rural Police Station)ವ್ಯಾಪ್ತಿಯಲ್ಲಿ ಪತಿಯೇ ಅಪ್ರಾಪ್ತಳನ್ನು ಕೊಂದು ರಾತ್ರಿಯಿಡೀ ಶವದ ಜೊತೆ ಮಲಗಿದ ಅಮಾನುಷ ಘಟನೆ ನಡೆದಿದೆ. ಹೌದು, ಪತ್ನಿಯ ಶೀಲ ಶಂಕಿಸಿ ಹತ್ಯೆ ಮಾಡಲಾಗಿದೆ. ಆರೋಪಿ 2021 ರಲ್ಲಿ 13 ವರ್ಷದ ಅಪ್ರಾಪ್ತೆಯನ್ನು ಪ್ರೀತಿಸಿ ಮದುವೆ ಆಗಿದ್ದ. ಇವರಿಗೆ ಒಂದು ಮಗು ಕೂಡ ಇದೆ. ಕೆಲ ದಿನಗಳಿಂದ ಅಪ್ರಾಪ್ತೆ ಮೇಲೆ ಅನುಮಾನಗೊಂಡಿದ್ದ ಆರೋಪಿ, ಮೊದನಿನಂತೆ ಲೈಂಗಿಕವಾಗಿ ತೊಡಗುತ್ತಿಲ್ಲ ಎಂಬ ಕಾರಣಕ್ಕೆ ಜಗಳ ಶುರುವಾಗಿತ್ತು.

ಕತ್ತು ಹಿಸುಕಿ ಅಪ್ರಾಪ್ತಳ ಕೊಲೆ ಮಾಡಿದ್ದ ಪತಿ

ಹೀಗೆ ಶುರುವಾದ ಜಗಳ ಅತಿರೇಕಕ್ಕೆ ಹೋಗಿ ಕಳೆದ ತಿಂಗಳ ಮಾ. 27‌ರ ರಾತ್ರಿಯಂದು ಅಪ್ರಾಪ್ತೆ ಪತ್ನಿಯನ್ನ ಕತ್ತು ಹಿಸುಕಿ ಹತ್ಯೆ ಮಾಡಿದ್ದ. ರಾತ್ರಿ ಇಡೀ ಶವದ ಜೊತೆಯೇ ಮಲಗಿದ ಆತ, ಬೆಳಿಗ್ಗೆ ಎದ್ದು ತಾನೇ ಅಪ್ರಾಪ್ತೆ ಶವವನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದನು. ಬಳಿಕ ಜ್ವರ ಬಂದಿದೆ, ಹುಷಾರಿಲ್ಲ ಆಸ್ಪತ್ರೆ ಗೆ ಬನ್ನಿ ಕುಟುಂಬಸ್ಥರಿಗೆ ಕರೆದಿದ್ದ. ಶವ ಪರೀಕ್ಷೆ ಬಳಿಕ ಅನುಮಾನ ಗೊಂಡ ವೈದ್ಯರು, ಕೂಡಲೇ ಪೊಲೀಸರಿಗೆ ಮಾಹಿತಿ ತಿಳಿಸಿದ್ದರು.

ಇದನ್ನೂ ಓದಿ:ಕೋಲಾರ: ವರ್ಷದ ಹಿಂದಿನ ಮಹಿಳೆಯ ಕೊಲೆ ಪ್ರಕರಣ ಸುಖಾಂತ್ಯ! ಹತ್ಯೆ ಮಾಡಿದ್ದ ಆರೋಪಿ ಅಂದರ್​ 

ಆರೋಪಿ ಹಾವಾಭಾವ ಕಂಡು ತನಿಖೆ ನಡೆಸಿದ ಕನಕಪುರ ಗ್ರಾಮಾಂತರ ಪೊಲೀಸರು, ‘ವಿಚಾರಣೆ ವೇಳೆ ತಾನೇ ಹತ್ಯೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಇದೀಗ ಆರೋಪಿಯನ್ನ ಬಂಧಿಸಿ ಜೈಲಿಗಟ್ಟಿರುವ ಕನಕಪುರ ಗ್ರಾಮಾಂತರ ಪೊಲೀಸರು, ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನ ಜೈಲಿಗೆ ಅಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us