ರಾಮನಗರ: 12 ವರ್ಷದ ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ವೃದ್ಧನಿಂದ ಅತ್ಯಾಚಾರ: ಸ್ಥಳೀಯರಿಂದ ಧರ್ಮದೇಟು!

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 65 ವರ್ಷದ ವೃದ್ಧನಿಂದ 12 ವರ್ಷದ ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವಂತಹ ಘಟನೆ ನಡೆದಿದೆ. ಮಾತನಾಡಲು ಬಾರದ ಕಾರಣ ಯಾರಿಗೆ ಹೇಳುತ್ತಾಳೆ ಎಂದು ಬಾಲಕಿಯನ್ನು ಮನೆಯ ಹಿತ್ತಲಿಗೆ  ಕರೆದುಕೊಂಡು ಹೋಗಿ ಕೃತ್ಯವೆಸಗಲಾಗಿದೆ.

ರಾಮನಗರ: 12 ವರ್ಷದ ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ವೃದ್ಧನಿಂದ ಅತ್ಯಾಚಾರ: ಸ್ಥಳೀಯರಿಂದ ಧರ್ಮದೇಟು!
ಕುದೂರು ಪೊಲೀಸ್ ಠಾಣಾ
Edited By:

Updated on: Jan 10, 2024 | 3:26 PM

ರಾಮನಗರ, ಜನವರಿ 10: 65 ವರ್ಷದ ವೃದ್ಧನಿಂದ 12 ವರ್ಷದ ಮಾನಸಿಕ ಅಸ್ವಸ್ಥ ಬಾಲಕಿ (girl) ಮೇಲೆ ಅತ್ಯಾಚಾರ ಮಾಡಿರುವಂತಹ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಾಕಲೇಟ್ ಕೊಡಿಸುವುದಾಗಿ ಹೇಳಿ ಬಟ್ಟೆ ಬಿಚ್ಚಿಸಿದ ಆರೋಪ ಮಾಡಲಾಗಿದೆ. ಮಾತನಾಡಲು ಬಾರದ ಕಾರಣ ಯಾರಿಗೆ ಹೇಳುತ್ತಾಳೆ ಎಂದು ಬಾಲಕಿಯನ್ನು ಮನೆಯ ಹಿತ್ತಲಿಗೆ  ಕರೆದುಕೊಂಡು ಹೋಗಿ ಕೃತ್ಯವೆಸಗಲಾಗಿದೆ.

ತಾಯಿ‌ ಮನೆಗೆ ವಾಪಾಸ್ ಆದಾಗ ಬಾಲಕಿ ಅಳುತ್ತಿದ್ದಳು. ಯಾಕೆ ಅಳುತ್ತಿದ್ದೀಯಾ ಅಂತ ಕೇಳಿದಾಗ, ಅಳುತ್ತಲೇ ತನ್ನ ಗುಪ್ತಾಂಗ ತೋರಿಸಿದ್ದಾಳೆ. ಯಾರು ಮಾಡಿದ್ದು ಅಂತ ಕೇಳಿದಾಗ ಸನ್ನೆ ಮಾಡಿ ಅಜ್ಜ‌ನ ಬಗ್ಗೆ ಬಾಲಕಿ ಹೇಳಿದ್ದಾಳೆ. ಕೂಡಲೇ ಅಜ್ಜನನ್ನು ಹಿಡಿದ ಸ್ಥಳೀಯರು ಧರ್ಮದೇಟು ನೀಡಿದ್ದಾರೆ. ಬಳಿಕ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವುದಾಗಿ ಅಜ್ಜ ಒಪ್ಪಿಕೊಂಡಿದ್ದಾರೆ. ಸರ್ಕಾರಿ ಆಸ್ಪತ್ರೆ ಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಿದ್ದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.

ಉಪ್ಪಿನ ಕಾಯಿ ಕೇಳುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ

ದಾವಣಗೆರೆ: ಗ್ರಾಮಾಂತರ ಪೊಲೀಸ್ ಠಾಣೆಯ ಗ್ರಾಮಯೊಂದರಲ್ಲಿ‌ 48 ವರ್ಷದ ಮಂಜಪ್ಪ ಡಿ.ಎಚ್​ ಎನ್ನುವ ವ್ಯಕ್ತಿ ಗ್ರಾಮದಲ್ಲಿ ಆ ಮಹಿಳೆಯನ್ನ ಕೆಟ್ಟ ದೃಷ್ಠಿಯಲ್ಲಿ ನೋಡುತ್ತಲೇ ಇದ್ದ. ಇತ್ತೀಚಿಗೆ ಸಂತ್ರಸ್ಥ ಮಹಿಳೆ ತನ್ನ ಮನೆಯಲ್ಲಿ ಮನೆ ಗೆಲಸದಲ್ಲಿ ತೊಡಗಿದ್ದಳು. ಆ ವೇಳೆ ಉಪ್ಪಿನಕಾಯಿ ಕೇಳುವ ನೆಪದಲ್ಲಿ ಅವರ ಮನೆಗೆ ಹೋಗಿದ್ದ. ಕಾರಣ ಸಂತ್ರಸ್ಥ ಮಹಿಳೆಯ ತಂದೆ ಉಪ್ಪಿನ ಕಾಯಿ ಮಾರುತ್ತಿದ್ದರು.

ಇದನ್ನೂ ಓದಿ: ‘ನಾನು ನಿದ್ರೆಯಿಂದ ಎದ್ದೇಳುವ ಮುಂಚೆನೇ ಮಗು ಮೃತಪಟ್ಟಿತ್ತು’: ಸ್ಫೋಟಕ ಅಂಶ ಬಾಯ್ಬಿಟ್ಟ ಸಿಇಒ

ನಮ್ಮ ಮನೆಯಲ್ಲಿ ಉಪ್ಪಿನ ಕಾಯಿ ಇಲ್ಲಾ ತಮ್ಮ ತಂದೆ ಉಪ್ಪಿನ ಕಾಯಿ ಮಾರಾಟ ಮಾಡುತ್ತಾನೆ ಎಂದರು ಕೇಳದೆ ಮನೆ ಪ್ರವೇಶ ಮಾಡಿದ್ದ. ಅತ್ಯಾಚಾರಕ್ಕೆ ಯತ್ನಿಸಿದ್ದು, ಶಕ್ತಿಮಿರಿ ಸಂತ್ರಸ್ಥ ಮಹಿಳೆ ತಡೆದಿದ್ದಳು. ಆದರೆ ಕೆನ್ನೆ ಕಚ್ಚಿ ಗಂಭೀರ ಗಾಯಗೊಳಿಸಿದ್ದ. ಮಹಿಳೆಯ ಚೀರಾಟಕ್ಕೆ ಅಕ್ಕಪಕ್ಕದವರು ಸೇರಿದ್ದರು. ಅಷ್ಟರಲ್ಲಿ ಬಿಟ್ಟು ಓಡಿ ಹೋಗಿದ್ದ. ಆರೋಪಿ ಬಂಧನಕ್ಕೆ ಆಗ್ರಹಿಸಿ ಹತ್ತಾರು ಮಹಿಳೆಯರಿಂದ ಎಸ್ಪಿ‌ಕಚೇರಿ ಮುಂದೆ ಪ್ರತಿಭಟನೆ ಮಾಡಿದ್ದರು.

ಮತ್ತಷ್ಟು ಕೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us