AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rape: ಮದುವೆಯಾಗುವ ಆಮಿಷವೊಡ್ಡಿ 14 ವರ್ಷದ ಬಾಲಕಿ ಮೇಲೆ 2 ತಿಂಗಳಿಂದ ಅತ್ಯಾಚಾರ

8ನೇ ತರಗತಿಯ ಬಾಲಕಿಗೆ ಆಕೆಯನ್ನು ಮದುವೆಯಾಗುವ ಭರವಸೆ ನೀಡಿದ್ದ ಆ ಯುವಕ ಎರಡು ತಿಂಗಳ ಕಾಲ ಆಕೆಯ ಮೇಲೆ ಪದೇ ಪದೇ ಅತ್ಯಾಚಾರವೆಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Rape: ಮದುವೆಯಾಗುವ ಆಮಿಷವೊಡ್ಡಿ 14 ವರ್ಷದ ಬಾಲಕಿ ಮೇಲೆ 2 ತಿಂಗಳಿಂದ ಅತ್ಯಾಚಾರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 14, 2022 | 3:08 PM

Share

ಗುರುಗ್ರಾಮ: ಹರಿಯಾಣದ ಗುರುಗ್ರಾಮದಲ್ಲಿ (Gurugram) 14 ವರ್ಷದ ಬಾಲಕಿಯ ಮೇಲೆ ಆಕೆಯ ಪಕ್ಕದ ಮನೆಯ ವ್ಯಕ್ತಿಯೊಬ್ಬ ಎರಡು ತಿಂಗಳ ಕಾಲ ಪದೇ ಪದೇ ಅತ್ಯಾಚಾರವೆಸಗಿರುವ (Rape Case) ಘಟನೆ ಬೆಳಕಿಗೆ ಬಂದಿದೆ. ಅತ್ಯಾಚಾರದ ಆರೋಪಿಯು ನಾಲ್ಕು ದಿನಗಳ ಹಿಂದೆ 14 ವರ್ಷದ ಬಾಲಕಿಯನ್ನು ಅಪಹರಿಸಿದ್ದು, ಆಕೆಯನ್ನು ಬಚ್ಚಿಟ್ಟಿದ್ದ. ಆಕೆಯ ಕುಟುಂಬಸ್ಥರು ಆ ದಿನ ತಡರಾತ್ರಿ ದೆಹಲಿ-ಜೈಪುರ ಹೆದ್ದಾರಿಯ ಬಿಲಾಸ್‌ಪುರ ಚೌಕ್ ಬಳಿ ಆಕೆಯನ್ನು ಪತ್ತೆಹಚ್ಚಿದ್ದಾರೆ. ಏನಾಯಿತೆಂದು ಮನೆಯವರು ಒತ್ತಾಯದಿಂದ ಕೇಳಿದಾಗ ಆಕೆ 2 ತಿಂಗಳಿನಿಂದ ತನ್ನ ಮೇಲೆ ನಡೆಯುತ್ತಿದ್ದ ಲೈಂಗಿಕ ದೌರ್ಜನ್ಯದ ಬಗ್ಗೆ ಮಾಹಿತಿ ನೀಡಿದ್ದಾಲೆ.

2 ತಿಂಗಳಿನಿಂದ ತನ್ನ ಮೇಲೆ ಅತ್ಯಾಚಾರ ನಡೆಸಲಾಗುತ್ತಿದೆ ಎಂಬ ವಿಷಯವನ್ನು ಆ ಬಾಲಕಿ ತನ್ನ ಕುಟುಂಬ ಸದಸ್ಯರಿಗೆ ಹೇಳಿದ್ದಾಳೆ. ಬಳಿಕ, ಆಕೆಯ ತಂದೆ ನೀಡಿದ ದೂರಿನ ಮೇರೆಗೆ ಬಿಲಾಸ್‌ಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: Gang Rape: ಕಬ್ಬಿನ ಗದ್ದೆಯಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ; ಅಕ್ಕನಿಂದಲೇ ಮಾಸ್ಟರ್​ ಪ್ಲಾನ್!

ಆಕೆಯ ತಂದೆ ನೀಡಿದ ದೂರಿನ ಪ್ರಕಾರ, ಆರೋಪಿಯು ಬಿಲಾಸ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಹಳ್ಳಿಯೊಂದರಲ್ಲಿ ಹುಡುಗಿಯ ಪಕ್ಕದ ಮನೆಯಲ್ಲೇ ವಾಸಿಸುತ್ತಿದ್ದ. 8ನೇ ತರಗತಿಯ ಬಾಲಕಿಗೆ ಆಕೆಯನ್ನು ಮದುವೆಯಾಗುವ ಭರವಸೆ ನೀಡಿದ್ದ ಆ ಯುವಕ ಎರಡು ತಿಂಗಳ ಕಾಲ ಆಕೆಯ ಮೇಲೆ ಪದೇ ಪದೇ ಅತ್ಯಾಚಾರವೆಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಜುಲೈ 8ರಂದು ಆ ಯುವಕ ನನ್ನ ಮಗಳನ್ನು ಅಪಹರಿಸಿದ್ದ. ತಡರಾತ್ರಿ ಆಕೆಯನ್ನು ಪತ್ತೆ ಹಚ್ಚಿ ಮನೆಗೆ ಕರೆತಂದಿದ್ದೇವೆ. ಅದರ ಮಾರನೇ ದಿನ ಆಕೆ ಅಲ್ಲಿಯವರೆಗೂ ನಡೆದ ಘಟನೆಯನ್ನು ಹೇಳಿದ್ದು, ಆರೋಪಿಗಳು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಕುಟುಂಬದ ಸದಸ್ಯರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ತಿಳಿಸಿದ್ದಾಳೆ ಎಂದು ಬಾಲಕಿಯ ತಂದೆ ದೂರಿನಲ್ಲಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ