AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಬಾಲಕಿಯನ್ನು ರೇಪ್‌ ಮಾಡಿ ಕೊಲೆ: 24 ಗಂಟೆಗಳಲ್ಲೇ ಆರೋಪಿಯನ್ನು ಬಂಧಿಸಿದ ಖಾಕಿಗೆ 1 ಲಕ್ಷ ರೂ. ಬಹುಮಾನ

15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಲಬುರಗಿ ಬಾಲಕಿಯನ್ನು ರೇಪ್‌ ಮಾಡಿ ಕೊಲೆ: 24 ಗಂಟೆಗಳಲ್ಲೇ ಆರೋಪಿಯನ್ನು ಬಂಧಿಸಿದ ಖಾಕಿಗೆ 1 ಲಕ್ಷ ರೂ. ಬಹುಮಾನ
Four people died due to electrocution when they went to install the pump motor in the dam kannada National News
TV9 Web
| Edited By: |

Updated on:Nov 02, 2022 | 10:52 PM

Share

ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಗ್ರಾಮವೊಂದರಲ್ಲಿ 9 ನೇ ತರಗತಿಯಲ್ಲಿ ಓದುತ್ತಿದ್ದ 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ನಂತರ ಕೊಲೆ ಮಾಡಿದ ಪ್ರಕರಣವನ್ನು ಆಳಂದ ಪೊಲೀಸರು 24 ಗಂಟೆಗಳಲ್ಲಿ ಭೇದಿಸಿದ್ದಾರೆ. ನಿನ್ನೆ (ನ.1) ಮಧ್ಯಾಹ್ನ ಘಟನೆ ನಡೆದಿದೆ. ಪ್ರಕರಣವನ್ನು ಭೇದಿಸಲು ಕಲಬುರಗಿ ಎಸ್ಪಿ ಇಶಾ ಪಂತ್ ವಿಶೇಷ ತಂಡವನ್ನು ರಚಿಸಿದರು. ಈ ವಿಶೇಷ ತಂಡ ಕೆಲ ಬಾಲಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಬಾಲಕಿ ವಾಸವಿದ್ದ ಗ್ರಾಮದ 16 ವರ್ಷದ ಬಾಲಕ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾಗಿ ತಿಳಿದು ಬಂದಿದೆ. ಸದ್ಯ ಕೃತ್ಯ ನಡೆಸಿದ ಆರೋಪಿಯನ್ನು ಆಳಂದ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪೊಲೀಸರು ಪ್ರಕರಣ ನಡೆದು 24 ಗಂಟೆ ಒಳಗಾಗಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕುರಿತು ಟಿವಿ9ನೊಂದಿಗೆ ಮಾತಾನಡಿದ ಎಸ್​​ಪಿ ಇಶಾ ಪಂತ್ ಪ್ರಕರಣ ಭೇದಿಸಿದ ಸಿಬ್ಬಂದಿಗೆ 1ರೂ ಲಕ್ಷ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಇನ್ನೂ ಶೀಘ್ರದಲ್ಲೇ ಕೋರ್ಟ್​ಗೆ ಚಾರ್ಜ್​ಶೀಟ್ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ. ಪೊಲೀಸರ ಕಾರ್ಯಕ್ಕೆ ಜನರು ಫಿದಾ ಆಗಿದ್ದು, ಅಭಿನಂದನೆ ತಿಳಿಸುತ್ತಿದ್ದಾರೆ.

ಘಟನೆ ಹಿನ್ನೆಲೆ

ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಗ್ರಾಮವೊಂದರಲ್ಲಿ ಇದೇ ನವಂಬರ್ 1 ರಂದು, 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿತ್ತು. ಆಳಂದ ತಾಲೂಕಿನ ಗ್ರಾಮವೊದರಲ್ಲಿ ಸಂಬಂಧಿಗಳ ಮನೆಯಲ್ಲಿದ್ದ ಬಾಲಕಿ, ಗ್ರಾಮದಲ್ಲಿರುವ ಪ್ರೌಢಶಾಲೆಯಲ್ಲಿ 9 ನೇ ತರಗತಿಯಲ್ಲಿ ಓದುತ್ತಿದ್ದಳು. ಇದೇ ನವಂಬರ್ 1 ರಂದು, ಮಧ್ಯಾಹ್ನ 3 ಗಂಟೆ ಸಮಯದಲ್ಲಿ, ಬಹಿರ್ದೆಸೆಗೆ ಅಂತ ಗ್ರಾಮದ ಹೊರವಲಯಯಕ್ಕೆ ಬಾಲಕಿ ಹೋಗಿದ್ದಳು. ಈ ಸಂದರ್ಭದಲ್ಲಿ ಬಾಲಕಿಯನ್ನು ಕಬ್ಬಿನ ಗದ್ದೆಗೆ ಕರೆದಕೊಂಡು ಹೋಗಿ, ಬಾಲಕಿ ಮೇಲೆ ಅತ್ಯಾಚಾರ ಮಾಡಿ ನಂತರ ಆಕೆಯದ್ದೇ ವೇಲ್ ನಿಂದ ಕತ್ತು ಬಿಗಿದು ಕೊಲೆ ಮಾಡಲಾಗಿತ್ತು. ಇನ್ನು ಬಹಳ ಹೊತ್ತಾದರೂ, ಬಾಲಕಿ ಮನೆಗೆ ಬಾರದೇ ಇದ್ದಾಗ, ಬಾಲಕಿಯನ್ನು ಕುಟುಂಬದವರು ಹುಡುಕಾಡಿದ್ದಾರೆ. ಬಾಲಕಿಯ ಚಪ್ಪಲಿಗಳು ಕಬ್ಬಿನ ಗದ್ದೆಯಲ್ಲಿ ಬಿದ್ದಿರೋದನ್ನು ನೋಡಿ, ಕಬ್ಬಿನ ಗದ್ದೆಯಲ್ಲಿ ಹುಡುಕಾಡಿದಾಗ, ನಿನ್ನೆ ರಾತ್ರಿ 7 ಗಂಟೆ ಸಮಯದಲ್ಲಿ, ಬಾಲಕಿಯ ಶವ ಪತ್ತೆಯಾಗಿತ್ತು.

ಬಾಲಕಿಯ ದೇಹದ ವಿವಿಧಡೆ ತೆರಚಿದ ಗಾಯಗಳಾಗಿದ್ದು, ಬಾಲಕಿಯ ಮೇಲೆ ಅತ್ಯಾಚಾರ ಮಾಡಿ, ನಂತರ ಕೊಲೆ ಮಾಡಿರೋದು ಗೊತ್ತಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಆಳಂದ ಠಾಣೆಯ ಪೊಲೀಸರು, ಘಟನೆ ನೆಡದ 24 ಗಂಟೆಯಲ್ಲಿಯೇ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದುರ್ದೈವದ ಸಂಗತಿಯಂದ್ರೆ, ಅತ್ಯಾಚಾರ ಮಾಡಿ ಕೊಲೆ ಮಾಡಿದ್ದು ಕೂಡಾ ಓರ್ವ ಬಾಲಕನೆ.

ಬಾಲಕಿಯ ಗ್ರಾಮದಲ್ಲಿಯೇ ಇದ್ದ 17 ವರ್ಷದ ಬಾಲಕನೇ, ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾನೆ. ನಿನ್ನೆ ಮಧ್ಯಾಹ್ನ ಬಾಲಕಿ ಬಹಿರ್ದೆಸೆಗೆ ಹೋಗೋದನ್ನು ನೋಡಿದ್ದ ಬಾಲಕ, ಬಾಲಕಿಯನ್ನು ಪಾಲೋ ಮಾಡಿಕೊಂಡು ಹೋಗಿದ್ದ. ನಂತರ ಕಬ್ಬಿನ ಗದ್ದೆಗೆ ಕರೆದಕೊಂಡು ಹೋಗಿ, ಬಲವಂತವಾಗಿ ಅತ್ಯಾಚಾರ ಮಾಡಿದ್ದ. ಈ ವಿಷಯವನ್ನು ಬಾಲಕಿ, ಕುಟುಂಬದವರಿಗೆ ಹೇಳ್ತಾಳೆ ಅಂತ ತಿಳಿದು, ಕಲ್ಲಿನಿಂದ ಬಾಲಕಿಯ ಕತ್ತಿಗೆ ಗುದ್ದಿ, ನಂತರ ಬಾಲಕಿಯ ವೇಲ್ ನಿಂದಲೇ ಬಾಲಕಿಯ ಕತ್ತು ಬಿಗಿದು ಕೊಲೆ ಮಾಡಿದ್ದನು. ನಂತರ ತನ್ನ ಪಾಡಿಗೆ ತಾನು ಮನೆಗೆ ಬಂದು ಸುಮ್ಮನಾಗಿದ್ದ.

ಅಶ್ಲೀಲ ವಿಡಿಯೋ ನೋಡುತ್ತಿದ್ದ ಬಾಲಕ

ಅಪ್ರಾಪ್ತ ಬಾಲಕ ಕೂಡಾ ಐಟಿಐ ಓದುತ್ತಿದ್ದನಂತೆ. ಅಪ್ರಾಪ್ತ ಬಾಲಕನಿಗೆ ಮೊಬೈಲ್​ಗೀಳು ಹೊಂದಿದ್ದನಂತೆ. ಮೊಬೈಕ್​ನಲ್ಲಿ ಅಶ್ಲೀಲವಾದ ವಿಡಿಯೋಗಳನ್ನು ನೋಡುತ್ತಿದ್ದನಂತೆ. ಸದಾ ಅಶ್ಲೀಲ ವಿಡಿಯೋ ನೋಡುತ್ತಿದ್ದ ಬಾಲಕ, ನಿನ್ನೆ ಅಪ್ರಾಪ್ತ ಬಾಲಕಿ ಒಬ್ಬಳೆ ಹೋಗೋದನ್ನು ನೋಡಿ, ಪಾಲೋ ಮಾಡಿಕೊಂಡು ಹೋಗಿ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದನು.

ಸಂಜಯ್.ಟಿವಿ9 ಕಲಬುರಗಿ

Published On - 9:03 pm, Wed, 2 November 22

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ