AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rape Case: ಕೇರಳದ 15 ವರ್ಷದ ಬಾಲಕನಿಂದ 21 ವರ್ಷದ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ

Crime News: ತನ್ನ ಮೇಲೆ ಅತ್ಯಾಚಾರ ನಡೆಸಲು ಪ್ರಯತ್ನಿಸಿದ ಬಾಲಕನಿಂದ ಆ ಯುವತಿ ತಪ್ಪಿಸಿಕೊಂಡಿದ್ದು, ಅಲ್ಲಿಂದ ಓಡಿ ಹೋಗಿದ್ದಾಳೆ. ಇದಾದ ಕೂಡಲೆ ಘಟನೆ ನಡೆದ ಸ್ಥಳದಿಂದ ಆ ಹುಡುಗ ಕೂಡ ಪರಾರಿಯಾಗಿದ್ದಾನೆ.

Rape Case: ಕೇರಳದ 15 ವರ್ಷದ ಬಾಲಕನಿಂದ 21 ವರ್ಷದ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 01, 2021 | 6:56 PM

Share

ಮಲಪ್ಪುರಂ: 10ನೇ ತರಗತಿ ಓದುತ್ತಿದ್ದ 15 ವರ್ಷದ ವಿದ್ಯಾರ್ಥಿಯೊಬ್ಬ 21 ವರ್ಷದ ಯುವತಿ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿರುವ ಘಟನೆ ಕೇರಳದ ಕೊಂಡೊಟ್ಟಿಯಲ್ಲಿ ನಡೆದಿದೆ. ನಿನ್ನೆ 21 ವರ್ಷದ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ್ದ 15 ವರ್ಷದ ಬಾಲಕನನ್ನು ಪೊಲೀಸರು ಇಂದು ಬಂಧಿಸಿದ್ದಾರೆ.

10ನೇ ತರಗತಿಯ ವಿದ್ಯಾರ್ಥಿಯನ್ನು ಬಂಧಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮಲಪ್ಪುರಂ ಎಸ್ಪಿ ಸುಜಿತ್ ದಾಸ್, ಹುಡುಗನಿಗೆ ಯಾವುದೇ ಅಪರಾಧದ ಹಿನ್ನೆಲೆಯಿಲ್ಲ. ಸಂತ್ರಸ್ತೆಯ ಪ್ರಕಾರ ಈ ಹಿಂದೆ ಎಂದಿಗೂ ತೊಂದರೆ ನೀಡಿಲ್ಲ. ಆದರೆ, ಇದೀಗ 21 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಲು ಪ್ರಯತ್ನಿಸಿರುವುದು ಖಚಿತವಾಗಿದೆ ಎಂದು ಅವರು ತಿಳಿಸಿದ್ದಾರೆ.

ತನ್ನ ಮೇಲೆ ಅತ್ಯಾಚಾರ ನಡೆಸಲು ಪ್ರಯತ್ನಿಸಿದ ಬಾಲಕನಿಂದ ಆ ಯುವತಿ ತಪ್ಪಿಸಿಕೊಂಡಿದ್ದು, ಅಲ್ಲಿಂದ ಓಡಿ ಹೋಗಿದ್ದಾಳೆ. ಇದಾದ ಕೂಡಲೆ ಘಟನೆ ನಡೆದ ಸ್ಥಳದಿಂದ ಆ ಹುಡುಗ ಕೂಡ ಪರಾರಿಯಾಗಿದ್ದಾನೆ. ಆಕೆ ಈ ವಿಚಾರವನ್ನು ಬೇರೆ ಯಾರದಾದರೂ ಬಳಿ ಹೇಳಬಹುದು ಎಂಬ ಭೀತಿಯಿಂದ ಆತ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಆತ ಮನೆಗೆ ಹೋದಾಗ ಆತನ ಕೊಳಕಾದ ಬಟ್ಟೆ, ಮೈಮೇಲಿನ ಪರಚಿದ ಗಾಯ, ರಕ್ತ ಒಸರುತ್ತಿದ್ದ ತುಟಿಯನ್ನು ನೋಡಿ ಮನೆಯವರು ಏನಾಯಿತೆಂದು ಗಾಬರಿಯಾಗಿದ್ದಾನೆ. ಆಗ ನಾಯಿ ಅಟ್ಟಿಸಿಕೊಂಡು ಬಂದ ಕಾರಣ ಕೆಳಗೆ ಬಿದ್ದು ಗಾಯ ಮಾಡಿಕೊಂಡೆ ಎಂದು ಆತ ಸುಳ್ಳು ಹೇಳಿದ್ದಾನೆ.

ಆದರೆ, ಯುವತಿ ನೀಡಿದ ಮಾಹಿತಿ ಮೇರೆಗೆ ಆತನ ಮನೆಗೆ ಹೋದ ಪೊಲೀಸರು ವಿಚಾರಣೆ ನಡೆಸಿದಾಗ, 21 ವರ್ಷದ ಮಹಿಳೆಯ ಮೇಲೆ ಲೈಂಗಿಕ ದಾಳಿ ನಡೆಸಿದಾಗ ತನಗೆ ಗಾಯಗಳಾಗಿವೆ ಎಂದು ಒಪ್ಪಿಕೊಂಡಿದ್ದಾನೆ. ಅಲ್ಲದೆ, ತನ್ನಿಂದ ತಪ್ಪಿಸಿಕೊಂಡು ಓಡಿಹೋಗುತ್ತಿದ್ದ ಯುವತಿಯ ಮುಖಕ್ಕೆ ಕಲ್ಲಿನಿಂದ ಹೊಡೆದು ಆತ ಗಾಯಗೊಳಿಸಿದ್ದಾನೆ.

ಇದನ್ನೂ ಓದಿ: Rape Case: ಆಟವಾಡುತ್ತಿದ್ದ 6 ವರ್ಷದ ಮಗುವಿನ ಮೇಲೆ ಕಾಮುಕನಿಂದ ಅತ್ಯಾಚಾರ; ಬಾಲಕಿ ಸ್ಥಿತಿ ಗಂಭೀರ

Crime News: ಚಲಿಸುವ ರೈಲಿನಲ್ಲೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; 4 ಕಾಮುಕರ ಬಂಧನ

Published On - 8:11 pm, Tue, 26 October 21

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ