AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rape Case: ಕೇರಳದ 15 ವರ್ಷದ ಬಾಲಕನಿಂದ 21 ವರ್ಷದ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ

Crime News: ತನ್ನ ಮೇಲೆ ಅತ್ಯಾಚಾರ ನಡೆಸಲು ಪ್ರಯತ್ನಿಸಿದ ಬಾಲಕನಿಂದ ಆ ಯುವತಿ ತಪ್ಪಿಸಿಕೊಂಡಿದ್ದು, ಅಲ್ಲಿಂದ ಓಡಿ ಹೋಗಿದ್ದಾಳೆ. ಇದಾದ ಕೂಡಲೆ ಘಟನೆ ನಡೆದ ಸ್ಥಳದಿಂದ ಆ ಹುಡುಗ ಕೂಡ ಪರಾರಿಯಾಗಿದ್ದಾನೆ.

Rape Case: ಕೇರಳದ 15 ವರ್ಷದ ಬಾಲಕನಿಂದ 21 ವರ್ಷದ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 01, 2021 | 6:56 PM

Share

ಮಲಪ್ಪುರಂ: 10ನೇ ತರಗತಿ ಓದುತ್ತಿದ್ದ 15 ವರ್ಷದ ವಿದ್ಯಾರ್ಥಿಯೊಬ್ಬ 21 ವರ್ಷದ ಯುವತಿ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿರುವ ಘಟನೆ ಕೇರಳದ ಕೊಂಡೊಟ್ಟಿಯಲ್ಲಿ ನಡೆದಿದೆ. ನಿನ್ನೆ 21 ವರ್ಷದ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ್ದ 15 ವರ್ಷದ ಬಾಲಕನನ್ನು ಪೊಲೀಸರು ಇಂದು ಬಂಧಿಸಿದ್ದಾರೆ.

10ನೇ ತರಗತಿಯ ವಿದ್ಯಾರ್ಥಿಯನ್ನು ಬಂಧಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮಲಪ್ಪುರಂ ಎಸ್ಪಿ ಸುಜಿತ್ ದಾಸ್, ಹುಡುಗನಿಗೆ ಯಾವುದೇ ಅಪರಾಧದ ಹಿನ್ನೆಲೆಯಿಲ್ಲ. ಸಂತ್ರಸ್ತೆಯ ಪ್ರಕಾರ ಈ ಹಿಂದೆ ಎಂದಿಗೂ ತೊಂದರೆ ನೀಡಿಲ್ಲ. ಆದರೆ, ಇದೀಗ 21 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಲು ಪ್ರಯತ್ನಿಸಿರುವುದು ಖಚಿತವಾಗಿದೆ ಎಂದು ಅವರು ತಿಳಿಸಿದ್ದಾರೆ.

ತನ್ನ ಮೇಲೆ ಅತ್ಯಾಚಾರ ನಡೆಸಲು ಪ್ರಯತ್ನಿಸಿದ ಬಾಲಕನಿಂದ ಆ ಯುವತಿ ತಪ್ಪಿಸಿಕೊಂಡಿದ್ದು, ಅಲ್ಲಿಂದ ಓಡಿ ಹೋಗಿದ್ದಾಳೆ. ಇದಾದ ಕೂಡಲೆ ಘಟನೆ ನಡೆದ ಸ್ಥಳದಿಂದ ಆ ಹುಡುಗ ಕೂಡ ಪರಾರಿಯಾಗಿದ್ದಾನೆ. ಆಕೆ ಈ ವಿಚಾರವನ್ನು ಬೇರೆ ಯಾರದಾದರೂ ಬಳಿ ಹೇಳಬಹುದು ಎಂಬ ಭೀತಿಯಿಂದ ಆತ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಆತ ಮನೆಗೆ ಹೋದಾಗ ಆತನ ಕೊಳಕಾದ ಬಟ್ಟೆ, ಮೈಮೇಲಿನ ಪರಚಿದ ಗಾಯ, ರಕ್ತ ಒಸರುತ್ತಿದ್ದ ತುಟಿಯನ್ನು ನೋಡಿ ಮನೆಯವರು ಏನಾಯಿತೆಂದು ಗಾಬರಿಯಾಗಿದ್ದಾನೆ. ಆಗ ನಾಯಿ ಅಟ್ಟಿಸಿಕೊಂಡು ಬಂದ ಕಾರಣ ಕೆಳಗೆ ಬಿದ್ದು ಗಾಯ ಮಾಡಿಕೊಂಡೆ ಎಂದು ಆತ ಸುಳ್ಳು ಹೇಳಿದ್ದಾನೆ.

ಆದರೆ, ಯುವತಿ ನೀಡಿದ ಮಾಹಿತಿ ಮೇರೆಗೆ ಆತನ ಮನೆಗೆ ಹೋದ ಪೊಲೀಸರು ವಿಚಾರಣೆ ನಡೆಸಿದಾಗ, 21 ವರ್ಷದ ಮಹಿಳೆಯ ಮೇಲೆ ಲೈಂಗಿಕ ದಾಳಿ ನಡೆಸಿದಾಗ ತನಗೆ ಗಾಯಗಳಾಗಿವೆ ಎಂದು ಒಪ್ಪಿಕೊಂಡಿದ್ದಾನೆ. ಅಲ್ಲದೆ, ತನ್ನಿಂದ ತಪ್ಪಿಸಿಕೊಂಡು ಓಡಿಹೋಗುತ್ತಿದ್ದ ಯುವತಿಯ ಮುಖಕ್ಕೆ ಕಲ್ಲಿನಿಂದ ಹೊಡೆದು ಆತ ಗಾಯಗೊಳಿಸಿದ್ದಾನೆ.

ಇದನ್ನೂ ಓದಿ: Rape Case: ಆಟವಾಡುತ್ತಿದ್ದ 6 ವರ್ಷದ ಮಗುವಿನ ಮೇಲೆ ಕಾಮುಕನಿಂದ ಅತ್ಯಾಚಾರ; ಬಾಲಕಿ ಸ್ಥಿತಿ ಗಂಭೀರ

Crime News: ಚಲಿಸುವ ರೈಲಿನಲ್ಲೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; 4 ಕಾಮುಕರ ಬಂಧನ

Published On - 8:11 pm, Tue, 26 October 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ