AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಹತ್ತು ವರ್ಷಗಳ ಕಾಲ ಜೈಲಿನಲ್ಲಿದ್ದು ಹೊರಬಂದ ಮೇಲೆ ಮಾಡಿದ್ದು ಮತ್ತದೇ ಹೇಯ ಕೃತ್ಯ

ಮಧ್ಯಪ್ರದೇಶದ ವ್ಯಕ್ತಿಯೊಬ್ಬ ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿ ಜೈಲಿನಿಂದ ಹೊರಬಂದ ನಂತರ ಮತ್ತದೇ ಹೇಯ ಕೃತ್ಯವೆಸಗಿದ್ದಾನೆ. ಆರೋಪಿ ಸತ್ನಾದಲ್ಲಿ 5 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಸೇರಿದಂತೆ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಹತ್ತು ವರ್ಷಗಳ ಕಾಲ ಜೈಲಿನಲ್ಲಿದ್ದು ಹೊರಬಂದ ಮೇಲೆ ಮಾಡಿದ್ದು ಮತ್ತದೇ ಹೇಯ ಕೃತ್ಯ
ಬಾಲಕಿImage Credit source: India Today
Follow us
ನಯನಾ ರಾಜೀವ್
|

Updated on: Aug 17, 2023 | 8:40 AM

ಮಧ್ಯಪ್ರದೇಶದ ವ್ಯಕ್ತಿಯೊಬ್ಬ ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿ ಜೈಲಿನಿಂದ ಹೊರಬಂದ ನಂತರ ಮತ್ತದೇ ಹೇಯ ಕೃತ್ಯವೆಸಗಿದ್ದಾನೆ. ಆರೋಪಿ ಸತ್ನಾದಲ್ಲಿ 5 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಸೇರಿದಂತೆ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. 10 ವರ್ಷಗಳ ಕಾಲ ಜೈಲಿನಲ್ಲಿದ್ದರೂ ಆತನ ಮನಸ್ಥಿತಿ ಸ್ವಲ್ಪವೂ ಸುಧಾರಿಸಿರಲಿಲ್ಲ. ಒಂದೂವರೆ ವರ್ಷದ ಹಿಂದೆ ಜೈಲಿನಿಂದ ಹೊರಬಂದ ಆತ ಮತ್ತೊಬ್ಬ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಸಂತ್ರಸ್ತೆ ನಾಪತ್ತೆಯಾದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಇದರ ಬೆನ್ನಲ್ಲೇ ಅಜ್ಜಿ ಆಕೆಗಾಗಿ ಹುಡುಕಾಟ ಆರಂಭಿಸಿದ್ದರು. ಸ್ವಲ್ಪ ದೂರದಲ್ಲಿ ಬಾಲಕಿ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಆರೋಪಿ ರಾಕೇಶ್ ವರ್ಮಾ ಅಲಿಯಾಸ್ ರಕ್ಕು ಆಕೆಗೆ ಮಿಠಾಯಿ ತಿನ್ನಿಸುವ ನೆಪದಲ್ಲಿ ಆಮಿಷವೊಡ್ಡಿರುವುದು ತಿಳಿದುಬಂದಿದೆ. ಈ ಕೃತ್ಯವನ್ನು ಅಜ್ಜಿ ತಡೆಯಲು ಯತ್ನಿಸಿದ್ದು, ಆರೋಪಿಗಳು ತಕ್ಷಣ ಓಡಿ ಹೋಗಿ ಆಟೋದಲ್ಲಿ ಕುಳಿತು ಕೃಷ್ಣನಗರದ ಕಡೆಗೆ ಹೋಗಿದ್ದರು.

ಮತ್ತಷ್ಟು ಓದಿ: ಫೇಸ್​ಬುಕ್ ಸ್ನೇಹಿತನಿಂದ ಅತ್ಯಾಚಾರ ಯತ್ನ, ತಡೆಯಲು ಯತ್ನಿಸಿದಾಗ ಯುವತಿಯ ತಲೆ ಬುರುಡೆಯನ್ನೇ ಒಡೆದ ವ್ಯಕ್ತಿ

ಮಹಿಳೆ ಸಹಾಯಕ್ಕಾಗಿ ಕೂಗಿ ಸಾರ್ವಜನಿಕರ ಗಮನ ಸೆಳೆದ ನಂತರ ಸಿಟಿ ಕೊತ್ವಾಲ್ ಶಂಖಧರ್ ದ್ವಿವೇದಿ ಅವರ ತಂಡದೊಂದಿಗೆ ಸ್ಥಳಕ್ಕೆ ಆಗಮಿಸಿ ಬಾಲಕಿಗಾಗಿ ಹುಡುಕಾಟ ಆರಂಭಿಸಿದರು.

ಸುಮಾರು ಎರಡು ಗಂಟೆಗಳ ಕಾಲ ಹುಡುಕಾಟ ನಡೆಸಿದ ಬಳಿಕ ಬಾಲಕಿ ಪತ್ತೆಯಾಗಿದ್ದಾಳೆ. ಬಾಲಕಿಯ ಸ್ಥಿತಿ ಗಂಭೀರವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಥಮ ಚಿಕಿತ್ಸೆ ನೀಡಿದ ಬಳಿಕ ರೇವಾದಲ್ಲಿರುವ ಸಂಜಯ್ ಗಾಂಧಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯಕೀಯ ವರದಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವುದನ್ನು ಪೊಲೀಸರು ಖಚಿತಪಡಿಸಿದ್ದಾರೆ.

ಆರೋಪಿಯು 2012ರಲ್ಲಿ ಕೊಲ್ಗ್ವಾನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕೂವರೆ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಎಂದು ಪೊಲೀಸ್ ವರಿಷ್ಠಾಧಿಕಾರಿ ಮಹೇಂದ್ರ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

ಆದರೆ ಜೈಲಿನಲ್ಲಿ ಉತ್ತಮ ನಡತೆಯ ಆಧಾರದ ಮೇಲೆ ಮೂರು ವರ್ಷಗಳ ಶಿಕ್ಷೆಯನ್ನು ಮನ್ನಾ ಮಾಡಿ 18 ತಿಂಗಳ ಹಿಂದೆ ಜೈಲಿನಿಂದ ಹೊರಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬಿಡುಗಡೆಯಾದ ಒಂದೂವರೆ ವರ್ಷದ ಬಳಿಕ ಆರೋಪಿ ಮತ್ತೊಬ್ಬ ಅಪ್ರಾಪ್ತ ಬಾಲಕಿಯ ಮೇಲೂ ಅತ್ಯಾಚಾರವೆಸಗಿದ್ದಾನೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ