AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಆತ್ಮಹತ್ಯೆ ಮಾಡಿಕೊಂಡ 88 ವರ್ಷದ ವೃದ್ಧ

Shocking News: ಆ ವೃದ್ಧ ಬಾಲಕಿಗೆ ಟೋಪಿ ಕೊಡಿಸುವುದಾಗಿ ನಂಬಿಸಿ, ಆಕೆಯನ್ನು ಕರೆದುಕೊಂಡು ಹೋಗಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ.

Crime News: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಆತ್ಮಹತ್ಯೆ ಮಾಡಿಕೊಂಡ 88 ವರ್ಷದ ವೃದ್ಧ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Mar 18, 2022 | 7:05 PM

Share

ಗುರುಗ್ರಾಮ: ‘ಕಾಮಕ್ಕೆ ಕಣ್ಣಿಲ್ಲ’ ಎಂಬ ಮಾತೊಂದಿದೆ. ಚಿಕ್ಕ ಮಕ್ಕಳನ್ನೂ ಬಿಡದೆ ಅದೆಷ್ಟೋ ಅತ್ಯಾಚಾರ ಪ್ರಕರಣಗಳು (Rape Case) ನಡೆಯುತ್ತಲೇ ಇದೆ. ಗುರುಗ್ರಾಮದ (Gurugram) ಹಳ್ಳಿಯೊಂದರಲ್ಲಿ ತನ್ನ ಪಕ್ಕದ ಮನೆಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ 88 ವರ್ಷದ ವ್ಯಕ್ತಿಯೊಬ್ಬರು ತಾವೂ ಆತ್ಮಹತ್ಯೆ (Suicide) ಮಾಡಿಕೊಂಡು ಸಾವನ್ನಪ್ಪಿದ್ದಾರೆ. ಚಿಕ್ಕ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪಕ್ಕೆ ಗುರಿಯಾಗಿದ್ದ 88 ವರ್ಷದ ವೃದ್ಧ ತಾನು ಸಿಕ್ಕಿ ಬೀಳುವ ಭೀತಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆ ವೃದ್ಧನ ಶವದ ಬಳಿ ಯಾವುದೇ ಸೂಸೈಡ್ ನೋಟ್ ಪತ್ತೆಯಾಗಿಲ್ಲ. ಅವರ ಕುಟುಂಬಸ್ಥರು ಕೂಡ ಈ ಸಾವಿಗೆ ಯಾರನ್ನೂ ದೂಷಿಸಲಿಲ್ಲ. ಪೊಲೀಸರ ಪ್ರಕಾರ, ಮೃತ ವೃದ್ಧ ಲಾಲ್ ಸಿಂಗ್ ವಿರುದ್ಧ ಬುಧವಾರ ಪೋಕ್ಸೊ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿತ್ತು. ತಾನು ಜೈಲಿಗೆ ಹೋದರೆ ಮರ್ಯಾದೆ ಹೋಗುತ್ತದೆ ಎಂಬ ಭೀತಿಯಲ್ಲಿ ಲಾಲ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಲಾಲ್​ ಸಿಂಗ್ ಶವ ಅವರ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಅತ್ಯಾಚಾರಕ್ಕೊಳಗಾದ ಬಾಲಕಿಯ ತಾಯಿ ನೀಡಿದ ದೂರಿನ ಪ್ರಕಾರ, ಆ ವೃದ್ಧ ಬಾಲಕಿಗೆ ಟೋಪಿ ಕೊಡಿಸುವುದಾಗಿ ನಂಬಿಸಿ, ಆಕೆಯನ್ನು ಕರೆದುಕೊಂಡು ಹೋಗಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಕಳೆದ ಹಲವು ದಿನಗಳಿಂದ ಆ ವೃದ್ಧ ತನಗೆ ಕಿರುಕುಳ ನೀಡುತ್ತಿದ್ದ ಎಂದು ನನ್ನ ಮಗಳು ಹೇಳಿದಾಗ ನನಗೆ ಆಘಾತವಾಯಿತು. ಈ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಬಾಲಕಿಯ ತಾಯಿ ಹೇಳಿದ್ದಾಳೆ. ಆತ ಅತ್ಯಾಚಾರ ನಡೆಸಿರುವ ಬಗ್ಗೆ ನನ್ನ ಮಗಳು ಹೇಳಿದಾಗ ನಾನು ಪೊಲೀಸರ ಬಳಿ ಹೋಗಿ ದೂರು ನೀಡಿದೆ ಎಂದು ಬಾಲಕಿಯ ತಾಯಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಅಲ್ಲಿ ಯಾವುದೇ ಸೂಸೈಡ್ ನೋಟ್ ಪತ್ತೆಯಾಗದ ಕಾರಣ ಆತ್ಮಹತ್ಯೆಯ ಹಿಂದಿನ ನಿಜವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ ಎಂದು ಎಸ್‌ಎಚ್‌ಒ ವಿನೀತ್ ಕುಮಾರ್ ಹೇಳಿದ್ದಾರೆ. ಅವರ ಮೇಲೆ ಅತ್ಯಾಚಾರದ ಪ್ರಕರಣ ದಾಖಲಾಗಿದ್ದರಿಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಊಹಿಸಲಾಗಿದೆ.

ಇದನ್ನೂ ಓದಿ: Crime News: ಅತ್ಯಾಚಾರಿಯನ್ನು ಮರಕ್ಕೆ ಕಟ್ಟಿ, ಹೊಡೆದು ಕೊಂದ ಮಹಿಳೆಯರು!

Gang Rape: ಸಾಮೂಹಿಕ ಅತ್ಯಾಚಾರವೆಸಗಿ, ಕೊಲೆ; 14 ವರ್ಷದ ಬಾಲಕಿಯ ಶವ ಗೋಣಿಚೀಲದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ