AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rape: ಮಕ್ಕಳ ಜೊತೆ ಮಲಗಿದ್ದ ಮಹಿಳೆಯ ಮುಖವನ್ನು ಇಟ್ಟಿಗೆಯಿಂದ ಜಜ್ಜಿ, ಅತ್ಯಾಚಾರ!

ಮಹಿಳೆಯ ಪತಿ ರಾತ್ರಿ ವೇಳೆ ಹೊಲಕ್ಕೆ ಪಂಪ್​ಸೆಟ್​ನಿಂದ ನೀರು ಬಿಡಲು ಮನೆಯಿಂದ ಹೊರಗೆ ಹೋಗಿದ್ದರು. ಈ ವೇಳೆ ಮನೆಯೊಳಗೆ ನುಗ್ಗಿದ ದುಷ್ಕರ್ಮಿಗಳು ಮಹಿಳೆಯನ್ನು ಕೊಂದು, ಆಕೆಯ ಶವದ ಮೇಲೆ ಅತ್ಯಾಚಾರ ನಡೆಸಿದ್ದಾರೆ.

Rape: ಮಕ್ಕಳ ಜೊತೆ ಮಲಗಿದ್ದ ಮಹಿಳೆಯ ಮುಖವನ್ನು ಇಟ್ಟಿಗೆಯಿಂದ ಜಜ್ಜಿ, ಅತ್ಯಾಚಾರ!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Mar 14, 2022 | 6:14 PM

Share

ಅಮ್ರೋಹಾ: ಉತ್ತರ ಪ್ರದೇಶದಲ್ಲಿ ಆಗಾಗ ಅತ್ಯಾಚಾರದ (Rape Cases) ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಹೆಣ್ಣುಮಕ್ಕಳ ಪಾಲಿಗೆ ಉತ್ತರ ಪ್ರದೇಶ (Uttar Pradesh) ಸುರಕ್ಷಿತ ಸ್ಥಳವಲ್ಲ ಎಂಬ ಮಾತೂ ಇದೆ. ಇದೀಗ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಮತ್ತೊಂದು ಭೀಕರ ಘಟನೆ ನಡೆದಿದ್ದು, ತನ್ನ ಮಕ್ಕಳ ಒತೆ ಮಲಗಿದ್ದ 25 ವರ್ಷದ ಮಹಿಳೆಯ ಮುಖವನ್ನು ಇಟ್ಟಿಗೆಯಿಂದ ಜಜ್ಜಿ ಹತ್ಯೆ ಮಾಡಿ ಅಪರಿಚಿತರು ಆಕೆಯ ಶವದ ಮೇಲೆ ಅತ್ಯಾಚಾರವೆಸಗಿದ್ದಾರೆ. ಆ ಮಹಿಳೆಯ ಜೊತೆ ಮಲಗಿದ್ದ ಅಪ್ರಾಪ್ತ ಮಕ್ಕಳಿಗೂ ಈ ಘಟನೆಯ ಬಳಿಕ ಸಣ್ಣಪುಟ್ಟ ಗಾಯಗಳಾಗಿವೆ.

ಭಾನುವಾರ ರಾತ್ರಿ ಅಮ್ರೋಹಾದ ಹಳ್ಳಿಯಲ್ಲಿ ಈ ಘಟನೆ ಸಂಭವಿಸಿದ್ದು, ಆ ಮಹಿಳೆಯ ಪತಿ ರಾತ್ರಿ ವೇಳೆ ಹೊಲಕ್ಕೆ ಪಂಪ್​ಸೆಟ್​ನಿಂದ ನೀರು ಬಿಡಲು ಮನೆಯಿಂದ ಹೊರಗೆ ಹೋಗಿದ್ದರು. ಈ ವೇಳೆ ಮನೆಯೊಳಗೆ ನುಗ್ಗಿದ ದುಷ್ಕರ್ಮಿಗಳು ಮಹಿಳೆಯನ್ನು ಕೊಂದು, ಆಕೆಯ ಶವದ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಆ ಮಹಿಳೆಯ ಗಂಡ ಹೊಲದಿಂದ ವಾಪಾಸ್ ಮನೆಗೆ ಬಂದಾಗ ತನ್ನ ಹೆಂಡತಿಯ ಶವ ಬೆತ್ತಲೆಯಾಗಿ ಹಾಸಿಗೆಯ ಮೇಲೆ ಬಿದ್ದಿರುವುದನ್ನು ನೋಡಿ ಆಘಾತಕ್ಕೊಳಗಾಗಿದ್ದಾರೆ. ಬಳಿಕ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಮೃತ ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಈ ರೀತಿ ಅಮಾನವೀಯವಾಗಿ ಹತ್ಯೆ ಮಾಡಿದವರು ಯಾರೆಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಆ ಮಹಿಳೆಗೆ ಪರಿಚಯದವರೇ ಆಕೆಯ ಗಂಡ ಮನೆಯಲ್ಲಿಲ್ಲದ ಸಮಯ ನೋಡಿಕೊಂಡು ಈ ಕೃತ್ಯ ಎಸಗಿರುವ ಸಾಧ್ಯತೆಯಿದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಆ ಮಹಿಳೆಯ ಶವದ ಮೇಲೆ ಅತ್ಯಾಚಾರ ನಡೆದಿದೆ ಎಂದು ಆಕೆಯ ಗಂಡ ಹೇಳಿಕೆ ನೀಡಿದ್ದಾರೆ. ಆದರೆ, ನಿಜಕ್ಕೂ ಅತ್ಯಾಚಾರ ನಡೆದಿದೆಯೇ ಎಂಬುದು ಮರಣೋತ್ತರ ಪರೀಕ್ಷೆಯ ವರದಿ ಸಿಕ್ಕ ನಂತರವೇ ಖಚಿತವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸುತ್ತಿದ್ದೇವೆ ಎಂದು ಎಸ್‌ಎಚ್‌ಒ ಕೃಪಾಲ್ ಸಿಂಗ್ ಹೇಳಿದ್ದಾರೆ. ಭಾನುವಾರ ರಾತ್ರಿ ಮೃತ ಮಹಿಳೆಯ ಪತಿ ಧೀರ್ ಸಿಂಗ್ ಹೊಲಕ್ಕೆ ನೀರು ಹಾಯಿಸಲು ಮನೆಯಿಂದ ಹೊರಗೆ ಹೋಗಿದ್ದರು. ಅವರು ಹಿಂತಿರುಗಿದಾಗ ಎಷ್ಟು ಬಾಗಿಲು ಬಡಿದರೂ ಅವರ ಹೆಂಡತಿ ಬಾಗಿಲು ತೆರೆಯಲಿಲ್ಲ. ಹೀಗಾಗಿ, ಮನೆಯ ಟೆರೇಸ್ ಮೂಲಕ ಒಳಗೆ ಹೋಗಿ ನೋಡಿದಾಗ ಆಕೆ ನಗ್ನವಾಗಿ ಬಿದ್ದಿದ್ದಳು. ಬೆಡ್ ಮೇಲೆ ತನ್ನ ಹೆಂಡತಿಯ ಬೆತ್ತಲೆ ದೇಹವು ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡ ಅವರು ಗಾಬರಿಯಿಂದ ಅಲ್ಲೇ ಕುಸಿದು ಬಿದ್ದಿದ್ದಾರೆ. ನಂತರ ಅಕ್ಕಪಕ್ಕದವರಿಗೆ ವಿಷಯ ತಿಳಿಸಿ, ಪೊಲೀಸರನ್ನು ಕರೆಸಿದ್ದಾರೆ.

ಇದನ್ನೂ ಓದಿ: Rape Case: ಆಟವಾಡುತ್ತಿದ್ದ 6 ವರ್ಷದ ಮಗುವಿನ ಮೇಲೆ ಕಾಮುಕನಿಂದ ಅತ್ಯಾಚಾರ; ಬಾಲಕಿ ಸ್ಥಿತಿ ಗಂಭೀರ

Gang Rape: ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ರೈಲ್ವೆ ಹಳಿ ಮೇಲೆ ಬಿಸಾಡಿದ ಕಾಮುಕರು

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?