AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rape: ಗಂಡನನ್ನು ಮರಕ್ಕೆ ಕಟ್ಟಿಹಾಕಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಅಪ್ರಾಪ್ತರು ಸೇರಿ 10 ಮಂದಿ ಬಂಧನ

Crime News: ಆರೋಪಿಗಳು ಗಂಡ-ಹೆಂಡತಿಯನ್ನು ತೋಟಕ್ಕೆ ಎಳೆದೊಯ್ದು, ಅಲ್ಲಿ ಮಹಿಳೆಯ ಪತಿಯನ್ನು ಮರಕ್ಕೆ ಕಟ್ಟಿ ಆತನ ಎದುರಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

Rape: ಗಂಡನನ್ನು ಮರಕ್ಕೆ ಕಟ್ಟಿಹಾಕಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಅಪ್ರಾಪ್ತರು ಸೇರಿ 10 ಮಂದಿ ಬಂಧನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Mar 26, 2022 | 5:34 PM

Share

ಮುಜಾಫರ್‌ನಗರ: ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ಅಪರಾಧಗಳಿಗೆ ಕೊನೆಯೇ ಇಲ್ಲದಂತಾಗಿದೆ. ಇತ್ತೀಚಿನ ಘಟನೆಯೊಂದರಲ್ಲಿ ಮುಜಗ್ಗರ್‌ನಗರ ಜಿಲ್ಲೆಯಲ್ಲಿ ಮಹಿಳೆಯ ಗಂಡನನ್ನು ಹಿಡಿದು, ಆತನನ್ನು ಮರಕ್ಕೆ ಕಟ್ಟಿಹಾಕಿದ ಕಾಮುಕರು ಆತನ ಎದುರೇ 21 ವರ್ಷದ ಆತನ ಹೆಂಡತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ (Gang Rape). ಮಂಗಳವಾರ ರಾತ್ರಿ ನೈ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ಅಪರಾಧ ನಡೆದಿದೆ. ವ್ಯಕ್ತಿ ತನ್ನ ಪತ್ನಿ ಜರೀನಾ (ಹೆಸರು ಬದಲಾಯಿಸಲಾಗಿದೆ)ಳನ್ನು ಆಕೆಯ ತಾಯಿಯ ಮನೆಯಿಂದ ಕರೆದುಕೊಂಡು ಮನೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.

ಆರೋಪಿಗಳು ಮಹಿಳೆಯನ್ನು ಮಾವಿನ ತೋಟಕ್ಕೆ ಎಳೆದೊಯ್ದು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಹಿಂದೂಸ್ತಾನ್ ಟೈಮ್ಸ್​ ವರದಿಯ ಪ್ರಕಾರ, ಇಬ್ಬರು ಅಪ್ರಾಪ್ತರು ಸೇರಿದಂತೆ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 10 ಮಂದಿ ಆರೋಪಿಗಳು ಕುಡಿದು ಬಂದು ಮದುವೆ ಮುಗಿಸಿಕೊಂಡು ಬರುತ್ತಿದ್ದರು ಎನ್ನಲಾಗಿದೆ.

ಪೊಲೀಸರ ಪ್ರಕಾರ, ನಾಲ್ವರು ಪುರುಷರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಉಳಿದ ಆರೋಪಿಗಳು ಆಕೆಯ ಗಂಡನ ಬಳಿ ನಿಂತಿದ್ದರು. ಮಹಿಳೆಯ ತಾಯಿಯ ಮನೆ ನೈ ಮಂಡಿ ಕೊಟ್ವಾಲಿ ಪ್ರದೇಶದ ಭೋಪಾ ರಸ್ತೆಯ ಬಳಿ ಇದೆ. ಮಂಗಳವಾರ ರಾತ್ರಿ ಆಕೆ ತನ್ನ ಗಂಡನ ಮನೆಗೆ ಹಿಂದಿರುಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಕೆಲವರು ಆ ದಂಪತಿಯನ್ನು ಹಿಂಬಾಲಿಸಲು ಪ್ರಾರಂಭಿಸಿದರು.

ಆಗ ಆ ಆರೋಪಿಗಳು ಆ ಗಂಡ-ಹೆಂಡತಿಯನ್ನು ತೋಟಕ್ಕೆ ಎಳೆದೊಯ್ದು, ಅಲ್ಲಿ ಮಹಿಳೆಯ ಪತಿಯನ್ನು ಮರಕ್ಕೆ ಕಟ್ಟಿ ಆತನ ಎದುರಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಇನ್ನು ಆರು ಮಂದಿ ಆರೋಪಿಗಳೂ ಅದೇ ಸ್ಥಳದಲ್ಲಿ ಹಾಜರಿದ್ದರು.

ಇದಾದ ಬಳಿಕ ಯಾರಿಗೂ ಈ ವಿಷಯವನ್ನು ಹೇಳಬಾರದೆಂದು ಆ ದಂಪತಿಗೆ ಬೆದರಿಕೆ ಹಾಕಿ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ನಂತರ ಆ ಮಹಿಳೆ ತನ್ನ ಪತಿಯನ್ನು ಬಿಡಿಸಿಕೊಂಡು ತಮ್ಮ ಗ್ರಾಮಕ್ಕೆ ಮರಳಿದ್ದಾಳೆ. ಮಹಿಳೆಯ ಗಂಡ ಆರೋಪಿಗಳ ಬಳಿ ಬೇಡಿಕೊಂಡರೂ ಅವರು ಕೇಳದೆ ಆತನ ಕಣ್ಣೆದುರಲ್ಲೇ ಆತನ ಹೆಂಡತಿ ಮೇಲೆ ಅತ್ಯಾಚಾರ ನಡೆಸಿದ್ದಾರೆ.

ಈ ಭೀಕರ ಕೃತ್ಯದ ಬಗ್ಗೆ ಬುಧವಾರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದಾರೆ. ಆರೋಪಿಗಳಿಗೆ ಸಂಬಂಧಿಸಿದಂತೆ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Rape: ರೈಲಿಗಾಗಿ ಕಾಯುತ್ತಿರುವಾಗ ರೈಲ್ವೆ ಸ್ಟೇಷನ್​ನ ಶೌಚಾಲಯದಲ್ಲಿ ಯುವತಿ ಮೇಲೆ ಅತ್ಯಾಚಾರ!

Rape: ಮಕ್ಕಳ ಜೊತೆ ಮಲಗಿದ್ದ ಮಹಿಳೆಯ ಮುಖವನ್ನು ಇಟ್ಟಿಗೆಯಿಂದ ಜಜ್ಜಿ, ಅತ್ಯಾಚಾರ!

Published On - 5:33 pm, Sat, 26 March 22

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ