AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rape: ರೈಲಿಗಾಗಿ ಕಾಯುತ್ತಿರುವಾಗ ರೈಲ್ವೆ ಸ್ಟೇಷನ್​ನ ಶೌಚಾಲಯದಲ್ಲಿ ಯುವತಿ ಮೇಲೆ ಅತ್ಯಾಚಾರ!

Crime News: ರೈಲ್ವೆ ಸ್ಟೇಷನ್​ನ ಸಾರ್ವಜನಿಕ ಶೌಚಾಲಯದೊಳಗೆ ಯುವತಿಯನ್ನು ಎಳೆದುಕೊಂಡು ಹೋಗಿ, ಆಕೆಯ ಮೇಲೆ ಅತ್ಯಾಚಾರ ನಡೆಸಲಾಗಿದೆ.

Rape: ರೈಲಿಗಾಗಿ ಕಾಯುತ್ತಿರುವಾಗ ರೈಲ್ವೆ ಸ್ಟೇಷನ್​ನ ಶೌಚಾಲಯದಲ್ಲಿ ಯುವತಿ ಮೇಲೆ ಅತ್ಯಾಚಾರ!
ಅತ್ಯಾಚಾರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Mar 21, 2022 | 7:52 PM

ಪ್ರತಾಪ್​ಗಢ: ಉತ್ತರ ಪ್ರದೇಶದಲ್ಲಿ ಹೆಚ್ಚೂ ಕಡಿಮೆ ದಿನವೂ ಒಂದೊಂದು ಅತ್ಯಾಚಾರ ಪ್ರಕರಣಗಳು (Rape Cases) ಬೆಳಕಿಗೆ ಬರುತ್ತಲೇ ಇರುತ್ತವೆ. ಅಪರಾಧ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿರುವ ಉತ್ತರ ಪ್ರದೇಶದಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿದ್ದು, ಪ್ರತಾಪ್‌ಗಢ್ ರೈಲು ನಿಲ್ದಾಣದ ಪಾರ್ಕಿಂಗ್ ಸ್ಟ್ಯಾಂಡ್ ಬಳಿ ಇರುವ ಸಾರ್ವಜನಿಕ ಶೌಚಾಲಯದೊಳಗೆ 20 ವರ್ಷದ ಯುವತಿ ಮೇಲೆ ಅತ್ಯಾಚಾರವೆಸಗಲಾಗಿದೆ. ಮಾರ್ಚ್ 19ರಂದು ಈ ಘಟನೆ ನಡೆದಿದ್ದು, ಈ ಬಗ್ಗೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ರೈಲ್ವೆ ಸ್ಟೇಷನ್​ನ ಸಾರ್ವಜನಿಕ ಶೌಚಾಲಯದೊಳಗೆ ಯುವತಿಯನ್ನು ಎಳೆದುಕೊಂಡು ಹೋಗಿ, ಆಕೆಯ ಮೇಲೆ ಅತ್ಯಾಚಾರ ನಡೆಸಲಾಗಿದೆ. ಈ ಘಟನೆ ಸಂಭವಿಸಿದಾಗ ಆ ಯುವತಿ ತನ್ನ ಪತಿಯೊಂದಿಗೆ ರೈಲು ಹತ್ತಲು ಕಾಯುತ್ತಿದ್ದರು ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಅಧಿಕಾರಿ ಆರ್.ಎನ್. ರೈ ಹೇಳಿದ್ದಾರೆ.

ರೈಲ್ವೆ ಸ್ಟೇಷನ್​​ನಲ್ಲಿ ಯುವತಿಯ ಗಂಡ ಬೆಳಿಗ್ಗೆ ರೈಲಿಗಾಗಿ ಕಾಯುತ್ತಿರುವಾಗ ಆಕೆಯನ್ನು ಒಂಟಿಯಾಗಿ ಬಿಟ್ಟು ಚಹಾ ಖರೀದಿಸಲು ಹೋಗಿದ್ದ. ಆಗ ಅಲ್ಲಿಗೆ ಬಂದ ವ್ಯಕ್ತಿಯೊಬ್ಬ ಆ ಯುವತಿಯ ಬಳಿ ಬಂದು ಒಂದು ಬೀಗ ಕೀ ನೀಡಿ, ಪಾರ್ಕಿಂಗ್ ಬಳಿ ಇರುವ ಶೌಚಾಲಯವನ್ನು ಬಳಸಬಹುದು ಎಂದು ಹೇಳಿದ್ದಾನೆ. ರೈಲು ಬರುವುದು ತಡವಾಗಬಹುದು ಎಂದು ಆ ಯುವತಿ ಸಾರ್ವಜನಿಕ ಶೌಚಾಲಯದ ಬೀಗದ ಕೀ ತೆಗೆದು, ಒಳಗೆ ಪ್ರವೇಶಿಸಿದಾಗ ಆತ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ.

ಈ ಘಟನೆ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಟೀ ಕುಡಿಯಲು ಹೋಗಿದ್ದ ಆಕೆಯ ಗಂಡ ತನ್ನ ಹೆಂಡತಿಯನ್ನು ಹುಡುಕಿಕೊಂಡು ಬಂದವನು ಶೌಚಾಲಯದ ಬಳಿ ಬಂದು, ತನ್ನ ಪತ್ನಿಯನ್ನು ರಕ್ಷಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

“ಯುವತಿ ನೀಡಿದ ದೂರಿನ ಆಧಾರದ ಮೇಲೆ ನಾವು ಆರೋಪಿಗಳ ವಿರುದ್ಧ ಅತ್ಯಾಚಾರದ ಎಫ್‌ಐಆರ್ (ಐಪಿಸಿ ಸೆಕ್ಷನ್ 376) ದಾಖಲಿಸಿದ್ದೇವೆ. ಆರೋಪಿಗಳನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಎರಡು ತಂಡಗಳನ್ನು ರಚಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: Shocking News: 5 ವರ್ಷಗಳಿಂದ ಅಪ್ಪ, ಅಣ್ಣ, ಅಜ್ಜನಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ!

Crime News: ಅತ್ಯಾಚಾರಿಯನ್ನು ಮರಕ್ಕೆ ಕಟ್ಟಿ, ಹೊಡೆದು ಕೊಂದ ಮಹಿಳೆಯರು!

Published On - 7:51 pm, Mon, 21 March 22

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ