AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rape: ರೈಲಿಗಾಗಿ ಕಾಯುತ್ತಿರುವಾಗ ರೈಲ್ವೆ ಸ್ಟೇಷನ್​ನ ಶೌಚಾಲಯದಲ್ಲಿ ಯುವತಿ ಮೇಲೆ ಅತ್ಯಾಚಾರ!

Crime News: ರೈಲ್ವೆ ಸ್ಟೇಷನ್​ನ ಸಾರ್ವಜನಿಕ ಶೌಚಾಲಯದೊಳಗೆ ಯುವತಿಯನ್ನು ಎಳೆದುಕೊಂಡು ಹೋಗಿ, ಆಕೆಯ ಮೇಲೆ ಅತ್ಯಾಚಾರ ನಡೆಸಲಾಗಿದೆ.

Rape: ರೈಲಿಗಾಗಿ ಕಾಯುತ್ತಿರುವಾಗ ರೈಲ್ವೆ ಸ್ಟೇಷನ್​ನ ಶೌಚಾಲಯದಲ್ಲಿ ಯುವತಿ ಮೇಲೆ ಅತ್ಯಾಚಾರ!
ಅತ್ಯಾಚಾರ
TV9 Web
| Updated By: ಸುಷ್ಮಾ ಚಕ್ರೆ|

Updated on:Mar 21, 2022 | 7:52 PM

Share

ಪ್ರತಾಪ್​ಗಢ: ಉತ್ತರ ಪ್ರದೇಶದಲ್ಲಿ ಹೆಚ್ಚೂ ಕಡಿಮೆ ದಿನವೂ ಒಂದೊಂದು ಅತ್ಯಾಚಾರ ಪ್ರಕರಣಗಳು (Rape Cases) ಬೆಳಕಿಗೆ ಬರುತ್ತಲೇ ಇರುತ್ತವೆ. ಅಪರಾಧ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿರುವ ಉತ್ತರ ಪ್ರದೇಶದಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿದ್ದು, ಪ್ರತಾಪ್‌ಗಢ್ ರೈಲು ನಿಲ್ದಾಣದ ಪಾರ್ಕಿಂಗ್ ಸ್ಟ್ಯಾಂಡ್ ಬಳಿ ಇರುವ ಸಾರ್ವಜನಿಕ ಶೌಚಾಲಯದೊಳಗೆ 20 ವರ್ಷದ ಯುವತಿ ಮೇಲೆ ಅತ್ಯಾಚಾರವೆಸಗಲಾಗಿದೆ. ಮಾರ್ಚ್ 19ರಂದು ಈ ಘಟನೆ ನಡೆದಿದ್ದು, ಈ ಬಗ್ಗೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ರೈಲ್ವೆ ಸ್ಟೇಷನ್​ನ ಸಾರ್ವಜನಿಕ ಶೌಚಾಲಯದೊಳಗೆ ಯುವತಿಯನ್ನು ಎಳೆದುಕೊಂಡು ಹೋಗಿ, ಆಕೆಯ ಮೇಲೆ ಅತ್ಯಾಚಾರ ನಡೆಸಲಾಗಿದೆ. ಈ ಘಟನೆ ಸಂಭವಿಸಿದಾಗ ಆ ಯುವತಿ ತನ್ನ ಪತಿಯೊಂದಿಗೆ ರೈಲು ಹತ್ತಲು ಕಾಯುತ್ತಿದ್ದರು ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಅಧಿಕಾರಿ ಆರ್.ಎನ್. ರೈ ಹೇಳಿದ್ದಾರೆ.

ರೈಲ್ವೆ ಸ್ಟೇಷನ್​​ನಲ್ಲಿ ಯುವತಿಯ ಗಂಡ ಬೆಳಿಗ್ಗೆ ರೈಲಿಗಾಗಿ ಕಾಯುತ್ತಿರುವಾಗ ಆಕೆಯನ್ನು ಒಂಟಿಯಾಗಿ ಬಿಟ್ಟು ಚಹಾ ಖರೀದಿಸಲು ಹೋಗಿದ್ದ. ಆಗ ಅಲ್ಲಿಗೆ ಬಂದ ವ್ಯಕ್ತಿಯೊಬ್ಬ ಆ ಯುವತಿಯ ಬಳಿ ಬಂದು ಒಂದು ಬೀಗ ಕೀ ನೀಡಿ, ಪಾರ್ಕಿಂಗ್ ಬಳಿ ಇರುವ ಶೌಚಾಲಯವನ್ನು ಬಳಸಬಹುದು ಎಂದು ಹೇಳಿದ್ದಾನೆ. ರೈಲು ಬರುವುದು ತಡವಾಗಬಹುದು ಎಂದು ಆ ಯುವತಿ ಸಾರ್ವಜನಿಕ ಶೌಚಾಲಯದ ಬೀಗದ ಕೀ ತೆಗೆದು, ಒಳಗೆ ಪ್ರವೇಶಿಸಿದಾಗ ಆತ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ.

ಈ ಘಟನೆ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಟೀ ಕುಡಿಯಲು ಹೋಗಿದ್ದ ಆಕೆಯ ಗಂಡ ತನ್ನ ಹೆಂಡತಿಯನ್ನು ಹುಡುಕಿಕೊಂಡು ಬಂದವನು ಶೌಚಾಲಯದ ಬಳಿ ಬಂದು, ತನ್ನ ಪತ್ನಿಯನ್ನು ರಕ್ಷಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

“ಯುವತಿ ನೀಡಿದ ದೂರಿನ ಆಧಾರದ ಮೇಲೆ ನಾವು ಆರೋಪಿಗಳ ವಿರುದ್ಧ ಅತ್ಯಾಚಾರದ ಎಫ್‌ಐಆರ್ (ಐಪಿಸಿ ಸೆಕ್ಷನ್ 376) ದಾಖಲಿಸಿದ್ದೇವೆ. ಆರೋಪಿಗಳನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಎರಡು ತಂಡಗಳನ್ನು ರಚಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: Shocking News: 5 ವರ್ಷಗಳಿಂದ ಅಪ್ಪ, ಅಣ್ಣ, ಅಜ್ಜನಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ!

Crime News: ಅತ್ಯಾಚಾರಿಯನ್ನು ಮರಕ್ಕೆ ಕಟ್ಟಿ, ಹೊಡೆದು ಕೊಂದ ಮಹಿಳೆಯರು!

Published On - 7:51 pm, Mon, 21 March 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್