
ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣದಲ್ಲಿ CCB ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ದ್ವಿವೇದಿ ಸ್ನೇಹಿತ ರವಿಶಂಕರ್ನನ್ನು ಕೆಲಸದಿಂದ ಅಮಾನತುಗೊಳಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.
ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ರವಿಶಂಕರ್ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸಾರಿಗೆ ಇಲಾಖೆಗೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಯನಗರದ RTO ಕಚೇರಿಯಲ್ಲಿ ಕೆಲಸ ಮಾಡ್ತಿದ್ದ ರವಿಶಂಕರ್ನನ್ನು ಅಮಾನತುಗೊಳಿಸಿ ಸಾರಿಗೆ ಇಲಾಖೆ ಆಯುಕ್ತ ಎನ್. ಶಿವಕುಮಾರ್ ಅದೇಶ ಹೊರಡಿಸಿದ್ದಾರೆ.
Published On - 6:56 pm, Fri, 4 September 20