AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಖಾ ಕದಿರೇಶ್ ಕೊಲೆಗಡುಕರ ಪತ್ತೆಗೆ 6 ತಂಡ ರಚಿಸಿದ್ದ ಪೊಲೀಸರು: ರಾತ್ರಿಯಿಡೀ ಆರೋಪಿಗಳ ಬೆನ್ನುಬಿದ್ದು ಹುಡುಕಿದ್ದರು

ಕೊಲೆಗೆ ಸಂಬಂಧಿಸಿದಂತೆ ರಾತ್ರಿಯೇ 50ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. 39 ಜನರನ್ನು ಪೊಲೀಸರು ತಮ್ಮ ವಶದಲ್ಲಿಯೇ ಇರಿಸಿಕೊಂಡು ರಾತ್ರಿಯಿಡೀ ವಿಚಾರಣೆ ನಡೆಸಿದ್ದರು. ಶುಕ್ರವಾರ ಮುಂಜಾನೆ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದರು.

ರೇಖಾ ಕದಿರೇಶ್ ಕೊಲೆಗಡುಕರ ಪತ್ತೆಗೆ 6 ತಂಡ ರಚಿಸಿದ್ದ ಪೊಲೀಸರು: ರಾತ್ರಿಯಿಡೀ ಆರೋಪಿಗಳ ಬೆನ್ನುಬಿದ್ದು ಹುಡುಕಿದ್ದರು
ಇನ್​ಸ್ಪೆಕ್ಟರ್ ಶಿವಸ್ವಾಮಿ ಮತ್ತು ಚಿದಾನಂದಮೂರ್ತಿ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jun 25, 2021 | 4:25 PM

Share

ಬೆಂಗಳೂರು: ಮಾಜಿ ಕಾರ್ಪೊರೇಟರ್‌ ರೇಖಾ ಕದಿರೇಶ್​ ಹತ್ಯೆ ಪ್ರಕರಣದ ತನಿಖೆಗೆಂದು ಪೊಲೀಸರು 6 ವಿಶೇಷ ತಂಡಗಳನ್ನು ರಚಿಸಿದ್ದರು. ಕಾಟನ್​ಪೇಟೆ ಇನ್​ಸ್ಪೆಕ್ಟರ್ ಚಿದಾನಂದ ಮೂರ್ತಿ, ಸಿಟಿಮಾರ್ಕೆಟ್ ಇನ್​ಸ್ಪೆಕ್ಟರ್ ಕುಮಾರಸ್ವಾಮಿ, ಕಾಮಾಕ್ಷಿಪಾಳ್ಯ ಇನ್​ಸ್ಪೆಕ್ಟರ್ ಪ್ರಶಾಂತ್, ಉಪ್ಪಾರಪೇಟೆ ಇನ್​ಸ್ಪೆಕ್ಟರ್ ಶಿವಸ್ವಾಮಿ, ಕಲಾಸಿಪಾಳ್ಯ ಇನ್​ಸ್ಪೆಕ್ಟರ್ ಚಂದ್ರಕಾಂತ್, ಚಾಮರಾಜಪೇಟೆ ಇನ್​ಸ್ಪೆಕ್ಟರ್ ಲೋಕಾಪುರ ನೇತೃತ್ವದ ತಂಡಗಳು ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಿದ್ದವು.

ಕೊಲೆಗೆ ಸಂಬಂಧಿಸಿದಂತೆ ರಾತ್ರಿಯೇ 50ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. 39 ಜನರನ್ನು ಪೊಲೀಸರು ತಮ್ಮ ವಶದಲ್ಲಿಯೇ ಇರಿಸಿಕೊಂಡು ರಾತ್ರಿಯಿಡೀ ವಿಚಾರಣೆ ನಡೆಸಿದ್ದರು. ಈ ವೇಳೆ ಪ್ರಕರಣದ ಪ್ರಮುಖ ಆರೋಪಿ ಪೀಟರ್ ಜೊತೆಗೆ ಸಂಪರ್ಕ ಹೊಂದಿದ್ದ ವ್ಯಕ್ತಿಯೊಬ್ಬ ಪೊಲೀಸರಿಗೆ ಸಿಕ್ಕಿಬಿದ್ದ. ಇವನಿಂದ ಮತ್ತಷ್ಟು ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದರು.

ಎಲೆಕ್ಟ್ರಾನಿಕ್ ಸಿಟಿ, ಹೋಸೂರು ರಸ್ತೆ, ಸಿಂಗೇನ ಅಗ್ರಹಾರ, ಚಂದಾಪುರ, ವರ್ತೂರು, ಹುಸ್ಕೂರು ಬಳಿ ಪೊಲೀಸರು ಹುಡುಕಾಟ ನಡೆಸಿದ್ದರು. ಆರೋಪಿಗಳ ಪತ್ತೆಗಾಗಿ ಅಹೋರಾತ್ರಿ ನಡೆದ ಕಾರ್ಯಾಚರಣೆಯಲ್ಲಿ 30ಕ್ಕೂ ಹೆಚ್ಚು ಪೊಲೀಸ್​ ಸಿಬ್ಬಂದಿ ಪಾಲ್ಗೊಂಡಿದ್ದರು.

ಕೊಲೆ ಬಳಿಕೆ ಆರೋಪಿಗಳು ಒಂದೆಡೆ ನೆಲೆ ನಿಂತಿರಲಿಲ್ಲ. ಒಂದು ಕಡೆಯಿಂದ ಮತ್ತೊಂದು ಕಡೆಗೆ ಆಟೊದಲ್ಲಿ ತಿರುಗುತ್ತಲೇ ಇದ್ದರು. ನಸುಕಿನ ಮೂರೂವರೆ ಸುಮಾರಿಗೆ ಆರೋಪಿಗಳು ಆಟೊದಲ್ಲಿ ತಿರುಗಾಡುತ್ತಿರುವ ಮಾಹಿತಿ ಅರಿತ ಪೊಲೀಸರು ಆಟೊ ಬೆನ್ನುಹತ್ತಿದರು. ಆಸ್ಟಿಂಗ್ ಟೌನ್​ನಲ್ಲಿ ಪೊಲೀಸರಿಗೆ ಮೊದಲಬಾರಿಗೆ ಆಟೊ ಬಗ್ಗೆ ಮಾಹಿತಿ ಸಿಕ್ಕಿತ್ತು.

ಆಸ್ಟಿನ್ ಟೌನ್ ಬಳಿಕ ಕೋರಮಂಗಲ, ಎಚ್ಎಸ್ಆರ್ ಲೇಔಟ್, ಎಲೆಕ್ಟ್ರಾನಿಕ್ ಸಿಟಿ, ಸಿಂಗೇನ ಅಗ್ರಹಾರ, ಕೊಡತಿ, ಚಿಕ್ಕನಾಯಕನಹಳ್ಳಿ, ಶ್ರಿರಾಮಪುರ, ರಾಜಾಜಿನಗರ, ವಿಜಯನಗರ, ರಾಜಾಜಿನಗರದಲ್ಲಿ ಆರೋಪಿಗಳು ಸಂಚರಿಸಿದ್ದರು. ಮೈಸೂರು ರಸ್ತೆಯ ಮೂಲಕ ಅರೋಪಿಗಳು ಸಂಚರಿಸಿರುವ ವಿಷಯ ಪೊಲೀಸರಿಗೆ ಪಕ್ಕಾ ಆಗಿತ್ತು. ಆದರೆ ಬೆಳಿಗ್ಗೆ ಒಂಬತ್ತು ಮುಕ್ಕಾಲಿಗೆ ಆರೋಪಿಗಳ ಜಾಡು ಪೊಲೀಸರಿಗೆ ತಪ್ಪಿಹೋಗಿತ್ತು.

ಸ್ವಲ್ಪ ಹೊತ್ತಿನ ನಂತರ ಮಾಗಡಿ ರಸ್ತೆಯಲ್ಲಿ ಆರೋಪಿಗಳ ಚಲನಚಲನದ ಮಾಹಿತಿ ಸಿಕ್ಕಾಗ ಪೊಲೀಸರು ಕಾರ್ಯಾಚರಣೆಯನ್ನು ಇನ್ನಷ್ಟು ಚುರುಕುಗೊಳಿಸಿದರು. ಹಲವು ತಂಡಗಳೊಂದಿಗೆ ಆರೋಪಿಗಳ ಬೆನ್ನುಹತ್ತಿದರು. ಹನ್ನೆರಡು ಗಂಟೆ ವೇಳೆಗೆ ಸುಂಕದಕಟ್ಟೆ ಬಳಿಯ ಬಜಾಜ್ ಗ್ರೌಂಡ್ ಬಳಿ ಆರೋಪಿಗಳು ಇರುವ ಮಾಹಿತಿಯನ್ನು ದೃಢಪಡಿಸಿಕೊಂಡ ಉಪ್ಪಾರಪೇಟೆ ಇನ್​ಸ್ಪೆಕ್ಟರ್​ ಶಿವಸ್ವಾಮಿ ಮತ್ತು ಕಾಟನ್​ಪೇಟೆ ಇನ್​ಸ್ಪೆಕ್ಟರ್ ಚಿದಾನಂದಮೂರ್ತಿ ಆರೋಪಿಗಳನ್ನು ಗುರುತಿಸಿ, ಬಂಧಿಸಲು ಮುಂದಾದರು.

ಮದ್ಯಪಾನ ಮಾಡುತ್ತಿದ್ದ ಆರೋಪಿಗಳು ಸಬ್​ಇನ್​ಸ್ಪೆಕ್ಟರ್ ಕರಿಯಣ್ಣ ಮತ್ತು ಹೆಡ್ ಕಾನ್​ಸ್ಟೆಬಲ್ ಚಂದ್ರಶೇಖರ್ ಮೇಲೆ ಹಲ್ಲೆ ಮಾಡಲು ಮುಂದಾದರು. ಈ ವೇಳೆ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ ಪೊಲೀಸರು, ಅರೋಪಿಗಳ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದುಕೊಂಡು ಲಕ್ಷ್ಮೀ ಅಸ್ಪತ್ರೆಗೆ ದಾಖಲು ಮಾಡಿದರು. ಮಾಗಡಿ ರಸ್ತೆ ಠಾಣೆಯ ಇನ್​ಸ್ಪೆಕ್ಟರ್ ಶ್ರೀನಿವಾಸ್ ನೇತೃತ್ವದ ತಂಡವು ತಾಂತ್ರಿಕ ಕೆಲಸಗಳನ್ನು ನಿರ್ವಹಿಸಿತು.

(Rekha Kadiresh Murder Case police operation whole night to arrest accused)

ಇದನ್ನೂ ಓದಿ: Rekha Kadiresh: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್​ರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಇದನ್ನೂ ಓದಿ: Rekha Kadiresh ಕೌಟುಂಬಿಕ ಕಲಹಕ್ಕೆ ರೇಖಾ ಕದಿರೇಶ್ ಕೊಲೆ? ಕುಟುಂಬದ ನಾಲ್ವರು ಅರೆಸ್ಟ್

Published On - 4:08 pm, Fri, 25 June 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ