AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಟಿ ವೇಳೆ ಪೆಗ್​ ಹಾಕುವ ವಿಚಾರಕ್ಕೆ ಗಲಾಟೆ; ಸ್ನೇಹಿತನಿಂದಲೇ ಕೊಲೆಯಾದ ರಿಟಾಯರ್ಡ್ ಎಎಸ್​ಐ ಪುತ್ರ

ಎಣ್ಣೆ ಪಾರ್ಟಿ ವೇಳೆ ಸರಿಯಾಗಿ ಪೆಗ್ ಹಾಕಲು ಬರಲ್ಲವೆಂದು ನಡೆದ ಗಲಾಟೆಯಲ್ಲಿ ಆತ್ಮೀಯ ಸ್ನೇಹಿತನಿಂದಲೇ ಎಎಸ್​ಐ ಪುತ್ರ ಕೊಲೆಯಾದ ಘಟನೆ ರಾಮನಗರ(Ramanagara)ಜಿಲ್ಲೆಯ ಕನಕಪುರ ತಾಲೂಕಿನ ಕಲ್ಕೆರೆದೊಡ್ಡಿ ಗ್ರಾಮದಲ್ಲಿ ನಡೆದಿದೆ. ದೀಪಕ್(23)​​ ಮೃತ ರ್ದುದೈವಿ.

ಪಾರ್ಟಿ ವೇಳೆ ಪೆಗ್​ ಹಾಕುವ ವಿಚಾರಕ್ಕೆ ಗಲಾಟೆ; ಸ್ನೇಹಿತನಿಂದಲೇ ಕೊಲೆಯಾದ ರಿಟಾಯರ್ಡ್ ಎಎಸ್​ಐ ಪುತ್ರ
ಸ್ನೇಹಿತನಿಂದಲೇ ಕೊಲೆಯಾದ ರಿಟಾಯರ್ಡ್ ಎಎಸ್​ಐ ಪುತ್ರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ | Edited By: ಕಿರಣ್ ಹನುಮಂತ್​ ಮಾದಾರ್|

Updated on:Dec 25, 2023 | 5:13 PM

Share

ರಾಮನಗರ‌, ಡಿ.25: ಎಣ್ಣೆ ಪಾರ್ಟಿ ವೇಳೆ ಸರಿಯಾಗಿ ಪೆಗ್ ಹಾಕಲು ಬರಲ್ಲವೆಂದು ನಡೆದ ಗಲಾಟೆಯಲ್ಲಿ ಆತ್ಮೀಯ ಸ್ನೇಹಿತನಿಂದಲೇ ನಿವೃತ್ತ ಎಎಸ್​ಐ ಪುತ್ರ ಕೊಲೆಯಾದ ಘಟನೆ ರಾಮನಗರ(Ramanagara)ಜಿಲ್ಲೆಯ ಕನಕಪುರ ತಾಲೂಕಿನ ಕಲ್ಕೆರೆದೊಡ್ಡಿ ಗ್ರಾಮದಲ್ಲಿ ನಡೆದಿದೆ. ದೀಪಕ್(23)​​ ಮೃತ ರ್ದುದೈವಿ. ಮನೆ ಕಟ್ಟಿಸುತ್ತಿದ್ದೇನೆ ಪಾರ್ಟಿ ಕೊಡುತ್ತೇನೆ ಬಾ ಎಂದು ಆರೋಪಿ ಪ್ರಸಾದ್ ಕರೆದಿದ್ದ. ಈ ಹಿನ್ನಲೆ ನಿನ್ನೆ(ಡಿ.24) ರಾತ್ರಿ ಭರ್ಜರಿ ಪಾರ್ಟಿ ಮಾಡಿದ್ದಾರೆ. ಈ ವೇಳೆ ಸರಿಯಾಗಿ ಪೆಗ್ ಹಾಕು ಎಂದು ಸ್ನೇಹಿತ ಪ್ರಸಾದ್ ಕೆನ್ನೆಗೆ ದೀಪಕ್ ಹೊಡೆದಿದ್ದಾನೆ. ಸ್ನೇಹಿತ ದೀಪಕ್ ಮಾತಿಗೆ ಆರೋಪಿ ಪ್ರಸಾದ್​ಗೆ ಕೋಪ ಬಂದಿದೆ.

ದೀಪಕ್ ಮಲಗಿದಾಗ ತಲೆಗೆ ಇಟ್ಟಿಗೆ ಎತ್ತಿ ಹಾಕಿ ಬರ್ಬರ ಹತ್ಯೆ

ಇನ್ನು ದೀಪಕ್​ ಕೆನ್ನೆಗೆ ಹೊಡೆಯುತ್ತಿದ್ದಂತೆ ಪ್ರಸಾದ್​ಗೆ ಕೋಪ ಬಂದಿದೆ. ಆದರೂ, ಆ ಕ್ಷಣದಲ್ಲಿ ತಡಕೊಂಡ ಪ್ರಸಾದ್​, ದೀಪಕ್ ಜೊತೆಯೇ ಮಲಗುವ ರೀತಿ ನಾಟಕವಾಡಿದ್ದಾನೆ. ಅದರಂತೆ ದೀಪಕ್ ಮಲಗಿದಾಗ ಪ್ರಸಾದ್​, ತಲೆಗೆ ಇಟ್ಟಿಗೆ ಎತ್ತಿ ಹಾಕಿ ಬರ್ಬರ ಹತ್ಯೆ ಮಾಡಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಪೆಗ್ ವಿಚಾರಕ್ಕಾಗಿಯೇ ಕೊಲೆ ನಡೆದಿದ್ಯಾ ಅಥವಾ ಹಿಂದಿನ‌ ದ್ವೇಷ ಏನಾದ್ರೂ ಇದೆಯಾ ಎಂದು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಹಾವೇರಿ: ಹೆತ್ತವರ ಕಣ್ಣು ಮುಂದೆಯೇ ಹರಿತು ಮಗಳ ನೆತ್ತರು!ಕೊಲೆ ಮಾಡಿದ ಪತಿಗೆ ಗ್ರಾಮಸ್ಥರಿಂದ ಧರ್ಮದೇಟು

ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ಹೊರವಲಯದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟು ಭಸ್ಮವಾಗಿದೆ. ಹೊನ್ನಾಳಿ ಮೂಲದ ರಮೇಶಾಚಾರಿಗೆ ಸೇರಿದ ಕಾರು ಇದಾಗಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದಾವಣಗೆರೆಯಿಂದ ಬೆಂಗಳೂರು ಕಡೆ ತೆರಳುವಾಗ ಈ ದುರ್ಟಘನೆ ನಡೆದಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆ ಸಂಬಂಧ ಸ್ಥಳಕ್ಕೆ ಹಿರಿಯೂರು ಟೌನ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:07 pm, Mon, 25 December 23

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ