AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಟಿ ವೇಳೆ ಪೆಗ್​ ಹಾಕುವ ವಿಚಾರಕ್ಕೆ ಗಲಾಟೆ; ಸ್ನೇಹಿತನಿಂದಲೇ ಕೊಲೆಯಾದ ರಿಟಾಯರ್ಡ್ ಎಎಸ್​ಐ ಪುತ್ರ

ಎಣ್ಣೆ ಪಾರ್ಟಿ ವೇಳೆ ಸರಿಯಾಗಿ ಪೆಗ್ ಹಾಕಲು ಬರಲ್ಲವೆಂದು ನಡೆದ ಗಲಾಟೆಯಲ್ಲಿ ಆತ್ಮೀಯ ಸ್ನೇಹಿತನಿಂದಲೇ ಎಎಸ್​ಐ ಪುತ್ರ ಕೊಲೆಯಾದ ಘಟನೆ ರಾಮನಗರ(Ramanagara)ಜಿಲ್ಲೆಯ ಕನಕಪುರ ತಾಲೂಕಿನ ಕಲ್ಕೆರೆದೊಡ್ಡಿ ಗ್ರಾಮದಲ್ಲಿ ನಡೆದಿದೆ. ದೀಪಕ್(23)​​ ಮೃತ ರ್ದುದೈವಿ.

ಪಾರ್ಟಿ ವೇಳೆ ಪೆಗ್​ ಹಾಕುವ ವಿಚಾರಕ್ಕೆ ಗಲಾಟೆ; ಸ್ನೇಹಿತನಿಂದಲೇ ಕೊಲೆಯಾದ ರಿಟಾಯರ್ಡ್ ಎಎಸ್​ಐ ಪುತ್ರ
ಸ್ನೇಹಿತನಿಂದಲೇ ಕೊಲೆಯಾದ ರಿಟಾಯರ್ಡ್ ಎಎಸ್​ಐ ಪುತ್ರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Dec 25, 2023 | 5:13 PM

Share

ರಾಮನಗರ‌, ಡಿ.25: ಎಣ್ಣೆ ಪಾರ್ಟಿ ವೇಳೆ ಸರಿಯಾಗಿ ಪೆಗ್ ಹಾಕಲು ಬರಲ್ಲವೆಂದು ನಡೆದ ಗಲಾಟೆಯಲ್ಲಿ ಆತ್ಮೀಯ ಸ್ನೇಹಿತನಿಂದಲೇ ನಿವೃತ್ತ ಎಎಸ್​ಐ ಪುತ್ರ ಕೊಲೆಯಾದ ಘಟನೆ ರಾಮನಗರ(Ramanagara)ಜಿಲ್ಲೆಯ ಕನಕಪುರ ತಾಲೂಕಿನ ಕಲ್ಕೆರೆದೊಡ್ಡಿ ಗ್ರಾಮದಲ್ಲಿ ನಡೆದಿದೆ. ದೀಪಕ್(23)​​ ಮೃತ ರ್ದುದೈವಿ. ಮನೆ ಕಟ್ಟಿಸುತ್ತಿದ್ದೇನೆ ಪಾರ್ಟಿ ಕೊಡುತ್ತೇನೆ ಬಾ ಎಂದು ಆರೋಪಿ ಪ್ರಸಾದ್ ಕರೆದಿದ್ದ. ಈ ಹಿನ್ನಲೆ ನಿನ್ನೆ(ಡಿ.24) ರಾತ್ರಿ ಭರ್ಜರಿ ಪಾರ್ಟಿ ಮಾಡಿದ್ದಾರೆ. ಈ ವೇಳೆ ಸರಿಯಾಗಿ ಪೆಗ್ ಹಾಕು ಎಂದು ಸ್ನೇಹಿತ ಪ್ರಸಾದ್ ಕೆನ್ನೆಗೆ ದೀಪಕ್ ಹೊಡೆದಿದ್ದಾನೆ. ಸ್ನೇಹಿತ ದೀಪಕ್ ಮಾತಿಗೆ ಆರೋಪಿ ಪ್ರಸಾದ್​ಗೆ ಕೋಪ ಬಂದಿದೆ.

ದೀಪಕ್ ಮಲಗಿದಾಗ ತಲೆಗೆ ಇಟ್ಟಿಗೆ ಎತ್ತಿ ಹಾಕಿ ಬರ್ಬರ ಹತ್ಯೆ

ಇನ್ನು ದೀಪಕ್​ ಕೆನ್ನೆಗೆ ಹೊಡೆಯುತ್ತಿದ್ದಂತೆ ಪ್ರಸಾದ್​ಗೆ ಕೋಪ ಬಂದಿದೆ. ಆದರೂ, ಆ ಕ್ಷಣದಲ್ಲಿ ತಡಕೊಂಡ ಪ್ರಸಾದ್​, ದೀಪಕ್ ಜೊತೆಯೇ ಮಲಗುವ ರೀತಿ ನಾಟಕವಾಡಿದ್ದಾನೆ. ಅದರಂತೆ ದೀಪಕ್ ಮಲಗಿದಾಗ ಪ್ರಸಾದ್​, ತಲೆಗೆ ಇಟ್ಟಿಗೆ ಎತ್ತಿ ಹಾಕಿ ಬರ್ಬರ ಹತ್ಯೆ ಮಾಡಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಪೆಗ್ ವಿಚಾರಕ್ಕಾಗಿಯೇ ಕೊಲೆ ನಡೆದಿದ್ಯಾ ಅಥವಾ ಹಿಂದಿನ‌ ದ್ವೇಷ ಏನಾದ್ರೂ ಇದೆಯಾ ಎಂದು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಹಾವೇರಿ: ಹೆತ್ತವರ ಕಣ್ಣು ಮುಂದೆಯೇ ಹರಿತು ಮಗಳ ನೆತ್ತರು!ಕೊಲೆ ಮಾಡಿದ ಪತಿಗೆ ಗ್ರಾಮಸ್ಥರಿಂದ ಧರ್ಮದೇಟು

ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ಹೊರವಲಯದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟು ಭಸ್ಮವಾಗಿದೆ. ಹೊನ್ನಾಳಿ ಮೂಲದ ರಮೇಶಾಚಾರಿಗೆ ಸೇರಿದ ಕಾರು ಇದಾಗಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದಾವಣಗೆರೆಯಿಂದ ಬೆಂಗಳೂರು ಕಡೆ ತೆರಳುವಾಗ ಈ ದುರ್ಟಘನೆ ನಡೆದಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆ ಸಂಬಂಧ ಸ್ಥಳಕ್ಕೆ ಹಿರಿಯೂರು ಟೌನ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:07 pm, Mon, 25 December 23

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More