Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಟಿ ವೇಳೆ ಪೆಗ್​ ಹಾಕುವ ವಿಚಾರಕ್ಕೆ ಗಲಾಟೆ; ಸ್ನೇಹಿತನಿಂದಲೇ ಕೊಲೆಯಾದ ರಿಟಾಯರ್ಡ್ ಎಎಸ್​ಐ ಪುತ್ರ

ಎಣ್ಣೆ ಪಾರ್ಟಿ ವೇಳೆ ಸರಿಯಾಗಿ ಪೆಗ್ ಹಾಕಲು ಬರಲ್ಲವೆಂದು ನಡೆದ ಗಲಾಟೆಯಲ್ಲಿ ಆತ್ಮೀಯ ಸ್ನೇಹಿತನಿಂದಲೇ ಎಎಸ್​ಐ ಪುತ್ರ ಕೊಲೆಯಾದ ಘಟನೆ ರಾಮನಗರ(Ramanagara)ಜಿಲ್ಲೆಯ ಕನಕಪುರ ತಾಲೂಕಿನ ಕಲ್ಕೆರೆದೊಡ್ಡಿ ಗ್ರಾಮದಲ್ಲಿ ನಡೆದಿದೆ. ದೀಪಕ್(23)​​ ಮೃತ ರ್ದುದೈವಿ.

ಪಾರ್ಟಿ ವೇಳೆ ಪೆಗ್​ ಹಾಕುವ ವಿಚಾರಕ್ಕೆ ಗಲಾಟೆ; ಸ್ನೇಹಿತನಿಂದಲೇ ಕೊಲೆಯಾದ ರಿಟಾಯರ್ಡ್ ಎಎಸ್​ಐ ಪುತ್ರ
ಸ್ನೇಹಿತನಿಂದಲೇ ಕೊಲೆಯಾದ ರಿಟಾಯರ್ಡ್ ಎಎಸ್​ಐ ಪುತ್ರ
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಕಿರಣ್ ಹನುಮಂತ್​ ಮಾದಾರ್

Updated on:Dec 25, 2023 | 5:13 PM

ರಾಮನಗರ‌, ಡಿ.25: ಎಣ್ಣೆ ಪಾರ್ಟಿ ವೇಳೆ ಸರಿಯಾಗಿ ಪೆಗ್ ಹಾಕಲು ಬರಲ್ಲವೆಂದು ನಡೆದ ಗಲಾಟೆಯಲ್ಲಿ ಆತ್ಮೀಯ ಸ್ನೇಹಿತನಿಂದಲೇ ನಿವೃತ್ತ ಎಎಸ್​ಐ ಪುತ್ರ ಕೊಲೆಯಾದ ಘಟನೆ ರಾಮನಗರ(Ramanagara)ಜಿಲ್ಲೆಯ ಕನಕಪುರ ತಾಲೂಕಿನ ಕಲ್ಕೆರೆದೊಡ್ಡಿ ಗ್ರಾಮದಲ್ಲಿ ನಡೆದಿದೆ. ದೀಪಕ್(23)​​ ಮೃತ ರ್ದುದೈವಿ. ಮನೆ ಕಟ್ಟಿಸುತ್ತಿದ್ದೇನೆ ಪಾರ್ಟಿ ಕೊಡುತ್ತೇನೆ ಬಾ ಎಂದು ಆರೋಪಿ ಪ್ರಸಾದ್ ಕರೆದಿದ್ದ. ಈ ಹಿನ್ನಲೆ ನಿನ್ನೆ(ಡಿ.24) ರಾತ್ರಿ ಭರ್ಜರಿ ಪಾರ್ಟಿ ಮಾಡಿದ್ದಾರೆ. ಈ ವೇಳೆ ಸರಿಯಾಗಿ ಪೆಗ್ ಹಾಕು ಎಂದು ಸ್ನೇಹಿತ ಪ್ರಸಾದ್ ಕೆನ್ನೆಗೆ ದೀಪಕ್ ಹೊಡೆದಿದ್ದಾನೆ. ಸ್ನೇಹಿತ ದೀಪಕ್ ಮಾತಿಗೆ ಆರೋಪಿ ಪ್ರಸಾದ್​ಗೆ ಕೋಪ ಬಂದಿದೆ.

ದೀಪಕ್ ಮಲಗಿದಾಗ ತಲೆಗೆ ಇಟ್ಟಿಗೆ ಎತ್ತಿ ಹಾಕಿ ಬರ್ಬರ ಹತ್ಯೆ

ಇನ್ನು ದೀಪಕ್​ ಕೆನ್ನೆಗೆ ಹೊಡೆಯುತ್ತಿದ್ದಂತೆ ಪ್ರಸಾದ್​ಗೆ ಕೋಪ ಬಂದಿದೆ. ಆದರೂ, ಆ ಕ್ಷಣದಲ್ಲಿ ತಡಕೊಂಡ ಪ್ರಸಾದ್​, ದೀಪಕ್ ಜೊತೆಯೇ ಮಲಗುವ ರೀತಿ ನಾಟಕವಾಡಿದ್ದಾನೆ. ಅದರಂತೆ ದೀಪಕ್ ಮಲಗಿದಾಗ ಪ್ರಸಾದ್​, ತಲೆಗೆ ಇಟ್ಟಿಗೆ ಎತ್ತಿ ಹಾಕಿ ಬರ್ಬರ ಹತ್ಯೆ ಮಾಡಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಪೆಗ್ ವಿಚಾರಕ್ಕಾಗಿಯೇ ಕೊಲೆ ನಡೆದಿದ್ಯಾ ಅಥವಾ ಹಿಂದಿನ‌ ದ್ವೇಷ ಏನಾದ್ರೂ ಇದೆಯಾ ಎಂದು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಹಾವೇರಿ: ಹೆತ್ತವರ ಕಣ್ಣು ಮುಂದೆಯೇ ಹರಿತು ಮಗಳ ನೆತ್ತರು!ಕೊಲೆ ಮಾಡಿದ ಪತಿಗೆ ಗ್ರಾಮಸ್ಥರಿಂದ ಧರ್ಮದೇಟು

ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ಹೊರವಲಯದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟು ಭಸ್ಮವಾಗಿದೆ. ಹೊನ್ನಾಳಿ ಮೂಲದ ರಮೇಶಾಚಾರಿಗೆ ಸೇರಿದ ಕಾರು ಇದಾಗಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದಾವಣಗೆರೆಯಿಂದ ಬೆಂಗಳೂರು ಕಡೆ ತೆರಳುವಾಗ ಈ ದುರ್ಟಘನೆ ನಡೆದಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆ ಸಂಬಂಧ ಸ್ಥಳಕ್ಕೆ ಹಿರಿಯೂರು ಟೌನ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:07 pm, Mon, 25 December 23

ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?