AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಕೇಂದ್ರ ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಅನುಮಾನಾಸ್ಪದ ಸಾವು

ಕೇಂದ್ರ ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮಾನಸಗಂಗೋತ್ರಿ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ನಡೆದಿದೆ.

ಮೈಸೂರು: ಕೇಂದ್ರ ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಅನುಮಾನಾಸ್ಪದ ಸಾವು
ಕೇಂದ್ರ ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಆರ್​.ಎಸ್​.ಕುಲಕರ್ಣಿ
TV9 Web
| Updated By: ವಿವೇಕ ಬಿರಾದಾರ|

Updated on:Nov 05, 2022 | 9:04 PM

Share

ಮೈಸೂರು: ಕೇಂದ್ರ ಗುಪ್ತಚರ ಇಲಾಖೆ (Intelligence Bureau-IB) ನಿವೃತ್ತ ಅಧಿಕಾರಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮಾನಸಗಂಗೋತ್ರಿ ವಿಶ್ವವಿದ್ಯಾಲಯದ (Manasagangotri university)ಕ್ಯಾಂಪಸ್‌ನಲ್ಲಿ ನಡೆದಿದೆ. ಆರ್​.ಎಸ್​.ಕುಲಕರ್ಣಿ (83) ಮೃತ ನಿವೃತ್ತ ಅಧಿಕಾರಿ. ನಿನ್ನೆ (ನ. 4) ರ ಸಂಜೆ ಆರ್​.ಎಸ್​.ಕುಲಕರ್ಣಿ ಅವರು ಕ್ಯಾಂಪಸ್​​ನ ಕಂಪ್ಯೂಟರ್ ಸೈನ್ಸ್ ವಿಭಾಗದ ಪಕ್ಕದ ರಸ್ತೆಯಲ್ಲಿ ವಾಕ್ ಮಾಡುತ್ತಿದ್ದರು. ಈ ವೇಳೆ ಕಾರು ಡಿಕ್ಕಿಯಾಗಿದೆ. ಇದರಿಂದ ಗಾಯಗೊಂಡಿದ್ದ ಆರ್​.ಎಸ್​.ಕುಲಕರ್ಣಿ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸದ್ಯ ಕುಲಕರ್ಣಿ ಕುಟುಂಬಸ್ಥರು ಇದೊಂದು ಕೊಲೆ ಎಂದು ಆರೋಪ ಮಾಡುತ್ತಿದ್ದಾರೆ. ಜಯಲಕ್ಷ್ಮೀ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಅಪಘಾತ ಮಾಡಿದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅಪಘಾತದ ದೃಶ್ಯ  ಸಿಸಿ ಕ್ಯಾಮೆರಾ ಸೆರೆಯಾಗಿದೆ. ನಿವೃತ್ತ ಅಧಿಕಾರಿ ಪಕ್ಕಕ್ಕೆ ಹೋದರು, ಡಿಕ್ಕಿ ಹೊಡೆದಿದ್ದಾರೆ.  ಅಪಘಾತಕ್ಕೆ ನಂಬರ್ ಪ್ಲೇಟ್ ಇಲ್ಲದ ಕಾರು ಬಳಸಿದ್ದು, ಯೋಜಿತ ಕೊಲೆ ಎಂದು ಶಂಕೆ ವ್ಯಕ್ತವಾಗಿದೆ.

ಆಸ್ತಿ ವಿಚಾರವಾಗಿ ಸಹೋದರರಿಂದಲೇ ಅಣ್ಣನ ಬರ್ಬರ ಹತ್ಯೆ

ಉತ್ತರ ಕನ್ನಡ: ಆಸ್ತಿ ವಿಚಾರವಾಗಿ ಸಹೋದರರಿಂದಲೇ ಅಣ್ಣನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹೊನ್ನಾವರ ತಾಲೂಕಿನ ತೊಟ್ಟಿಲಗುಂಡಿಯಲ್ಲಿ ನಡೆದಿದೆ. ಹನುಮಂತ ಹೊನ್ನಪ್ಪ ನಾಯ್ಕ್ (54) ಕೊಲೆಯಾದ ವ್ಯಕ್ತಿ. ಘಟನೆಯಲ್ಲಿ ಮೃತನ ಸೋದರ ಮಾವ ಮಾರುತಿ ನಾಯ್ಕ್ (70)ಗೆ ಗಂಭೀರ ಗಾಯಗಳಾಗಿದ್ದು, ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿನಾಯಕ ನಾಯ್ಕ, ಚಿದಾನಂದ ನಾಯ್ಕ್  ಕೊಲೆ ಆರೋಪಿಗಳಾಗಿದ್ದು, ಹೊನ್ನಾವರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳು ಹನುಮಂತ ಹೊನ್ನಪ್ಪ ನಾಯ್ಕ್​ಗೆ  ರಾಡ್‌ನಲ್ಲಿ ತಲೆಗೆ ಹೊಡೆದಿದ್ದಾರೆ.  ಇದರಿಂದ ಗಂಭೀರ ಗಾಯಗೊಂಡಿದ್ದ ಹೊನ್ನಪ್ಪ ನಾಯ್ಕ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಹಿಂದೆ ಕೂಡಾ ಅಡಿಕೆ, ಆಸ್ತಿ ವಿಚಾರದಲ್ಲಿ ಅಣ್ಣ ತಮ್ಮಂದಿರಿ ನಡುವೆ ಗಲಾಟೆಗಳಾಗಿದ್ದವು.  ಇಂದು ಈ ಜಗಳ ತಾರಕಕ್ಕೇರಿ ತಮ್ಮಂದಿರು, ಅಣ್ಣನನ್ನು ಕೊಲೆ ಮಾಡಿದ್ದಾರೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:54 pm, Sat, 5 November 22

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್