AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನು ವ್ಯಾಜ್ಯ: 6 ಲಕ್ಷ ಲಂಚ ಕೇಳಿದ್ದ RI-ಕಾನ್ಸ್​ಟೇಬಲ್ ಬಂಧನ.. ಠಾಣೆಯಿಂದ ಪರಾರಿಯಾದ ಇನ್ಸ್​ಪೆಕ್ಟರ್

ಹಣ ಪಡೆಯುವಂತೆ ಸೂಚಿಸಿದ್ದ ಆರೋಪ ಹೊತ್ತಿರುವ ಇನ್ಸ್​ಪೆಕ್ಟರ್ ಯಶವಂತ್ ಠಾಣೆಯಿಂದ ಪರಾರಿಯಾಗಿದ್ದಾರೆ. ಎಸಿಬಿ ದಾಳಿ ವೇಳೆ ಎಸ್ಕೇಪ್ ಆಗಿರುವ ಇನ್ಸ್​ಪೆಕ್ಟರ್ ಯಶವಂತ್​ಗಾಗಿ ಹುಡುಕಾಟ ಶುರುವಾಗಿದೆ. ಹೆಡ್ ಕಾನ್ಸ್​​ಟೇಬಲ್ ರಾಜು ಹಾಗೂ ಆರ್ ಐ ಹನುಮಯ್ಯರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಜಮೀನು ವ್ಯಾಜ್ಯ: 6 ಲಕ್ಷ ಲಂಚ ಕೇಳಿದ್ದ RI-ಕಾನ್ಸ್​ಟೇಬಲ್ ಬಂಧನ.. ಠಾಣೆಯಿಂದ ಪರಾರಿಯಾದ ಇನ್ಸ್​ಪೆಕ್ಟರ್
ಪುಟ್ಟ ಹನುಮಯ್ಯ ಹಾಗೂ ರಾಜು
ಪೃಥ್ವಿಶಂಕರ
|

Updated on:Jan 08, 2021 | 1:02 PM

Share

ಬೆಂಗಳೂರು:  ಜಮೀನುದಾರರೊಬ್ಬರ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ರೆವಿನ್ಯೂ‌ಇನ್ಸ್ ಪೆಕ್ಟರ್ ಹಾಗೂ ಚಿಕ್ಕಜಾಲ ಹೆಡ್ ಕಾನ್ಸ್​ಟೇಬಲ್ ರಾಜು ಎಂಬುವವರನ್ನ ಎಸಿಬಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ನಗರದ ಚಿಕ್ಕಜಾಲದಲ್ಲಿ ಈ ಪ್ರಕರಣ ನಡೆದಿದ್ದು, ಜಮೀನು ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರು ವ್ಯಾಜ್ಯ ಪ್ರಕರಣದಲ್ಲಿ ಸಿಲುಕಿದ್ದರು. ಇದನ್ನು ಇತ್ಯರ್ಥಪಡಿಸಲು RI ಪುಟ್ಟಹನುಮಯ್ಯ 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಜೊತೆಗೆ ಜಮೀನಿನ ವಿಚಾರಕ್ಕೆ ಸಂಬಂಧಪಟ್ಟಂತೆ ರಕ್ಷಣೆ ನೀಡಲು ಹೆಡ್ ಕಾನ್ಸ್​ಟೇಬಲ್ ರಾಜು 6 ಲಕ್ಷ ಹಣದ ಬೇಡಿಕೆ ಇಟ್ಟಿದ್ದರು.

ಆದರೆ ಇದಕ್ಕೆ ಬಗ್ಗದ ಸದರಿ ಜಮೀನು ಮಾಲೀಕ, ಎಸಿಬಿಗೆ ದೂರು ನೀಡಿದ್ದರು. ದೂರುದಾರ ಕೊಟ್ಟ ಮಾಹಿತಿ ಮೇರೆಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಬಿ ದಾಳಿ ವೇಳೆ ಲಂಚ ಕೇಳಿದ್ದ ಆರೋಪಿಗಳು ರೆಡ್ ಹ್ಯಾಂಡ್ ಆಗಿ ತಗಲಾಕಿಕೊಂಡಿದ್ದಾರೆ. ಈ ಮಧ್ಯೆ, ಹೆಡ್ ಕಾನ್ಸ್​ಟೇಬಲ್ ರಾಜುಗೆ ಹಣ ಪಡೆಯುವಂತೆ ಇನ್ಸ್​ಪೆಕ್ಟರ್ ಸೂಚಿಸಿದ್ದರು ಎಂದು ಚಿಕ್ಕಜಾಲ ಇನ್ಸ್​ಪೆಕ್ಟರ್ ಯಶವಂತ್ ವಿರುದ್ಧವೂ ಆರೋಪ ಕೇಳಿಬಂದಿದೆ.

ಈ ಮಧ್ಯೆ, ಹಣ ಪಡೆಯುವಂತೆ ಸೂಚಿಸಿದ್ದ ಆರೋಪ ಹೊತ್ತಿರುವ ಇನ್ಸ್​ಪೆಕ್ಟರ್ ಯಶವಂತ್ ಠಾಣೆಯಿಂದ ಪರಾರಿಯಾಗಿದ್ದಾರೆ. ಎಸಿಬಿ ದಾಳಿ ವೇಳೆ ಎಸ್ಕೇಪ್ ಆಗಿರುವ ಇನ್ಸ್​ಪೆಕ್ಟರ್ ಯಶವಂತ್​ಗಾಗಿ ಹುಡುಕಾಟ ಶುರುವಾಗಿದೆ. ಹೆಡ್ ಕಾನ್ಸ್​​ಟೇಬಲ್ ರಾಜು ಹಾಗೂ ಆರ್ ಐ ಹನುಮಯ್ಯರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಎಸಿಬಿ ಬಲೆಗೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಭೂಮಾಪನಾ ಸರ್ವೇಯರ್

Published On - 12:53 pm, Fri, 8 January 21

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!