AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನು ವ್ಯಾಜ್ಯ: 6 ಲಕ್ಷ ಲಂಚ ಕೇಳಿದ್ದ RI-ಕಾನ್ಸ್​ಟೇಬಲ್ ಬಂಧನ.. ಠಾಣೆಯಿಂದ ಪರಾರಿಯಾದ ಇನ್ಸ್​ಪೆಕ್ಟರ್

ಹಣ ಪಡೆಯುವಂತೆ ಸೂಚಿಸಿದ್ದ ಆರೋಪ ಹೊತ್ತಿರುವ ಇನ್ಸ್​ಪೆಕ್ಟರ್ ಯಶವಂತ್ ಠಾಣೆಯಿಂದ ಪರಾರಿಯಾಗಿದ್ದಾರೆ. ಎಸಿಬಿ ದಾಳಿ ವೇಳೆ ಎಸ್ಕೇಪ್ ಆಗಿರುವ ಇನ್ಸ್​ಪೆಕ್ಟರ್ ಯಶವಂತ್​ಗಾಗಿ ಹುಡುಕಾಟ ಶುರುವಾಗಿದೆ. ಹೆಡ್ ಕಾನ್ಸ್​​ಟೇಬಲ್ ರಾಜು ಹಾಗೂ ಆರ್ ಐ ಹನುಮಯ್ಯರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಜಮೀನು ವ್ಯಾಜ್ಯ: 6 ಲಕ್ಷ ಲಂಚ ಕೇಳಿದ್ದ RI-ಕಾನ್ಸ್​ಟೇಬಲ್ ಬಂಧನ.. ಠಾಣೆಯಿಂದ ಪರಾರಿಯಾದ ಇನ್ಸ್​ಪೆಕ್ಟರ್
ಪುಟ್ಟ ಹನುಮಯ್ಯ ಹಾಗೂ ರಾಜು
ಪೃಥ್ವಿಶಂಕರ
|

Updated on:Jan 08, 2021 | 1:02 PM

Share

ಬೆಂಗಳೂರು:  ಜಮೀನುದಾರರೊಬ್ಬರ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ರೆವಿನ್ಯೂ‌ಇನ್ಸ್ ಪೆಕ್ಟರ್ ಹಾಗೂ ಚಿಕ್ಕಜಾಲ ಹೆಡ್ ಕಾನ್ಸ್​ಟೇಬಲ್ ರಾಜು ಎಂಬುವವರನ್ನ ಎಸಿಬಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ನಗರದ ಚಿಕ್ಕಜಾಲದಲ್ಲಿ ಈ ಪ್ರಕರಣ ನಡೆದಿದ್ದು, ಜಮೀನು ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರು ವ್ಯಾಜ್ಯ ಪ್ರಕರಣದಲ್ಲಿ ಸಿಲುಕಿದ್ದರು. ಇದನ್ನು ಇತ್ಯರ್ಥಪಡಿಸಲು RI ಪುಟ್ಟಹನುಮಯ್ಯ 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಜೊತೆಗೆ ಜಮೀನಿನ ವಿಚಾರಕ್ಕೆ ಸಂಬಂಧಪಟ್ಟಂತೆ ರಕ್ಷಣೆ ನೀಡಲು ಹೆಡ್ ಕಾನ್ಸ್​ಟೇಬಲ್ ರಾಜು 6 ಲಕ್ಷ ಹಣದ ಬೇಡಿಕೆ ಇಟ್ಟಿದ್ದರು.

ಆದರೆ ಇದಕ್ಕೆ ಬಗ್ಗದ ಸದರಿ ಜಮೀನು ಮಾಲೀಕ, ಎಸಿಬಿಗೆ ದೂರು ನೀಡಿದ್ದರು. ದೂರುದಾರ ಕೊಟ್ಟ ಮಾಹಿತಿ ಮೇರೆಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಬಿ ದಾಳಿ ವೇಳೆ ಲಂಚ ಕೇಳಿದ್ದ ಆರೋಪಿಗಳು ರೆಡ್ ಹ್ಯಾಂಡ್ ಆಗಿ ತಗಲಾಕಿಕೊಂಡಿದ್ದಾರೆ. ಈ ಮಧ್ಯೆ, ಹೆಡ್ ಕಾನ್ಸ್​ಟೇಬಲ್ ರಾಜುಗೆ ಹಣ ಪಡೆಯುವಂತೆ ಇನ್ಸ್​ಪೆಕ್ಟರ್ ಸೂಚಿಸಿದ್ದರು ಎಂದು ಚಿಕ್ಕಜಾಲ ಇನ್ಸ್​ಪೆಕ್ಟರ್ ಯಶವಂತ್ ವಿರುದ್ಧವೂ ಆರೋಪ ಕೇಳಿಬಂದಿದೆ.

ಈ ಮಧ್ಯೆ, ಹಣ ಪಡೆಯುವಂತೆ ಸೂಚಿಸಿದ್ದ ಆರೋಪ ಹೊತ್ತಿರುವ ಇನ್ಸ್​ಪೆಕ್ಟರ್ ಯಶವಂತ್ ಠಾಣೆಯಿಂದ ಪರಾರಿಯಾಗಿದ್ದಾರೆ. ಎಸಿಬಿ ದಾಳಿ ವೇಳೆ ಎಸ್ಕೇಪ್ ಆಗಿರುವ ಇನ್ಸ್​ಪೆಕ್ಟರ್ ಯಶವಂತ್​ಗಾಗಿ ಹುಡುಕಾಟ ಶುರುವಾಗಿದೆ. ಹೆಡ್ ಕಾನ್ಸ್​​ಟೇಬಲ್ ರಾಜು ಹಾಗೂ ಆರ್ ಐ ಹನುಮಯ್ಯರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಎಸಿಬಿ ಬಲೆಗೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಭೂಮಾಪನಾ ಸರ್ವೇಯರ್

Published On - 12:53 pm, Fri, 8 January 21

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು