AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನು ವ್ಯಾಜ್ಯ: 6 ಲಕ್ಷ ಲಂಚ ಕೇಳಿದ್ದ RI-ಕಾನ್ಸ್​ಟೇಬಲ್ ಬಂಧನ.. ಠಾಣೆಯಿಂದ ಪರಾರಿಯಾದ ಇನ್ಸ್​ಪೆಕ್ಟರ್

ಹಣ ಪಡೆಯುವಂತೆ ಸೂಚಿಸಿದ್ದ ಆರೋಪ ಹೊತ್ತಿರುವ ಇನ್ಸ್​ಪೆಕ್ಟರ್ ಯಶವಂತ್ ಠಾಣೆಯಿಂದ ಪರಾರಿಯಾಗಿದ್ದಾರೆ. ಎಸಿಬಿ ದಾಳಿ ವೇಳೆ ಎಸ್ಕೇಪ್ ಆಗಿರುವ ಇನ್ಸ್​ಪೆಕ್ಟರ್ ಯಶವಂತ್​ಗಾಗಿ ಹುಡುಕಾಟ ಶುರುವಾಗಿದೆ. ಹೆಡ್ ಕಾನ್ಸ್​​ಟೇಬಲ್ ರಾಜು ಹಾಗೂ ಆರ್ ಐ ಹನುಮಯ್ಯರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಜಮೀನು ವ್ಯಾಜ್ಯ: 6 ಲಕ್ಷ ಲಂಚ ಕೇಳಿದ್ದ RI-ಕಾನ್ಸ್​ಟೇಬಲ್ ಬಂಧನ.. ಠಾಣೆಯಿಂದ ಪರಾರಿಯಾದ ಇನ್ಸ್​ಪೆಕ್ಟರ್
ಪುಟ್ಟ ಹನುಮಯ್ಯ ಹಾಗೂ ರಾಜು
ಪೃಥ್ವಿಶಂಕರ
|

Updated on:Jan 08, 2021 | 1:02 PM

Share

ಬೆಂಗಳೂರು:  ಜಮೀನುದಾರರೊಬ್ಬರ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ರೆವಿನ್ಯೂ‌ಇನ್ಸ್ ಪೆಕ್ಟರ್ ಹಾಗೂ ಚಿಕ್ಕಜಾಲ ಹೆಡ್ ಕಾನ್ಸ್​ಟೇಬಲ್ ರಾಜು ಎಂಬುವವರನ್ನ ಎಸಿಬಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ನಗರದ ಚಿಕ್ಕಜಾಲದಲ್ಲಿ ಈ ಪ್ರಕರಣ ನಡೆದಿದ್ದು, ಜಮೀನು ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರು ವ್ಯಾಜ್ಯ ಪ್ರಕರಣದಲ್ಲಿ ಸಿಲುಕಿದ್ದರು. ಇದನ್ನು ಇತ್ಯರ್ಥಪಡಿಸಲು RI ಪುಟ್ಟಹನುಮಯ್ಯ 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಜೊತೆಗೆ ಜಮೀನಿನ ವಿಚಾರಕ್ಕೆ ಸಂಬಂಧಪಟ್ಟಂತೆ ರಕ್ಷಣೆ ನೀಡಲು ಹೆಡ್ ಕಾನ್ಸ್​ಟೇಬಲ್ ರಾಜು 6 ಲಕ್ಷ ಹಣದ ಬೇಡಿಕೆ ಇಟ್ಟಿದ್ದರು.

ಆದರೆ ಇದಕ್ಕೆ ಬಗ್ಗದ ಸದರಿ ಜಮೀನು ಮಾಲೀಕ, ಎಸಿಬಿಗೆ ದೂರು ನೀಡಿದ್ದರು. ದೂರುದಾರ ಕೊಟ್ಟ ಮಾಹಿತಿ ಮೇರೆಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಬಿ ದಾಳಿ ವೇಳೆ ಲಂಚ ಕೇಳಿದ್ದ ಆರೋಪಿಗಳು ರೆಡ್ ಹ್ಯಾಂಡ್ ಆಗಿ ತಗಲಾಕಿಕೊಂಡಿದ್ದಾರೆ. ಈ ಮಧ್ಯೆ, ಹೆಡ್ ಕಾನ್ಸ್​ಟೇಬಲ್ ರಾಜುಗೆ ಹಣ ಪಡೆಯುವಂತೆ ಇನ್ಸ್​ಪೆಕ್ಟರ್ ಸೂಚಿಸಿದ್ದರು ಎಂದು ಚಿಕ್ಕಜಾಲ ಇನ್ಸ್​ಪೆಕ್ಟರ್ ಯಶವಂತ್ ವಿರುದ್ಧವೂ ಆರೋಪ ಕೇಳಿಬಂದಿದೆ.

ಈ ಮಧ್ಯೆ, ಹಣ ಪಡೆಯುವಂತೆ ಸೂಚಿಸಿದ್ದ ಆರೋಪ ಹೊತ್ತಿರುವ ಇನ್ಸ್​ಪೆಕ್ಟರ್ ಯಶವಂತ್ ಠಾಣೆಯಿಂದ ಪರಾರಿಯಾಗಿದ್ದಾರೆ. ಎಸಿಬಿ ದಾಳಿ ವೇಳೆ ಎಸ್ಕೇಪ್ ಆಗಿರುವ ಇನ್ಸ್​ಪೆಕ್ಟರ್ ಯಶವಂತ್​ಗಾಗಿ ಹುಡುಕಾಟ ಶುರುವಾಗಿದೆ. ಹೆಡ್ ಕಾನ್ಸ್​​ಟೇಬಲ್ ರಾಜು ಹಾಗೂ ಆರ್ ಐ ಹನುಮಯ್ಯರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಎಸಿಬಿ ಬಲೆಗೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಭೂಮಾಪನಾ ಸರ್ವೇಯರ್

Published On - 12:53 pm, Fri, 8 January 21

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!