AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನು ವ್ಯಾಜ್ಯ: 6 ಲಕ್ಷ ಲಂಚ ಕೇಳಿದ್ದ RI-ಕಾನ್ಸ್​ಟೇಬಲ್ ಬಂಧನ.. ಠಾಣೆಯಿಂದ ಪರಾರಿಯಾದ ಇನ್ಸ್​ಪೆಕ್ಟರ್

ಹಣ ಪಡೆಯುವಂತೆ ಸೂಚಿಸಿದ್ದ ಆರೋಪ ಹೊತ್ತಿರುವ ಇನ್ಸ್​ಪೆಕ್ಟರ್ ಯಶವಂತ್ ಠಾಣೆಯಿಂದ ಪರಾರಿಯಾಗಿದ್ದಾರೆ. ಎಸಿಬಿ ದಾಳಿ ವೇಳೆ ಎಸ್ಕೇಪ್ ಆಗಿರುವ ಇನ್ಸ್​ಪೆಕ್ಟರ್ ಯಶವಂತ್​ಗಾಗಿ ಹುಡುಕಾಟ ಶುರುವಾಗಿದೆ. ಹೆಡ್ ಕಾನ್ಸ್​​ಟೇಬಲ್ ರಾಜು ಹಾಗೂ ಆರ್ ಐ ಹನುಮಯ್ಯರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಜಮೀನು ವ್ಯಾಜ್ಯ: 6 ಲಕ್ಷ ಲಂಚ ಕೇಳಿದ್ದ RI-ಕಾನ್ಸ್​ಟೇಬಲ್ ಬಂಧನ.. ಠಾಣೆಯಿಂದ ಪರಾರಿಯಾದ ಇನ್ಸ್​ಪೆಕ್ಟರ್
ಪುಟ್ಟ ಹನುಮಯ್ಯ ಹಾಗೂ ರಾಜು
ಪೃಥ್ವಿಶಂಕರ
|

Updated on:Jan 08, 2021 | 1:02 PM

Share

ಬೆಂಗಳೂರು:  ಜಮೀನುದಾರರೊಬ್ಬರ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ರೆವಿನ್ಯೂ‌ಇನ್ಸ್ ಪೆಕ್ಟರ್ ಹಾಗೂ ಚಿಕ್ಕಜಾಲ ಹೆಡ್ ಕಾನ್ಸ್​ಟೇಬಲ್ ರಾಜು ಎಂಬುವವರನ್ನ ಎಸಿಬಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ನಗರದ ಚಿಕ್ಕಜಾಲದಲ್ಲಿ ಈ ಪ್ರಕರಣ ನಡೆದಿದ್ದು, ಜಮೀನು ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರು ವ್ಯಾಜ್ಯ ಪ್ರಕರಣದಲ್ಲಿ ಸಿಲುಕಿದ್ದರು. ಇದನ್ನು ಇತ್ಯರ್ಥಪಡಿಸಲು RI ಪುಟ್ಟಹನುಮಯ್ಯ 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಜೊತೆಗೆ ಜಮೀನಿನ ವಿಚಾರಕ್ಕೆ ಸಂಬಂಧಪಟ್ಟಂತೆ ರಕ್ಷಣೆ ನೀಡಲು ಹೆಡ್ ಕಾನ್ಸ್​ಟೇಬಲ್ ರಾಜು 6 ಲಕ್ಷ ಹಣದ ಬೇಡಿಕೆ ಇಟ್ಟಿದ್ದರು.

ಆದರೆ ಇದಕ್ಕೆ ಬಗ್ಗದ ಸದರಿ ಜಮೀನು ಮಾಲೀಕ, ಎಸಿಬಿಗೆ ದೂರು ನೀಡಿದ್ದರು. ದೂರುದಾರ ಕೊಟ್ಟ ಮಾಹಿತಿ ಮೇರೆಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಬಿ ದಾಳಿ ವೇಳೆ ಲಂಚ ಕೇಳಿದ್ದ ಆರೋಪಿಗಳು ರೆಡ್ ಹ್ಯಾಂಡ್ ಆಗಿ ತಗಲಾಕಿಕೊಂಡಿದ್ದಾರೆ. ಈ ಮಧ್ಯೆ, ಹೆಡ್ ಕಾನ್ಸ್​ಟೇಬಲ್ ರಾಜುಗೆ ಹಣ ಪಡೆಯುವಂತೆ ಇನ್ಸ್​ಪೆಕ್ಟರ್ ಸೂಚಿಸಿದ್ದರು ಎಂದು ಚಿಕ್ಕಜಾಲ ಇನ್ಸ್​ಪೆಕ್ಟರ್ ಯಶವಂತ್ ವಿರುದ್ಧವೂ ಆರೋಪ ಕೇಳಿಬಂದಿದೆ.

ಈ ಮಧ್ಯೆ, ಹಣ ಪಡೆಯುವಂತೆ ಸೂಚಿಸಿದ್ದ ಆರೋಪ ಹೊತ್ತಿರುವ ಇನ್ಸ್​ಪೆಕ್ಟರ್ ಯಶವಂತ್ ಠಾಣೆಯಿಂದ ಪರಾರಿಯಾಗಿದ್ದಾರೆ. ಎಸಿಬಿ ದಾಳಿ ವೇಳೆ ಎಸ್ಕೇಪ್ ಆಗಿರುವ ಇನ್ಸ್​ಪೆಕ್ಟರ್ ಯಶವಂತ್​ಗಾಗಿ ಹುಡುಕಾಟ ಶುರುವಾಗಿದೆ. ಹೆಡ್ ಕಾನ್ಸ್​​ಟೇಬಲ್ ರಾಜು ಹಾಗೂ ಆರ್ ಐ ಹನುಮಯ್ಯರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಎಸಿಬಿ ಬಲೆಗೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಭೂಮಾಪನಾ ಸರ್ವೇಯರ್

Published On - 12:53 pm, Fri, 8 January 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ