AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನು ವ್ಯಾಜ್ಯ: 6 ಲಕ್ಷ ಲಂಚ ಕೇಳಿದ್ದ RI-ಕಾನ್ಸ್​ಟೇಬಲ್ ಬಂಧನ.. ಠಾಣೆಯಿಂದ ಪರಾರಿಯಾದ ಇನ್ಸ್​ಪೆಕ್ಟರ್

ಹಣ ಪಡೆಯುವಂತೆ ಸೂಚಿಸಿದ್ದ ಆರೋಪ ಹೊತ್ತಿರುವ ಇನ್ಸ್​ಪೆಕ್ಟರ್ ಯಶವಂತ್ ಠಾಣೆಯಿಂದ ಪರಾರಿಯಾಗಿದ್ದಾರೆ. ಎಸಿಬಿ ದಾಳಿ ವೇಳೆ ಎಸ್ಕೇಪ್ ಆಗಿರುವ ಇನ್ಸ್​ಪೆಕ್ಟರ್ ಯಶವಂತ್​ಗಾಗಿ ಹುಡುಕಾಟ ಶುರುವಾಗಿದೆ. ಹೆಡ್ ಕಾನ್ಸ್​​ಟೇಬಲ್ ರಾಜು ಹಾಗೂ ಆರ್ ಐ ಹನುಮಯ್ಯರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಜಮೀನು ವ್ಯಾಜ್ಯ: 6 ಲಕ್ಷ ಲಂಚ ಕೇಳಿದ್ದ RI-ಕಾನ್ಸ್​ಟೇಬಲ್ ಬಂಧನ.. ಠಾಣೆಯಿಂದ ಪರಾರಿಯಾದ ಇನ್ಸ್​ಪೆಕ್ಟರ್
ಪುಟ್ಟ ಹನುಮಯ್ಯ ಹಾಗೂ ರಾಜು
ಪೃಥ್ವಿಶಂಕರ
|

Updated on:Jan 08, 2021 | 1:02 PM

Share

ಬೆಂಗಳೂರು:  ಜಮೀನುದಾರರೊಬ್ಬರ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ರೆವಿನ್ಯೂ‌ಇನ್ಸ್ ಪೆಕ್ಟರ್ ಹಾಗೂ ಚಿಕ್ಕಜಾಲ ಹೆಡ್ ಕಾನ್ಸ್​ಟೇಬಲ್ ರಾಜು ಎಂಬುವವರನ್ನ ಎಸಿಬಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ನಗರದ ಚಿಕ್ಕಜಾಲದಲ್ಲಿ ಈ ಪ್ರಕರಣ ನಡೆದಿದ್ದು, ಜಮೀನು ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರು ವ್ಯಾಜ್ಯ ಪ್ರಕರಣದಲ್ಲಿ ಸಿಲುಕಿದ್ದರು. ಇದನ್ನು ಇತ್ಯರ್ಥಪಡಿಸಲು RI ಪುಟ್ಟಹನುಮಯ್ಯ 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಜೊತೆಗೆ ಜಮೀನಿನ ವಿಚಾರಕ್ಕೆ ಸಂಬಂಧಪಟ್ಟಂತೆ ರಕ್ಷಣೆ ನೀಡಲು ಹೆಡ್ ಕಾನ್ಸ್​ಟೇಬಲ್ ರಾಜು 6 ಲಕ್ಷ ಹಣದ ಬೇಡಿಕೆ ಇಟ್ಟಿದ್ದರು.

ಆದರೆ ಇದಕ್ಕೆ ಬಗ್ಗದ ಸದರಿ ಜಮೀನು ಮಾಲೀಕ, ಎಸಿಬಿಗೆ ದೂರು ನೀಡಿದ್ದರು. ದೂರುದಾರ ಕೊಟ್ಟ ಮಾಹಿತಿ ಮೇರೆಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಬಿ ದಾಳಿ ವೇಳೆ ಲಂಚ ಕೇಳಿದ್ದ ಆರೋಪಿಗಳು ರೆಡ್ ಹ್ಯಾಂಡ್ ಆಗಿ ತಗಲಾಕಿಕೊಂಡಿದ್ದಾರೆ. ಈ ಮಧ್ಯೆ, ಹೆಡ್ ಕಾನ್ಸ್​ಟೇಬಲ್ ರಾಜುಗೆ ಹಣ ಪಡೆಯುವಂತೆ ಇನ್ಸ್​ಪೆಕ್ಟರ್ ಸೂಚಿಸಿದ್ದರು ಎಂದು ಚಿಕ್ಕಜಾಲ ಇನ್ಸ್​ಪೆಕ್ಟರ್ ಯಶವಂತ್ ವಿರುದ್ಧವೂ ಆರೋಪ ಕೇಳಿಬಂದಿದೆ.

ಈ ಮಧ್ಯೆ, ಹಣ ಪಡೆಯುವಂತೆ ಸೂಚಿಸಿದ್ದ ಆರೋಪ ಹೊತ್ತಿರುವ ಇನ್ಸ್​ಪೆಕ್ಟರ್ ಯಶವಂತ್ ಠಾಣೆಯಿಂದ ಪರಾರಿಯಾಗಿದ್ದಾರೆ. ಎಸಿಬಿ ದಾಳಿ ವೇಳೆ ಎಸ್ಕೇಪ್ ಆಗಿರುವ ಇನ್ಸ್​ಪೆಕ್ಟರ್ ಯಶವಂತ್​ಗಾಗಿ ಹುಡುಕಾಟ ಶುರುವಾಗಿದೆ. ಹೆಡ್ ಕಾನ್ಸ್​​ಟೇಬಲ್ ರಾಜು ಹಾಗೂ ಆರ್ ಐ ಹನುಮಯ್ಯರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಎಸಿಬಿ ಬಲೆಗೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಭೂಮಾಪನಾ ಸರ್ವೇಯರ್

Published On - 12:53 pm, Fri, 8 January 21

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು