AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನು ವ್ಯಾಜ್ಯ: 6 ಲಕ್ಷ ಲಂಚ ಕೇಳಿದ್ದ RI-ಕಾನ್ಸ್​ಟೇಬಲ್ ಬಂಧನ.. ಠಾಣೆಯಿಂದ ಪರಾರಿಯಾದ ಇನ್ಸ್​ಪೆಕ್ಟರ್

ಹಣ ಪಡೆಯುವಂತೆ ಸೂಚಿಸಿದ್ದ ಆರೋಪ ಹೊತ್ತಿರುವ ಇನ್ಸ್​ಪೆಕ್ಟರ್ ಯಶವಂತ್ ಠಾಣೆಯಿಂದ ಪರಾರಿಯಾಗಿದ್ದಾರೆ. ಎಸಿಬಿ ದಾಳಿ ವೇಳೆ ಎಸ್ಕೇಪ್ ಆಗಿರುವ ಇನ್ಸ್​ಪೆಕ್ಟರ್ ಯಶವಂತ್​ಗಾಗಿ ಹುಡುಕಾಟ ಶುರುವಾಗಿದೆ. ಹೆಡ್ ಕಾನ್ಸ್​​ಟೇಬಲ್ ರಾಜು ಹಾಗೂ ಆರ್ ಐ ಹನುಮಯ್ಯರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಜಮೀನು ವ್ಯಾಜ್ಯ: 6 ಲಕ್ಷ ಲಂಚ ಕೇಳಿದ್ದ RI-ಕಾನ್ಸ್​ಟೇಬಲ್ ಬಂಧನ.. ಠಾಣೆಯಿಂದ ಪರಾರಿಯಾದ ಇನ್ಸ್​ಪೆಕ್ಟರ್
ಪುಟ್ಟ ಹನುಮಯ್ಯ ಹಾಗೂ ರಾಜು
Follow us
ಪೃಥ್ವಿಶಂಕರ
|

Updated on:Jan 08, 2021 | 1:02 PM

ಬೆಂಗಳೂರು:  ಜಮೀನುದಾರರೊಬ್ಬರ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ರೆವಿನ್ಯೂ‌ಇನ್ಸ್ ಪೆಕ್ಟರ್ ಹಾಗೂ ಚಿಕ್ಕಜಾಲ ಹೆಡ್ ಕಾನ್ಸ್​ಟೇಬಲ್ ರಾಜು ಎಂಬುವವರನ್ನ ಎಸಿಬಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ನಗರದ ಚಿಕ್ಕಜಾಲದಲ್ಲಿ ಈ ಪ್ರಕರಣ ನಡೆದಿದ್ದು, ಜಮೀನು ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರು ವ್ಯಾಜ್ಯ ಪ್ರಕರಣದಲ್ಲಿ ಸಿಲುಕಿದ್ದರು. ಇದನ್ನು ಇತ್ಯರ್ಥಪಡಿಸಲು RI ಪುಟ್ಟಹನುಮಯ್ಯ 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಜೊತೆಗೆ ಜಮೀನಿನ ವಿಚಾರಕ್ಕೆ ಸಂಬಂಧಪಟ್ಟಂತೆ ರಕ್ಷಣೆ ನೀಡಲು ಹೆಡ್ ಕಾನ್ಸ್​ಟೇಬಲ್ ರಾಜು 6 ಲಕ್ಷ ಹಣದ ಬೇಡಿಕೆ ಇಟ್ಟಿದ್ದರು.

ಆದರೆ ಇದಕ್ಕೆ ಬಗ್ಗದ ಸದರಿ ಜಮೀನು ಮಾಲೀಕ, ಎಸಿಬಿಗೆ ದೂರು ನೀಡಿದ್ದರು. ದೂರುದಾರ ಕೊಟ್ಟ ಮಾಹಿತಿ ಮೇರೆಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಬಿ ದಾಳಿ ವೇಳೆ ಲಂಚ ಕೇಳಿದ್ದ ಆರೋಪಿಗಳು ರೆಡ್ ಹ್ಯಾಂಡ್ ಆಗಿ ತಗಲಾಕಿಕೊಂಡಿದ್ದಾರೆ. ಈ ಮಧ್ಯೆ, ಹೆಡ್ ಕಾನ್ಸ್​ಟೇಬಲ್ ರಾಜುಗೆ ಹಣ ಪಡೆಯುವಂತೆ ಇನ್ಸ್​ಪೆಕ್ಟರ್ ಸೂಚಿಸಿದ್ದರು ಎಂದು ಚಿಕ್ಕಜಾಲ ಇನ್ಸ್​ಪೆಕ್ಟರ್ ಯಶವಂತ್ ವಿರುದ್ಧವೂ ಆರೋಪ ಕೇಳಿಬಂದಿದೆ.

ಈ ಮಧ್ಯೆ, ಹಣ ಪಡೆಯುವಂತೆ ಸೂಚಿಸಿದ್ದ ಆರೋಪ ಹೊತ್ತಿರುವ ಇನ್ಸ್​ಪೆಕ್ಟರ್ ಯಶವಂತ್ ಠಾಣೆಯಿಂದ ಪರಾರಿಯಾಗಿದ್ದಾರೆ. ಎಸಿಬಿ ದಾಳಿ ವೇಳೆ ಎಸ್ಕೇಪ್ ಆಗಿರುವ ಇನ್ಸ್​ಪೆಕ್ಟರ್ ಯಶವಂತ್​ಗಾಗಿ ಹುಡುಕಾಟ ಶುರುವಾಗಿದೆ. ಹೆಡ್ ಕಾನ್ಸ್​​ಟೇಬಲ್ ರಾಜು ಹಾಗೂ ಆರ್ ಐ ಹನುಮಯ್ಯರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಎಸಿಬಿ ಬಲೆಗೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಭೂಮಾಪನಾ ಸರ್ವೇಯರ್

Published On - 12:53 pm, Fri, 8 January 21

ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ