AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಲ್ಲರೆ ಕೇಳುತ್ತಲೇ ಹಣ ಎಗರಿಸುತ್ತಿದ್ದ ಫಾರಿನ್ ಕಳ್ಳರು ಅಂದರ್!

ಬೆಂಗಳೂರು: ಇತ್ತೀಚೆಗೆ ಸಿಲಿಕಾನ್ ಸಿಟಿಯಲ್ಲಿ ವಿದೇಶಿಗರ ಹಾವಳಿ ಹೆಚ್ಚಾಗಿದೆ. ಡಗ್ಸ್​ ದಂಧೆ, ದರೋಡೆ ಕೃತ್ಯಗಳನ್ನು ಹೆಚ್ಚಾಗಿ ಮಾಡುತ್ತಿದ್ದ ವಿದೇಶಿಗರು ಇದೀಗ ಚಿಲ್ಲರೆ ಕೇಳೋ ನೆಪದಲ್ಲಿ ಹಣದ ಬಂಡಲ್​ ಅನ್ನೇ ಎಗರಿಸುತ್ತಿದ್ದಾರೆ. ಗಮನ ಬೇರೆಡೆ ಸೆಳೆದು ಹಣ ಎಗರಿಸುತ್ತಿದ್ದ ಫಾರಿನ್ ನಯ ವಂಚಕರ ಗ್ಯಾಂಗ್‌ ಅನ್ನು ಆರ್‌ಎಂಸಿ ಯಾರ್ಡ್ ಠಾಣೆ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ಸೈಯದ್, ಶಬ್ಬೀರ್ ಬಂಧಿತ ಆರೋಪಿಗಳು. ಇರಾನ್​ ದೇಶದಿಂದ ಟೂರಿಸ್ಟ್ ವೀಸಾದಲ್ಲಿ ಬಂದಿದ್ದ ಆರೋಪಿಗಳು ಗಮನ ಬೇರೆಡೆ ಸೆಳೆದು ಕೃತ್ಯ ಎಸಗುತ್ತಿದ್ದರು. ವಿಮಾನದಲ್ಲೇ ಹೆಚ್ಚಾಗಿ ಓಡಾಡುತ್ತಿದ್ದ […]

ಚಿಲ್ಲರೆ ಕೇಳುತ್ತಲೇ ಹಣ ಎಗರಿಸುತ್ತಿದ್ದ ಫಾರಿನ್ ಕಳ್ಳರು ಅಂದರ್!
ಸಾಧು ಶ್ರೀನಾಥ್​
|

Updated on:Feb 10, 2020 | 10:55 AM

Share

ಬೆಂಗಳೂರು: ಇತ್ತೀಚೆಗೆ ಸಿಲಿಕಾನ್ ಸಿಟಿಯಲ್ಲಿ ವಿದೇಶಿಗರ ಹಾವಳಿ ಹೆಚ್ಚಾಗಿದೆ. ಡಗ್ಸ್​ ದಂಧೆ, ದರೋಡೆ ಕೃತ್ಯಗಳನ್ನು ಹೆಚ್ಚಾಗಿ ಮಾಡುತ್ತಿದ್ದ ವಿದೇಶಿಗರು ಇದೀಗ ಚಿಲ್ಲರೆ ಕೇಳೋ ನೆಪದಲ್ಲಿ ಹಣದ ಬಂಡಲ್​ ಅನ್ನೇ ಎಗರಿಸುತ್ತಿದ್ದಾರೆ. ಗಮನ ಬೇರೆಡೆ ಸೆಳೆದು ಹಣ ಎಗರಿಸುತ್ತಿದ್ದ ಫಾರಿನ್ ನಯ ವಂಚಕರ ಗ್ಯಾಂಗ್‌ ಅನ್ನು ಆರ್‌ಎಂಸಿ ಯಾರ್ಡ್ ಠಾಣೆ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ಸೈಯದ್, ಶಬ್ಬೀರ್ ಬಂಧಿತ ಆರೋಪಿಗಳು.

ಇರಾನ್​ ದೇಶದಿಂದ ಟೂರಿಸ್ಟ್ ವೀಸಾದಲ್ಲಿ ಬಂದಿದ್ದ ಆರೋಪಿಗಳು ಗಮನ ಬೇರೆಡೆ ಸೆಳೆದು ಕೃತ್ಯ ಎಸಗುತ್ತಿದ್ದರು. ವಿಮಾನದಲ್ಲೇ ಹೆಚ್ಚಾಗಿ ಓಡಾಡುತ್ತಿದ್ದ ಖತರ್ನಾಕ್ ಕಳ್ಳರು ಮೋಟಾರ್ ಶೋರೂಂಗಳನ್ನೇ ಟಾರ್ಗೆಟ್ ಮಾಡುತ್ತಿದ್ದರು. ಚೇಂಜ್ ಕೇಳೋ ನೆಪದಲ್ಲಿ ಶೋ ರೂಮ್​ಗೆ ಬಂದು ಈ ನೋಟು ಬೇಡ, ಆ ನೋಟು ಬೇಡ ಅಂತ ಹೇಳಿ ಕನ್ಫ್ಯೂಸ್ ಮಾಡ್ತಿದ್ರು.

ಕ್ಷಣ ಮಾತ್ರದಲ್ಲಿ ಸಿಬ್ಬಂದಿಯ ಗಮನ ಬೇರೆಡೆ ಸೆಳೆದು ಹಣದ ಕಟ್ಟನ್ನೇ ಎಗರಿಸುತ್ತಿದ್ದರು. ಮಂಗಳೂರು, ಮೈಸೂರು, ಭಟ್ಕಳ, ಬೆಂಗಳೂರು ಭಾಗದಲ್ಲಿ ತಮ್ಮ ಕೈಚಳಕ ತೋರಿಸಿದ್ದರು. ಫೆಬ್ರವರಿ 1ರಂದು ಸದಾಶಿವನಗರದ ಕಾರ್ ಶೋ ರೂಂಗೆ ಎಂಟ್ರಿ ಕೊಟ್ಟು ಗಮನ ಬೇರೆಡೆ ಸೆಳೆದು ಕ್ಯಾಶ್ ಕೌಂಟರ್​ನಲ್ಲಿ ಹಣ ಎಗರಿಸಿದ್ದರು. ಫಾರಿನ್ ಕಳ್ಳರ ಕೈಚಳಕ ಶೋರೂಂನ ಸಿಸಿ ಕ್ಯಾಮಾರದಲ್ಲಿ ದಾಖಲಾಗಿತ್ತು. ಈ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಇದೀಗ ಆರ್​ಎಂಸಿ ಯಾರ್ಡ್ ಪೊಲೀಸರ ಕೈಗೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

Published On - 6:25 pm, Sun, 9 February 20

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ