AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತಕ್ಕೆ ತುತ್ತಾದ ಆಟೋ-ಲಾರಿ; ಇಷ್ಟಕ್ಕೂ ಆಟೋದಲ್ಲಿ ಏನು ಸಾಗಿಸುತ್ತಿದ್ದರು ಗೊತ್ತಾ?

ಆಂಧ್ರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಆಟೋಗೆ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆಟೋದಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆದರೆ ಈ ರಸ್ತೆ ಅಪಘಾತಕ್ಕೆ ಟ್ವಿಸ್ಟ್ ಸಿಕ್ಕಿದೆ.

ಅಪಘಾತಕ್ಕೆ ತುತ್ತಾದ ಆಟೋ-ಲಾರಿ; ಇಷ್ಟಕ್ಕೂ ಆಟೋದಲ್ಲಿ ಏನು ಸಾಗಿಸುತ್ತಿದ್ದರು ಗೊತ್ತಾ?
ಅಪಘಾತಕ್ಕೆ ತುತ್ತಾದ ಆಟೋ-ಲಾರಿ; ಇಷ್ಟಕ್ಕೂ ಆಟೋದಲ್ಲಿ ಏನು ಸಾಗಿಸುತ್ತಿದ್ದರು ಗೊತ್ತಾ?
TV9 Web
| Updated By: ಸಾಧು ಶ್ರೀನಾಥ್​|

Updated on: Aug 26, 2022 | 5:46 PM

Share

ಆಂಧ್ರ ಪ್ರದೇಶ ಅಪರಾಧ ಸುದ್ದಿ: ಅಪರೂಪದ, ರಕ್ಷಿತ ವನ್ಯಜೀವಿಗಳನ್ನು ಯಾರ ಕಣ್ಣಿಗೂ ಬೀಳದಂತೆ ಗಪ್​ ಚುಪ್​ ಅಂತಾ ಗಡಿದಾಟಿಸುವುದಕ್ಕೆ ಅವರು ಸ್ಕೆಚ್​ ಹಾಕಿದ್ದರು. ದುಷ್ಕರ್ಮಿಗಳು ಹೀಗೆ ಅಪಾರ ಸಂಖ್ಯೆಯಲ್ಲಿ ಆಗಾಗ ರಕ್ಷಿತ ವನ್ಯಜೀವಿಗಳ ಕಳ್ಳಸಾಗಣೆಯಲ್ಲಿ ತೊಡಗಿರುತ್ತಾರೆ ಎಂಬುದು ಖೇದಕರ ಸಂಗತಿ. ಆಂಧ್ರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಆಟೋಗೆ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆಟೋದಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆದರೆ ಈ ರಸ್ತೆ ಅಪಘಾತಕ್ಕೆ ಟ್ವಿಸ್ಟ್ ಸಿಕ್ಕಿದೆ.

ಇತ್ತೀಚೆಗೆ ಬಿ.ಆರ್.ಅಂಬೇಡ್ಕರ್ ಕೋನಸೀಮಾ ಜಿಲ್ಲೆಯ (konaseema district) ಮುಮ್ಮಿಡಿವರಂ ಬಳಿ ನಡೆದ ರಸ್ತೆ ಅಪಘಾತದಲ್ಲಿ ಅಕ್ರಮವಾಗಿ ನಕ್ಷತ್ರ ಆಮೆ ಸಾಗಾಟ ಮಾಡಿರುವುದು ಬೆಳಕಿಗೆ ಬಂದಿದೆ. ಕಾಟ್ರೇನಿಕೋಣ ಮಂಡಲದ (Katrenikona Mandal) ಅಗ್ರಹಾರದಲ್ಲಿ ಅಮಲಾಪುರ ಕಡೆಗೆ ಹೋಗುತ್ತಿದ್ದ ಆಟೋಗೆ ಎದುರಿನಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ.

ಅಪಘಾತದದ ತೀವ್ರತೆಗೆ ಆಟೋದಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು 108 ಆಂಬುಲೆನ್ಸ್ ಸಹಾಯದಿಂದ ಅಮಲಾಪುರಂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಈ ಅಪಘಾತದ ಸ್ಥಳದಲ್ಲಿ ಒಂದಷ್ಟು ಆಮೆಗಳು ಕೂಡ ಸತ್ತು ಬಿದ್ದಿದ್ದವು. ರಸ್ತೆ ದಾಟುವಾಗ ವಾಹನಗಳ ಟೈರ್ ಅಡಿಯಲ್ಲಿ ಸಿಕ್ಕಿ ಬಿದ್ದು ಸತ್ತಿವೆ ಎಂದು ಸ್ಥಳೀಯರು ಮೊದಲು ಭಾವಿಸಿದ್ದರು.

ಆದರೆ ಅಪಘಾತಕ್ಕೀಡಾದ ಆಟೋದಲ್ಲಿದ್ದ ಬ್ಯಾಗ್ ಗಳು ಚಲಿಸುತ್ತಿರುವುದು ಕಂಡು ಬಂದಿದೆ. ಅನುಮಾನ ಬಂದು ಚೀಲಗಳನ್ನು ತೆರೆದು ನೋಡಿದಾಗ ಅದರೊಳಗೆ 15 ಆಮೆಗಳು (Star Tortoise) ಇದ್ದವು. ಇದರಿಂದ ಆಮೆಗಳು ಕಳ್ಳಸಾಗಣೆಯಾಗುತ್ತಿರುವುದು ಸ್ಥಳೀಯರ ಅರಿವಿಗೆ ಬಂದಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

To read more in Telugu click here

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?