ಹಾಡಹಗಲೇ ಬೈಕ್‌ನಲ್ಲಿ ಬಂದು ಪೆಟ್ರೋಲ್ ಬಂಕ್ ಮಾಲೀಕನಿಂದ 10 ಲಕ್ಷ ಹಣ ದರೋಡೆ ಮಾಡಿದ ಖದೀಮರು

ದರೋಡೆಕೋರರು ಪೆಟ್ರೋಲ್ ಬಂಕ್ ಮಾಲೀಕನಿಗೆ ಚಾಕು ತೋರಿಸಿ 10 ಲಕ್ಷ ಎಗರಿಸಿದ ಘಟನೆ ಜಿಲ್ಲೆಯ  ಚನ್ನರಾಯಪಟ್ಟಣ ತಾಲ್ಲೂಕಿನ, ಹಿರೀಸಾವೆ ಬಳಿ ಗ್ರಾಮದಲ್ಲಿ ನಡೆದಿದೆ.

ಹಾಡಹಗಲೇ ಬೈಕ್‌ನಲ್ಲಿ ಬಂದು ಪೆಟ್ರೋಲ್ ಬಂಕ್ ಮಾಲೀಕನಿಂದ 10 ಲಕ್ಷ ಹಣ ದರೋಡೆ ಮಾಡಿದ ಖದೀಮರು
ಸಾಂಕೇತಿಕ ಚಿತ್ರ
Follow us
| Updated By: ವಿವೇಕ ಬಿರಾದಾರ

Updated on:Jun 28, 2022 | 7:57 PM

ಹಾಸನ: ದರೋಡೆಕೋರರು (Theft) ಪೆಟ್ರೋಲ್ ಬಂಕ್ (Petrol Bunk) ಮಾಲೀಕನಿಗೆ ಚಾಕು ತೋರಿಸಿ 10 ಲಕ್ಷ ಎಗರಿಸಿದ ಘಟನೆ ಜಿಲ್ಲೆಯ  ಚನ್ನರಾಯಪಟ್ಟಣ (Channaray Pattan) ತಾಲ್ಲೂಕಿನ, ಹಿರೀಸಾವೆ ಬಳಿ ಗ್ರಾಮದಲ್ಲಿ ನಡೆದಿದೆ. ಪೆಟ್ರೋಲ್ ಬಂಕ್ ಮಾಲೀಕ ಹೇಮಕುಮಾರ್‌,  ಶ್ರೀ ಲಕ್ಷ್ಮಿರಂಗನಾಥಸ್ವಾಮಿ ಬ್ಯಾಂಕ್‌ಗೆ (Bank) 10 ಲಕ್ಷ ರೂ ಹಣ ಕಟ್ಟಲು ತಮ್ಮ ಸ್ವಿಫ್ಟ್ ಕಾರಿ (Swift Car)ನಲ್ಲಿ ಹೋಗುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಕಾರಿನ ಟೈಯರ್ ಪಂಕ್ಚರ್ ಆಗಿದೆ ಎಂದು ಸನ್ನೆ ಮಾಡಿ ಹೋಗಿದ್ದಾರೆ. ಹೀಗಾಗಿ ಹೇಮಕುಮಾರ್ ಸ್ವಲ್ಪ ದೂರ ಹೋಗಿ ರಸ್ತೆ ಬದಿ ಕಾರು ನಿಲ್ಲಿಸಿ ಟಯರ್ ಚೆಕ್ ಮಾಡಿದ್ದಾರೆ. ಆಗ ಮತ್ತೊಂದು ಬೈಕ್‌ನಲ್ಲಿ ಬಂದ ಮತ್ತಿಬ್ಬರು ದರೋಡೆಕೋರರು ಹೇಮಕುಮಾರ್‌ಗೆ ಚಾಕು ತೋರಿಸಿ ಹಣ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಹಿರೀಸಾವೆ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ  ಮಾಡಿದ್ದು, ಹಿರೀಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಳಬಾಗಿಲು ನಗರಸಭೆ ಸದಸ್ಯನ ಕೊಲೆ ಪ್ರಕರಣ: ಪ್ರಮುಖ ಆರೋಪಿಗಳ ಬಂಧನ

ಕೋಲಾರ: ಮುಳಬಾಗಿಲು ನಗರಸಭೆ ಸದಸ್ಯನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಪೊಲೀಸ್​​​ರು ಒಟ್ಟು 14 ಆರೋಪಿಗಳನ್ನು ಬಂಧಿಸಿದ್ದಾರೆ. ಜೂನ್​ 7ರಂದು ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿಯ ಕೊಲೆಯಾಗಿತ್ತು. ಕೊಲೆ ಬಳಿಕ ಆರೋಪಿಗಳು ಮೈಸೂರು, ಆಂಧ್ರಪ್ರದೇಶದ ಕುಪ್ಪಂ, ವಿಜಯವಾಡ, ಮಹಾರಾಷ್ಟ್ರ, ಗೋವಾ ಸೇರಿದಂತೆ ಹಲವೆಡೆ ತಲೆಮರೆಸಿಕೊಂಡಿದ್ದರು.

ಬಾಲಾಜಿ ಸಿಂಗ್ ಅಲಿಯಾಸ್​ ಗಬ್ಬರ್​, ರೋಹಿತ್ ಕುಮಾರ್​, ಮಹೇಶ್​, ಮಧು ಅಲಿಯಾಸ್​ ಮನೋಜ್​​​​​, ಧನು, ಜಗನ್​, ಅಭಿನಂದನ್​​, ಧನಂಜಯ, ಮಹೇಶ್​, ನವೀನ್​​ ಸೇರಿದಂತೆ ಒಟ್ಟು 14 ಆರೋಪಿಗಳನ್ನು ಪೊಲೀಸ್​ರು ಬಂಧಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ಕೋಲಾರ ಪೊಲೀಸರು 4 ತಂಡಗಳನ್ನು ರಚಿಸಿದ್ದರು.

ಪ್ರಯಾಣಿಕರ ಬ್ಯಾಗ್‌ನಿಂದ ಚಿನ್ನಾಭರಣ, ಹಣ ಎಗರಿಸಿದ್ದ ಮಹಿಳಾ ಆರೋಪಿಗಳ ಬಂಧನ

ಉತ್ತರ ಕನ್ನಡ: ಜೂನ್ 21 ರಂದು ಕುಮಟಾದ ಬಸ್‌ನಿಲ್ದಾಣದಲ್ಲಿ ಪ್ರಯಾಣಿಕರ ಬ್ಯಾಗ್‌ನಿಂದ ಚಿನ್ನಾಭರಣ, ಹಣ ಎಗರಿಸಿದ್ದ ಮೂವರು ಚಾಲಾಕಿ ಮಹಿಳಾ ಆರೋಪಿಗಳನ್ನು ಕುಮಟಾ ಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಅತ್ತಿಬೆಲೆ ಮೂಲದ ಆದಿಯಮ್ಮ ತಿರುಪತಿ(42), ವೆಂಕ್ಟಮ್ಮ ತಿರುಪತಿ, ಲಲಿತಾ ಅಲಿಯಾಸ್ ಭಾಗ್ಯ ನಾಗರಾಜ ಬಂಧಿತ ಆರೋಪಿಗಳು.

ಜೂನ್ 21 ರಂದು ಕುಮಟಾದ ಬಸ್‌ನಿಲ್ದಾಣದಲ್ಲಿ ಆರೋಪಿಗಳು ಭಟ್ಕಳದ ತೇರನಮಕ್ಕಿಯ ಮಂಗಲಾ ರಾಮಚಂದ್ರ ಎಂಬುವರು ಬಸ್ ಹತ್ತುವ ವೇಳೆ ಬ್ಯಾಗಿನ ಜಿಪ್ ತೆಗೆದು 124 ಗ್ರಾಂ ಬಂಗಾರದ ಆಭರಣ, 50 ಸಾವಿರ ನಗದನ್ನು ಎಗರಿಸಿದ್ದರು. ಬಂಧಿತರ ವಿರುದ್ದ ಐಪಿಸಿ ಕಲಂ 379 ಅಡಿ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 7:01 pm, Tue, 28 June 22

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ