AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡಹಗಲೇ ಬೈಕ್‌ನಲ್ಲಿ ಬಂದು ಪೆಟ್ರೋಲ್ ಬಂಕ್ ಮಾಲೀಕನಿಂದ 10 ಲಕ್ಷ ಹಣ ದರೋಡೆ ಮಾಡಿದ ಖದೀಮರು

ದರೋಡೆಕೋರರು ಪೆಟ್ರೋಲ್ ಬಂಕ್ ಮಾಲೀಕನಿಗೆ ಚಾಕು ತೋರಿಸಿ 10 ಲಕ್ಷ ಎಗರಿಸಿದ ಘಟನೆ ಜಿಲ್ಲೆಯ  ಚನ್ನರಾಯಪಟ್ಟಣ ತಾಲ್ಲೂಕಿನ, ಹಿರೀಸಾವೆ ಬಳಿ ಗ್ರಾಮದಲ್ಲಿ ನಡೆದಿದೆ.

ಹಾಡಹಗಲೇ ಬೈಕ್‌ನಲ್ಲಿ ಬಂದು ಪೆಟ್ರೋಲ್ ಬಂಕ್ ಮಾಲೀಕನಿಂದ 10 ಲಕ್ಷ ಹಣ ದರೋಡೆ ಮಾಡಿದ ಖದೀಮರು
ಸಾಂಕೇತಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Jun 28, 2022 | 7:57 PM

Share

ಹಾಸನ: ದರೋಡೆಕೋರರು (Theft) ಪೆಟ್ರೋಲ್ ಬಂಕ್ (Petrol Bunk) ಮಾಲೀಕನಿಗೆ ಚಾಕು ತೋರಿಸಿ 10 ಲಕ್ಷ ಎಗರಿಸಿದ ಘಟನೆ ಜಿಲ್ಲೆಯ  ಚನ್ನರಾಯಪಟ್ಟಣ (Channaray Pattan) ತಾಲ್ಲೂಕಿನ, ಹಿರೀಸಾವೆ ಬಳಿ ಗ್ರಾಮದಲ್ಲಿ ನಡೆದಿದೆ. ಪೆಟ್ರೋಲ್ ಬಂಕ್ ಮಾಲೀಕ ಹೇಮಕುಮಾರ್‌,  ಶ್ರೀ ಲಕ್ಷ್ಮಿರಂಗನಾಥಸ್ವಾಮಿ ಬ್ಯಾಂಕ್‌ಗೆ (Bank) 10 ಲಕ್ಷ ರೂ ಹಣ ಕಟ್ಟಲು ತಮ್ಮ ಸ್ವಿಫ್ಟ್ ಕಾರಿ (Swift Car)ನಲ್ಲಿ ಹೋಗುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಕಾರಿನ ಟೈಯರ್ ಪಂಕ್ಚರ್ ಆಗಿದೆ ಎಂದು ಸನ್ನೆ ಮಾಡಿ ಹೋಗಿದ್ದಾರೆ. ಹೀಗಾಗಿ ಹೇಮಕುಮಾರ್ ಸ್ವಲ್ಪ ದೂರ ಹೋಗಿ ರಸ್ತೆ ಬದಿ ಕಾರು ನಿಲ್ಲಿಸಿ ಟಯರ್ ಚೆಕ್ ಮಾಡಿದ್ದಾರೆ. ಆಗ ಮತ್ತೊಂದು ಬೈಕ್‌ನಲ್ಲಿ ಬಂದ ಮತ್ತಿಬ್ಬರು ದರೋಡೆಕೋರರು ಹೇಮಕುಮಾರ್‌ಗೆ ಚಾಕು ತೋರಿಸಿ ಹಣ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಹಿರೀಸಾವೆ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ  ಮಾಡಿದ್ದು, ಹಿರೀಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಳಬಾಗಿಲು ನಗರಸಭೆ ಸದಸ್ಯನ ಕೊಲೆ ಪ್ರಕರಣ: ಪ್ರಮುಖ ಆರೋಪಿಗಳ ಬಂಧನ

ಕೋಲಾರ: ಮುಳಬಾಗಿಲು ನಗರಸಭೆ ಸದಸ್ಯನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಪೊಲೀಸ್​​​ರು ಒಟ್ಟು 14 ಆರೋಪಿಗಳನ್ನು ಬಂಧಿಸಿದ್ದಾರೆ. ಜೂನ್​ 7ರಂದು ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿಯ ಕೊಲೆಯಾಗಿತ್ತು. ಕೊಲೆ ಬಳಿಕ ಆರೋಪಿಗಳು ಮೈಸೂರು, ಆಂಧ್ರಪ್ರದೇಶದ ಕುಪ್ಪಂ, ವಿಜಯವಾಡ, ಮಹಾರಾಷ್ಟ್ರ, ಗೋವಾ ಸೇರಿದಂತೆ ಹಲವೆಡೆ ತಲೆಮರೆಸಿಕೊಂಡಿದ್ದರು.

ಬಾಲಾಜಿ ಸಿಂಗ್ ಅಲಿಯಾಸ್​ ಗಬ್ಬರ್​, ರೋಹಿತ್ ಕುಮಾರ್​, ಮಹೇಶ್​, ಮಧು ಅಲಿಯಾಸ್​ ಮನೋಜ್​​​​​, ಧನು, ಜಗನ್​, ಅಭಿನಂದನ್​​, ಧನಂಜಯ, ಮಹೇಶ್​, ನವೀನ್​​ ಸೇರಿದಂತೆ ಒಟ್ಟು 14 ಆರೋಪಿಗಳನ್ನು ಪೊಲೀಸ್​ರು ಬಂಧಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ಕೋಲಾರ ಪೊಲೀಸರು 4 ತಂಡಗಳನ್ನು ರಚಿಸಿದ್ದರು.

ಪ್ರಯಾಣಿಕರ ಬ್ಯಾಗ್‌ನಿಂದ ಚಿನ್ನಾಭರಣ, ಹಣ ಎಗರಿಸಿದ್ದ ಮಹಿಳಾ ಆರೋಪಿಗಳ ಬಂಧನ

ಉತ್ತರ ಕನ್ನಡ: ಜೂನ್ 21 ರಂದು ಕುಮಟಾದ ಬಸ್‌ನಿಲ್ದಾಣದಲ್ಲಿ ಪ್ರಯಾಣಿಕರ ಬ್ಯಾಗ್‌ನಿಂದ ಚಿನ್ನಾಭರಣ, ಹಣ ಎಗರಿಸಿದ್ದ ಮೂವರು ಚಾಲಾಕಿ ಮಹಿಳಾ ಆರೋಪಿಗಳನ್ನು ಕುಮಟಾ ಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಅತ್ತಿಬೆಲೆ ಮೂಲದ ಆದಿಯಮ್ಮ ತಿರುಪತಿ(42), ವೆಂಕ್ಟಮ್ಮ ತಿರುಪತಿ, ಲಲಿತಾ ಅಲಿಯಾಸ್ ಭಾಗ್ಯ ನಾಗರಾಜ ಬಂಧಿತ ಆರೋಪಿಗಳು.

ಜೂನ್ 21 ರಂದು ಕುಮಟಾದ ಬಸ್‌ನಿಲ್ದಾಣದಲ್ಲಿ ಆರೋಪಿಗಳು ಭಟ್ಕಳದ ತೇರನಮಕ್ಕಿಯ ಮಂಗಲಾ ರಾಮಚಂದ್ರ ಎಂಬುವರು ಬಸ್ ಹತ್ತುವ ವೇಳೆ ಬ್ಯಾಗಿನ ಜಿಪ್ ತೆಗೆದು 124 ಗ್ರಾಂ ಬಂಗಾರದ ಆಭರಣ, 50 ಸಾವಿರ ನಗದನ್ನು ಎಗರಿಸಿದ್ದರು. ಬಂಧಿತರ ವಿರುದ್ದ ಐಪಿಸಿ ಕಲಂ 379 ಅಡಿ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 7:01 pm, Tue, 28 June 22

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ