AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್, ಹೆಲ್ಮೆಟ್ ಧರಿಸಿ ಬಂದ ಖದೀಮರು 7 ಲಕ್ಷ ರೂ. ದೋಚಿ ಪರಾರಿ, ಎಲ್ಲಿ?

ಬೆಂಗಳೂರು: ಸಂಡೇ ಲಾಕ್ ಡೌನ್​ನ ಬಂಡವಾಳ ಮಾಡಿಕೊಂಡ ಖದೀಮರು ಬಿಗ್ ಬಾಸ್ಕೆಟ್ ಸೂಪರ್ ಮಾರ್ಕೆಟ್​ನಲ್ಲಿ ತರಕಾರಿ ಖರೀದಿಸುವ ನೆಪದಲ್ಲಿ ಬಂದು, ಕ್ಯಾಶಿಯರ್​ ಬಳಿ 7 ಲಕ್ಷ ರೂಪಾಯಿ ದೋಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಂಡೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಟಾಪ್ ಕನ್ವೆನ್ಷನ್ ಹಾಲ್ ರಸ್ತೆಯಲ್ಲಿರುವ ಬಿಗ್ ಬಾಸ್ಕೆಟ್ ಸೂಪರ್ ಮಾರ್ಕೆಟ್​ಗೆ ಮಾಸ್ಕ್ ಮತ್ತು ಹೆಲ್ಮೆಟ್ ಧರಿಸಿ ಒಳನುಗ್ಗಿದ ಕಳ್ಳರು, ಕ್ಯಾಶಿಯರ್​ಗೆ ಚಾಕುವಿನಿಂದ ಇರಿದು 7 ಲಕ್ಷ ರೂಪಾಯಿ ಹಣವನ್ನ ದೋಚಿದ್ದಾರೆ. ಪರಾರಿಯಾಗುವ […]

ಮಾಸ್ಕ್, ಹೆಲ್ಮೆಟ್ ಧರಿಸಿ ಬಂದ ಖದೀಮರು 7 ಲಕ್ಷ ರೂ. ದೋಚಿ ಪರಾರಿ, ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on: Aug 04, 2020 | 4:28 PM

Share

ಬೆಂಗಳೂರು: ಸಂಡೇ ಲಾಕ್ ಡೌನ್​ನ ಬಂಡವಾಳ ಮಾಡಿಕೊಂಡ ಖದೀಮರು ಬಿಗ್ ಬಾಸ್ಕೆಟ್ ಸೂಪರ್ ಮಾರ್ಕೆಟ್​ನಲ್ಲಿ ತರಕಾರಿ ಖರೀದಿಸುವ ನೆಪದಲ್ಲಿ ಬಂದು, ಕ್ಯಾಶಿಯರ್​ ಬಳಿ 7 ಲಕ್ಷ ರೂಪಾಯಿ ದೋಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬಂಡೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಟಾಪ್ ಕನ್ವೆನ್ಷನ್ ಹಾಲ್ ರಸ್ತೆಯಲ್ಲಿರುವ ಬಿಗ್ ಬಾಸ್ಕೆಟ್ ಸೂಪರ್ ಮಾರ್ಕೆಟ್​ಗೆ ಮಾಸ್ಕ್ ಮತ್ತು ಹೆಲ್ಮೆಟ್ ಧರಿಸಿ ಒಳನುಗ್ಗಿದ ಕಳ್ಳರು, ಕ್ಯಾಶಿಯರ್​ಗೆ ಚಾಕುವಿನಿಂದ ಇರಿದು 7 ಲಕ್ಷ ರೂಪಾಯಿ ಹಣವನ್ನ ದೋಚಿದ್ದಾರೆ. ಪರಾರಿಯಾಗುವ ಮುನ್ನ ಕ್ಯಾಶಿಯರ್​ನ ಕೈ ಕಾಲುಗಳನ್ನು ಕಟ್ಟಿ ಹಾಕಿ ಹೋಗಿದ್ದಾರೆ.

ಸ್ವಲ್ಪ ಸಮಯದ ನಂತರ ಕಟ್ಟಿದ ಹಗ್ಗವನ್ನು ಬಿಡಿಸಿಕೊಂಡ ಕ್ಯಾಶಿಯರ್, ಹೊರಗೆ ಬಂದು ಸಹಾಯಕ್ಕಾಗಿ ಮೊರೆ ಇಟ್ಟಿದ್ದಾನೆ. ಆದರೆ ಅಂದು ಸಂಡೇ ಲಾಕ್​ಡೌನ್​ ಇದ್ದ ಕಾರಣದಿಂದಾಗಿ ರಸ್ತೆಯಲ್ಲಿ ಯಾರು ಓಡಾಡುತ್ತಿರಲಿಲ್ಲ. ಹೀಗಾಗಿ, ಕಳ್ಳರು ಸುಲಭವಾಗಿ ತಪ್ಪಿಸಿಕೊಂಡು ಹೋಗಿದ್ದಾರೆ. ಇದೀಗ, ಬಂಡೆಪಾಳ್ಯ ಪೊಲೀಸರು ಸಿಸಿಟಿವಿ ದೃಶ್ಯಾವಳಿಯನ್ನು ಆಧಾರವಾಗಿಟ್ಟುಕೊಂಡು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!