AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್, ಹೆಲ್ಮೆಟ್ ಧರಿಸಿ ಬಂದ ಖದೀಮರು 7 ಲಕ್ಷ ರೂ. ದೋಚಿ ಪರಾರಿ, ಎಲ್ಲಿ?

ಬೆಂಗಳೂರು: ಸಂಡೇ ಲಾಕ್ ಡೌನ್​ನ ಬಂಡವಾಳ ಮಾಡಿಕೊಂಡ ಖದೀಮರು ಬಿಗ್ ಬಾಸ್ಕೆಟ್ ಸೂಪರ್ ಮಾರ್ಕೆಟ್​ನಲ್ಲಿ ತರಕಾರಿ ಖರೀದಿಸುವ ನೆಪದಲ್ಲಿ ಬಂದು, ಕ್ಯಾಶಿಯರ್​ ಬಳಿ 7 ಲಕ್ಷ ರೂಪಾಯಿ ದೋಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಂಡೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಟಾಪ್ ಕನ್ವೆನ್ಷನ್ ಹಾಲ್ ರಸ್ತೆಯಲ್ಲಿರುವ ಬಿಗ್ ಬಾಸ್ಕೆಟ್ ಸೂಪರ್ ಮಾರ್ಕೆಟ್​ಗೆ ಮಾಸ್ಕ್ ಮತ್ತು ಹೆಲ್ಮೆಟ್ ಧರಿಸಿ ಒಳನುಗ್ಗಿದ ಕಳ್ಳರು, ಕ್ಯಾಶಿಯರ್​ಗೆ ಚಾಕುವಿನಿಂದ ಇರಿದು 7 ಲಕ್ಷ ರೂಪಾಯಿ ಹಣವನ್ನ ದೋಚಿದ್ದಾರೆ. ಪರಾರಿಯಾಗುವ […]

ಮಾಸ್ಕ್, ಹೆಲ್ಮೆಟ್ ಧರಿಸಿ ಬಂದ ಖದೀಮರು 7 ಲಕ್ಷ ರೂ. ದೋಚಿ ಪರಾರಿ, ಎಲ್ಲಿ?
ಸಾಧು ಶ್ರೀನಾಥ್​
| Updated By: KUSHAL V|

Updated on: Aug 04, 2020 | 4:28 PM

Share

ಬೆಂಗಳೂರು: ಸಂಡೇ ಲಾಕ್ ಡೌನ್​ನ ಬಂಡವಾಳ ಮಾಡಿಕೊಂಡ ಖದೀಮರು ಬಿಗ್ ಬಾಸ್ಕೆಟ್ ಸೂಪರ್ ಮಾರ್ಕೆಟ್​ನಲ್ಲಿ ತರಕಾರಿ ಖರೀದಿಸುವ ನೆಪದಲ್ಲಿ ಬಂದು, ಕ್ಯಾಶಿಯರ್​ ಬಳಿ 7 ಲಕ್ಷ ರೂಪಾಯಿ ದೋಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬಂಡೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಟಾಪ್ ಕನ್ವೆನ್ಷನ್ ಹಾಲ್ ರಸ್ತೆಯಲ್ಲಿರುವ ಬಿಗ್ ಬಾಸ್ಕೆಟ್ ಸೂಪರ್ ಮಾರ್ಕೆಟ್​ಗೆ ಮಾಸ್ಕ್ ಮತ್ತು ಹೆಲ್ಮೆಟ್ ಧರಿಸಿ ಒಳನುಗ್ಗಿದ ಕಳ್ಳರು, ಕ್ಯಾಶಿಯರ್​ಗೆ ಚಾಕುವಿನಿಂದ ಇರಿದು 7 ಲಕ್ಷ ರೂಪಾಯಿ ಹಣವನ್ನ ದೋಚಿದ್ದಾರೆ. ಪರಾರಿಯಾಗುವ ಮುನ್ನ ಕ್ಯಾಶಿಯರ್​ನ ಕೈ ಕಾಲುಗಳನ್ನು ಕಟ್ಟಿ ಹಾಕಿ ಹೋಗಿದ್ದಾರೆ.

ಸ್ವಲ್ಪ ಸಮಯದ ನಂತರ ಕಟ್ಟಿದ ಹಗ್ಗವನ್ನು ಬಿಡಿಸಿಕೊಂಡ ಕ್ಯಾಶಿಯರ್, ಹೊರಗೆ ಬಂದು ಸಹಾಯಕ್ಕಾಗಿ ಮೊರೆ ಇಟ್ಟಿದ್ದಾನೆ. ಆದರೆ ಅಂದು ಸಂಡೇ ಲಾಕ್​ಡೌನ್​ ಇದ್ದ ಕಾರಣದಿಂದಾಗಿ ರಸ್ತೆಯಲ್ಲಿ ಯಾರು ಓಡಾಡುತ್ತಿರಲಿಲ್ಲ. ಹೀಗಾಗಿ, ಕಳ್ಳರು ಸುಲಭವಾಗಿ ತಪ್ಪಿಸಿಕೊಂಡು ಹೋಗಿದ್ದಾರೆ. ಇದೀಗ, ಬಂಡೆಪಾಳ್ಯ ಪೊಲೀಸರು ಸಿಸಿಟಿವಿ ದೃಶ್ಯಾವಳಿಯನ್ನು ಆಧಾರವಾಗಿಟ್ಟುಕೊಂಡು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?