AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್, ಹೆಲ್ಮೆಟ್ ಧರಿಸಿ ಬಂದ ಖದೀಮರು 7 ಲಕ್ಷ ರೂ. ದೋಚಿ ಪರಾರಿ, ಎಲ್ಲಿ?

ಬೆಂಗಳೂರು: ಸಂಡೇ ಲಾಕ್ ಡೌನ್​ನ ಬಂಡವಾಳ ಮಾಡಿಕೊಂಡ ಖದೀಮರು ಬಿಗ್ ಬಾಸ್ಕೆಟ್ ಸೂಪರ್ ಮಾರ್ಕೆಟ್​ನಲ್ಲಿ ತರಕಾರಿ ಖರೀದಿಸುವ ನೆಪದಲ್ಲಿ ಬಂದು, ಕ್ಯಾಶಿಯರ್​ ಬಳಿ 7 ಲಕ್ಷ ರೂಪಾಯಿ ದೋಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಂಡೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಟಾಪ್ ಕನ್ವೆನ್ಷನ್ ಹಾಲ್ ರಸ್ತೆಯಲ್ಲಿರುವ ಬಿಗ್ ಬಾಸ್ಕೆಟ್ ಸೂಪರ್ ಮಾರ್ಕೆಟ್​ಗೆ ಮಾಸ್ಕ್ ಮತ್ತು ಹೆಲ್ಮೆಟ್ ಧರಿಸಿ ಒಳನುಗ್ಗಿದ ಕಳ್ಳರು, ಕ್ಯಾಶಿಯರ್​ಗೆ ಚಾಕುವಿನಿಂದ ಇರಿದು 7 ಲಕ್ಷ ರೂಪಾಯಿ ಹಣವನ್ನ ದೋಚಿದ್ದಾರೆ. ಪರಾರಿಯಾಗುವ […]

ಮಾಸ್ಕ್, ಹೆಲ್ಮೆಟ್ ಧರಿಸಿ ಬಂದ ಖದೀಮರು 7 ಲಕ್ಷ ರೂ. ದೋಚಿ ಪರಾರಿ, ಎಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Aug 04, 2020 | 4:28 PM

Share

ಬೆಂಗಳೂರು: ಸಂಡೇ ಲಾಕ್ ಡೌನ್​ನ ಬಂಡವಾಳ ಮಾಡಿಕೊಂಡ ಖದೀಮರು ಬಿಗ್ ಬಾಸ್ಕೆಟ್ ಸೂಪರ್ ಮಾರ್ಕೆಟ್​ನಲ್ಲಿ ತರಕಾರಿ ಖರೀದಿಸುವ ನೆಪದಲ್ಲಿ ಬಂದು, ಕ್ಯಾಶಿಯರ್​ ಬಳಿ 7 ಲಕ್ಷ ರೂಪಾಯಿ ದೋಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬಂಡೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಟಾಪ್ ಕನ್ವೆನ್ಷನ್ ಹಾಲ್ ರಸ್ತೆಯಲ್ಲಿರುವ ಬಿಗ್ ಬಾಸ್ಕೆಟ್ ಸೂಪರ್ ಮಾರ್ಕೆಟ್​ಗೆ ಮಾಸ್ಕ್ ಮತ್ತು ಹೆಲ್ಮೆಟ್ ಧರಿಸಿ ಒಳನುಗ್ಗಿದ ಕಳ್ಳರು, ಕ್ಯಾಶಿಯರ್​ಗೆ ಚಾಕುವಿನಿಂದ ಇರಿದು 7 ಲಕ್ಷ ರೂಪಾಯಿ ಹಣವನ್ನ ದೋಚಿದ್ದಾರೆ. ಪರಾರಿಯಾಗುವ ಮುನ್ನ ಕ್ಯಾಶಿಯರ್​ನ ಕೈ ಕಾಲುಗಳನ್ನು ಕಟ್ಟಿ ಹಾಕಿ ಹೋಗಿದ್ದಾರೆ.

ಸ್ವಲ್ಪ ಸಮಯದ ನಂತರ ಕಟ್ಟಿದ ಹಗ್ಗವನ್ನು ಬಿಡಿಸಿಕೊಂಡ ಕ್ಯಾಶಿಯರ್, ಹೊರಗೆ ಬಂದು ಸಹಾಯಕ್ಕಾಗಿ ಮೊರೆ ಇಟ್ಟಿದ್ದಾನೆ. ಆದರೆ ಅಂದು ಸಂಡೇ ಲಾಕ್​ಡೌನ್​ ಇದ್ದ ಕಾರಣದಿಂದಾಗಿ ರಸ್ತೆಯಲ್ಲಿ ಯಾರು ಓಡಾಡುತ್ತಿರಲಿಲ್ಲ. ಹೀಗಾಗಿ, ಕಳ್ಳರು ಸುಲಭವಾಗಿ ತಪ್ಪಿಸಿಕೊಂಡು ಹೋಗಿದ್ದಾರೆ. ಇದೀಗ, ಬಂಡೆಪಾಳ್ಯ ಪೊಲೀಸರು ಸಿಸಿಟಿವಿ ದೃಶ್ಯಾವಳಿಯನ್ನು ಆಧಾರವಾಗಿಟ್ಟುಕೊಂಡು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

Follow Us
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ