ಮಾಸ್ಕ್, ಹೆಲ್ಮೆಟ್ ಧರಿಸಿ ಬಂದ ಖದೀಮರು 7 ಲಕ್ಷ ರೂ. ದೋಚಿ ಪರಾರಿ, ಎಲ್ಲಿ?

ಬೆಂಗಳೂರು: ಸಂಡೇ ಲಾಕ್ ಡೌನ್​ನ ಬಂಡವಾಳ ಮಾಡಿಕೊಂಡ ಖದೀಮರು ಬಿಗ್ ಬಾಸ್ಕೆಟ್ ಸೂಪರ್ ಮಾರ್ಕೆಟ್​ನಲ್ಲಿ ತರಕಾರಿ ಖರೀದಿಸುವ ನೆಪದಲ್ಲಿ ಬಂದು, ಕ್ಯಾಶಿಯರ್​ ಬಳಿ 7 ಲಕ್ಷ ರೂಪಾಯಿ ದೋಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಂಡೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಟಾಪ್ ಕನ್ವೆನ್ಷನ್ ಹಾಲ್ ರಸ್ತೆಯಲ್ಲಿರುವ ಬಿಗ್ ಬಾಸ್ಕೆಟ್ ಸೂಪರ್ ಮಾರ್ಕೆಟ್​ಗೆ ಮಾಸ್ಕ್ ಮತ್ತು ಹೆಲ್ಮೆಟ್ ಧರಿಸಿ ಒಳನುಗ್ಗಿದ ಕಳ್ಳರು, ಕ್ಯಾಶಿಯರ್​ಗೆ ಚಾಕುವಿನಿಂದ ಇರಿದು 7 ಲಕ್ಷ ರೂಪಾಯಿ ಹಣವನ್ನ ದೋಚಿದ್ದಾರೆ. ಪರಾರಿಯಾಗುವ […]

ಮಾಸ್ಕ್, ಹೆಲ್ಮೆಟ್ ಧರಿಸಿ ಬಂದ ಖದೀಮರು 7 ಲಕ್ಷ ರೂ. ದೋಚಿ ಪರಾರಿ, ಎಲ್ಲಿ?
Edited By:

Updated on: Aug 04, 2020 | 4:28 PM

ಬೆಂಗಳೂರು: ಸಂಡೇ ಲಾಕ್ ಡೌನ್​ನ ಬಂಡವಾಳ ಮಾಡಿಕೊಂಡ ಖದೀಮರು ಬಿಗ್ ಬಾಸ್ಕೆಟ್ ಸೂಪರ್ ಮಾರ್ಕೆಟ್​ನಲ್ಲಿ ತರಕಾರಿ ಖರೀದಿಸುವ ನೆಪದಲ್ಲಿ ಬಂದು, ಕ್ಯಾಶಿಯರ್​ ಬಳಿ 7 ಲಕ್ಷ ರೂಪಾಯಿ ದೋಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬಂಡೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಟಾಪ್ ಕನ್ವೆನ್ಷನ್ ಹಾಲ್ ರಸ್ತೆಯಲ್ಲಿರುವ ಬಿಗ್ ಬಾಸ್ಕೆಟ್ ಸೂಪರ್ ಮಾರ್ಕೆಟ್​ಗೆ ಮಾಸ್ಕ್ ಮತ್ತು ಹೆಲ್ಮೆಟ್ ಧರಿಸಿ ಒಳನುಗ್ಗಿದ ಕಳ್ಳರು, ಕ್ಯಾಶಿಯರ್​ಗೆ ಚಾಕುವಿನಿಂದ ಇರಿದು 7 ಲಕ್ಷ ರೂಪಾಯಿ ಹಣವನ್ನ ದೋಚಿದ್ದಾರೆ. ಪರಾರಿಯಾಗುವ ಮುನ್ನ ಕ್ಯಾಶಿಯರ್​ನ ಕೈ ಕಾಲುಗಳನ್ನು ಕಟ್ಟಿ ಹಾಕಿ ಹೋಗಿದ್ದಾರೆ.

ಸ್ವಲ್ಪ ಸಮಯದ ನಂತರ ಕಟ್ಟಿದ ಹಗ್ಗವನ್ನು ಬಿಡಿಸಿಕೊಂಡ ಕ್ಯಾಶಿಯರ್, ಹೊರಗೆ ಬಂದು ಸಹಾಯಕ್ಕಾಗಿ ಮೊರೆ ಇಟ್ಟಿದ್ದಾನೆ. ಆದರೆ ಅಂದು ಸಂಡೇ ಲಾಕ್​ಡೌನ್​ ಇದ್ದ ಕಾರಣದಿಂದಾಗಿ ರಸ್ತೆಯಲ್ಲಿ ಯಾರು ಓಡಾಡುತ್ತಿರಲಿಲ್ಲ. ಹೀಗಾಗಿ, ಕಳ್ಳರು ಸುಲಭವಾಗಿ ತಪ್ಪಿಸಿಕೊಂಡು ಹೋಗಿದ್ದಾರೆ. ಇದೀಗ, ಬಂಡೆಪಾಳ್ಯ ಪೊಲೀಸರು ಸಿಸಿಟಿವಿ ದೃಶ್ಯಾವಳಿಯನ್ನು ಆಧಾರವಾಗಿಟ್ಟುಕೊಂಡು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us