ಬೆಂಗಳೂರಿನಲ್ಲಿ ಪುಡಿರೌಡಿಗಳ ಅಟ್ಟಹಾಸ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಬೆಂಗಳೂರಿನ ಮಡಿವಾಳ ಪೊಲೀಸ್​ ಠಾಣಾ ವ್ಯಾಪ್ತಿಯ ವೆಂಕಟಾಪುರದಲ್ಲಿ ಪುಡಿರೌಡಿಗಳು ಯುವಕನ ಮೇಲೆ ಲಾಂಗ್, ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 307 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಪುಡಿರೌಡಿಗಳ ಅಟ್ಟಹಾಸ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ
ಯುವಕನ ಮೇಲೆ ಹಲ್ಲೆ ಮಾಡುತ್ತಿರುವ ದೃಶ್ಯ
Follow us
| Updated By: ವಿವೇಕ ಬಿರಾದಾರ

Updated on: Sep 02, 2023 | 7:42 AM

ಬೆಂಗಳೂರು: ನಗರದಲ್ಲಿ ಪುಡಿರೌಡಿಗಳ (Rowdy) ಅಟ್ಟಹಾಸ ಮುಂದುವರೆದಿದ್ದು, ಪೊಲೀಸರ ಭಯವೇ ಇಲ್ಲದಂತಾಗಿದೆ. ಮಡಿವಾಳ ಪೊಲೀಸ್​ (Police) ಠಾಣಾ ವ್ಯಾಪ್ತಿಯ ವೆಂಕಟಾಪುರದಲ್ಲಿ ಪುಡಿರೌಡಿಗಳು ಯುವಕನ ಮೇಲೆ ಬ್ಯಾಟ್​​​​, ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ರಮೇಶ್​ ಹಲ್ಲೆಗೊಳಗಾದ ಯುವಕ. ರಮೇಶ್​​​ ವೆಂಕಟಾಪುರದಲ್ಲಿ ಸಂಜೆ 6:30 ರ ಸುಮಾರಿಗೆ ಟೀ ಕುಡಿಯಲು ಬಂದಿದ್ದರು. ಇದೇ ವೇಳೆ ಇದೇ ಟೀ ಅಂಗಡಿ ಬಳಿ ಬಂದಿದ್ದ ಕಾವೇರಿ, ಶಿವು ಮತ್ತು ಆತನ ಗ್ಯಾಂಗ್ ಏನೋ ನಾವ್ ಬಂದರೂ ಎದ್ದೇಳಲ್ವಾ ಹಾಗೇ ಕೂತಿದ್ಯಾ ಅಂತ ರಮೇಶ್​ ಮೇಲೆ ಹಲ್ಲೆ ಮಾಡಿದ್ದಾರೆ.

ನಂತರ ಮಚ್ಚು, ಲಾಂಗ್ ತೆಗೆದು ಹಲ್ಲೆ ಮಾಡಲು ಬಂದಾಗ, ರಮೇಶ್​​ ಸ್ಥಳದಿಂದ ಓಡಲು ಆರಂಭಿಸಿದ್ದಾರೆ. ಈ ವೇಳೆ ರೌಡಿಗಳು ರಮೇಶ್​​​ನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಪುಂಡರು ನಡೆಸಿದ ಹಲ್ಲೆ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 307 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಆರೋಪಿ ಶಿವುನನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಹುಳಿಮಾವು ಪೊಲೀಸರಿಂದ 2 ಕೋಟಿ ರೂ ಮೌಲ್ಯದ ಡ್ರಗ್ಸ್​ ಜಪ್ತಿ: ನೈಜೀರಿಯಾ ಮೂಲದ ಇಬ್ಬರ ಬಂಧನ

ಲಾಂಗ್ ಮಾದರಿಯಲ್ಲಿ ಇರುವ ಕ್ರಿಕೆಟ್ ಬ್ಯಾಟ್​ನಿಂದ ಹಲ್ಲೆ ಮಾಡಿದ್ದೇವೆ, ಕಾವೇರಿ ಎಂಬಾತ ಸ್ಥಳದಲ್ಲಿ ಇರಲಿಲ್ಲ ಎಂದು ವಿಚಾರಣೆ ವೇಳೆ ಆರೋಪಿ ಹೇಳಿದ್ದಾನೆ. ಇನ್ನು ಕೃತ್ಯ ಎಸಗಿದ ಶಿವು ಸಹಚರರಿಗೂ ಸಹ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ