Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime Update: ರೌಡಿಶೀಟರ್ ಕೊಲೆ ಪ್ರಕರಣದ 9 ಆರೋಪಿಗಳ ಬಂಧನ, ಹೆತ್ತವರ ಕಣ್ಣೆದುರು ಹಳ್ಳದ ನೀರಿನಲ್ಲಿ ಕೊಚ್ಚಿ ಹೋದ ಮಗ

ಅಲಮೇಲ ಪಟ್ಟಣದಲ್ಲಿ ಯಲ್ಲಮ್ಮ ದೇವರ ಚೌಡಕಿ ಹಾಡುವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪ್ರದೀಪನನ್ನು ಕಲ್ಲು ಹಾಗೂ ಬಡಿಗೆಗಳಿಂದ ಹೊಡೆದು ಕೊಲೆ ಮಾಡಲಾಗಿತ್ತು

Crime Update: ರೌಡಿಶೀಟರ್ ಕೊಲೆ ಪ್ರಕರಣದ 9 ಆರೋಪಿಗಳ ಬಂಧನ, ಹೆತ್ತವರ ಕಣ್ಣೆದುರು ಹಳ್ಳದ ನೀರಿನಲ್ಲಿ ಕೊಚ್ಚಿ ಹೋದ ಮಗ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 04, 2021 | 7:59 PM

ವಿಜಯಪುರ: ಆಲಮೇಲ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ, ರೌಡಿಶೀಟರ್ ಪ್ರದೀಪ ಎಂಟಮಾನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ ಒಂಬತ್ತು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಪಟ್ಟಿಯಲ್ಲಿ ಒಟ್ಟು 13 ಮಂದಿಯ ಹೆಸರುಗಳಿವೆ. ಭೀಮು, ಸಂಜು, ಗೌತಮ್, ಮುತ್ತು, ಪಿಂಟು, ಶಿವಪುತ್ರ, ವೀರೇಶ್​, ಸತೀಶ್​​ ಹಾಗೂ ದೇವು ಬಂಧಿತರು. ಡಿ.2ರಂದು ವಿಜಯಪುರ ಜಿಲ್ಲೆ ಆಲಮೇಲದಲ್ಲಿ ಹತ್ಯೆ ನಡೆದಿತ್ತು. ಅಲಮೇಲ ಪಟ್ಟಣದಲ್ಲಿ ಯಲ್ಲಮ್ಮ ದೇವರ ಚೌಡಕಿ ಹಾಡುವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪ್ರದೀಪನನ್ನು ಕಲ್ಲು ಹಾಗೂ ಬಡಿಗೆಗಳಿಂದ ಹೊಡೆದು ಕೊಲೆ ಮಾಡಲಾಗಿತ್ತು. ಮೇಲಿನಮನಿ ಕುಟುಂಬದವರು ರಾಜಕೀಯ ದ್ವೇಷದಿಂದ ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಬೈಕ್-ಕಾರ್ ಅಪಘಾತ: ವ್ಯಕ್ತಿ ಸಾವು ಮೈಸೂರು: ಕಾರು-ಬೈಕ್‌ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಮೃತಪಟ್ಟಿರುವ ಘಟನೆ ಹುಣಸೂರು ಮುಖ್ಯರಸ್ತೆ ಪಡುವಾರಹಳ್ಳಿ ಜಂಕ್ಷನ್ ಬಳಿ ನಡೆದಿದೆ. ಮೃತನನ್ನು ಅನಂತಶೆಟ್ಟಿ (58) ಎಂದು ಗುರುತಿಸಲಾಗಿದೆ. ಸಿದ್ದಪ್ಪ ಮತ್ತು ಇತರ ಇಬ್ಬರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಚಿಂದಿ ಆಯುವವನ ಕೊಲೆ: ಆರೋಪಿಗಳ ಬಂಧನ ಮೈಸೂರು: ನಗರದಲ್ಲಿ ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣದ ಆರೋಪಿಗಳನ್ನು ಕೆ.ಆರ್.ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಶಿಕುಮಾರ್, ರಾಮಲಿಂಗು ಬಂಧಿತರು. ಪರಾರಿಯಾಗಿರುವ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಆಯ್ದ ಚಿಂದಿ ಮಾರಾಟದ ಹಣ ಹಂಚಿಕೊಳ್ಳುವ ವಿಚಾರದಲ್ಲಿ ಜಗಳವಾಗಿ, ಚಂದ್ರು ಕುತ್ತಿಗೆ ಬಿಗಿದು ಕೊಲೆ ಮಾಡಲಾಗಿತ್ತು ಎಂದು ಆರೋಪಿಗಳು ಪೊಲೀಸ್ ವಿಚಾರಣೆ ವೇಳೆ ತಿಳಿಸಿದ್ದಾರೆ.

ತಂದೆ-ತಾಯಿ ಕಣ್ಣೆದುರೇ ಹಳ್ಳದಲ್ಲಿ ಕೊಚ್ಚಿಹೋದ ಉದಯ್ ಮಂಡ್ಯ: ತಂದೆ ತಾಯಿ ಎದುರಿನಲ್ಲೇ ಮಗ ಹಳ್ಳದಲ್ಲಿ ಕೊಚ್ಚಿ ಹೋದ ದುರ್ಘಟನೆ ಜಿಲ್ಲೆಯ ಕೈಗೋನಹಳ್ಳಿಯಲ್ಲಿ ನಡೆದಿದೆ. ಶಿವಲಿಂಗೇಗೌಡ ಮತ್ತು ಜಯಮ್ಮ ಅವರ ಒಬ್ಬನೇ ಮಗ ಉದಯ್ ಮೃತ ಯುವಕ. ಕಳೆದ 30 ವರ್ಷಗಳಿಂದ ಮುಂಬೈನಲ್ಲಿ ಎಂಜಿನಿಯರ್​ ಆಗಿದ್ದ ಉದಯ್ ಕೊರೊನಾ ಹೆಚ್ಚಳದಿಂದಾಗಿ ಕೆಲವು ತಿಂಗಳ ಹಿಂದೆ ಕುಟುಂಬ ಸಹಿತ ಬೆಂಗಳೂರಿಗೆ ಬಂದಿದ್ದರು. ಶ್ರವಣಬೊಳಗೋಳಕ್ಕೆ ಹೋಗಿದ್ದ ಉದಯ್ ರಾತ್ರಿ ಹತ್ತು ಗಂಟೆ ಸುಮಾರಿಗೆ ಮನೆಗೆ ಬರುತ್ತಿದ್ದೇನೆ ಎಂದಿದ್ದರು. ರಾತ್ರಿ 11 ಗಂಟೆ ಕಳೆದರೂ ಉದಯ್ ಮನೆಗೆ ಬಂದಿರಲಿಲ್ಲ.

ಅಪ್ಪ-ಅಮ್ಮ ಮಗನನ್ನು ಹುಡುಕಲು ಹೊರಟರು. ಈ ಸಂದರ್ಭ ಸಾರಂಗಿ ಬಳಿಯ ಹಳ್ಳದ ನೀರಿನಲ್ಲಿ ಉದಯ್ ಸಿಲುಕಿದ್ದು ಕಂಡುಬಂತು. ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಬೈಕ್ ಹಿಡಿದು ಕುಳಿತಿದ್ದ ಮಗನನ್ನು ಕಾಪಾಡಲು ಉದಯ್ ತಂದೆ ಶಿವಲಿಂಗೇಗೌಡ ಹಳ್ಳಕ್ಕೆ ಧುಮುಕಿದರು. ಆದರೆ ಅವರ ಪ್ರಯತ್ನಕ್ಕೆ ಫಲ ಸಿಗಲಿಲ್ಲ. ತಂದೆ ಶಿವಲಿಂಗೇಗೌಡ ಕಷ್ಟಪಟ್ಟು ಈಜಿ ದಡ ಸೇರಿದರಾದರೂ, ಈಜಲು ಸಾಧ್ಯವಾಗದ ಉದಯ್ ನೀರುಪಾಲಾದರು.

ಬೈಕ್ ಕಳ್ಳನ ಬಂಧನ ಬೆಂಗಳೂರು: ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಗಲಿನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳನ್ನು ಗಮನಿಸುತ್ತಿದ್ದ ಕಳ್ಳ ರಾತ್ರಿ ವೇಳೆ ಬಂದು ಅವನ್ನು ಕದ್ದೊಯ್ಯುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ: ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದ ಇಬ್ಬರು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಇದನ್ನೂ ಓದಿ: Crime News: ಎಸಿಬಿ ಬಲೆಗೆ ಗ್ರಾಮಲೆಕ್ಕಾಧಿಕಾರಿ, ತುಮಕೂರು ಜೈಲಿನ ಮೇಲೆ ಪೊಲೀಸರ ದಾಳಿ, ಸೇನೆಗೆ ಸೇರಲು ದಾಖಲೆ ತಿದ್ದುಪಡಿ

ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ