AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ನಟೋರಿಯಸ್ ರೌಡಿ ಶೀಟರ್ ಭೀಕರ ಹತ್ಯೆ; ಭಯಾನಕ ಕೊಲೆ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಇತ್ತೇಚೆಗೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಪೊಲೀಸರು ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಇದಕ್ಕೆ ಬ್ರೇಕ್​ ಹಾಕಲಾಗುತ್ತಿಲ್ಲ. ಅದರಂತೆ ಇದೀಗ ಹಾಸನ(Hassan)ದ ಪೆನ್ಷನ್ ಮೊಹಲ್ಲಾ ಠಾಣೆ ವ್ಯಾಪ್ತಿಯ ಹೇಮಾವತಿನಗರದಲ್ಲಿ ಇಂದು(ಜೂ.05) ಬೆಳಿಗ್ಗೆ ರೌಡಿ ಶೀಟರ್​ ಚೈಲ್ಡ್ ರವಿ(45) ಎಂಬಾತನ ಭೀಕರ ಕೊಲೆ(Murder) ನಡೆದಿದೆ.

ಮಂಜುನಾಥ ಕೆಬಿ
| Edited By: |

Updated on:Jun 05, 2024 | 3:12 PM

Share

ಹಾಸನ, ಜೂ.05: ಹಾಸನ(Hassan)ದ ಪೆನ್ಷನ್ ಮೊಹಲ್ಲಾ ಠಾಣೆ ವ್ಯಾಪ್ತಿಯ ಹೇಮಾವತಿನಗರದಲ್ಲಿ ಇಂದು(ಜೂ.05) ಬೆಳಿಗ್ಗೆ ರೌಡಿ ಶೀಟರ್​ ಚೈಲ್ಡ್ ರವಿ(45) ಎಂಬಾತನ ಭೀಕರ ಕೊಲೆ(Murder) ನಡೆದಿದೆ. ಬೆಳಿಗ್ಗೆ 7 ಗಂಟೆ 55 ನಿಮಿಷಕ್ಕೆ ಬಂದ ಬಿಳಿ ಬಣ್ಣದ ಸ್ಯಾಂಟ್ರೋ ಕಾರು, ಎದುರಿನಿಂದ ಬಲ ಭಾಗದಲ್ಲಿ ಬರುತ್ತಿದ್ದ ರವಿಯ ಆಕ್ಟೀವ್ ಹೊಂಡಾಗೆ ಗುದ್ದಿದೆ. ಬಳಿಕ ಆತ ನೆಲಕ್ಕೆ ಬಿದ್ದ ಬಿಳುತ್ತಿದ್ದಂತೆ ಹಂತಕರು ಅಟ್ಯಾಕ್​ ಮಾಡಿ ಮಾರಾಕಾಸ್ತ್ರಗಳಿಂದ ಮನಸೋ ಇಚ್ಚೆ ಹೊಡೆದು ಹತ್ಯೆ ಮಾಡಿದ್ದಾರೆ.

ಸಿಸಿ ಕ್ಯಾಮೆರಾ ದೃಶ್ಯ ಆಧರಿಸಿ ತನಿಖೆಗಿಳಿದ ಪೊಲೀಸರು

ಇನ್ನು ಮೃತ ಚೈಲ್ಡ್ ರವಿ, ಮೂರು ಕೊಲೆ, ಅತ್ಯಾಚಾರ ಹಾಗೂ ದರೋಡೆ ಪ್ರಕರಣದ ಆರೋಪಿಯಾಗಿದ್ದ. ಇಂದು ಮುಂಜಾನೆ ಮನೆಗೆ ನೀರು ತರಲು ಹೋಗಿದ್ದಾಗ ದಾರಿ ಮದ್ಯೆ ಅಡ್ಡಗಟ್ಟಿ ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ಪೆನ್​ಷನ್​ ಮೊಹಲ್ಲಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರವಿ ಮೇಲೆ ಅಟ್ಯಾಕ್ ಆಗುವಾಗ ಅಲ್ಲಿಯೇ ಇದ್ದ ಶಾಲಾ ಮಕ್ಕಳು ಹಾಗೂ ಜನರು, ಜೀವ ಭಯದಿಂದ ಓಡಿ ಹೋಗಿದ್ದಾರೆ. ಇನ್ನು ಈ ಭಯಾನಕ‌ ಹತ್ಯೆ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದನ್ನು ಆಧರಿಸಿ ಪೊಲೀಸರು ತನಿಖೆಗಿಳಿದಿದ್ದಾರೆ.

ಇದನ್ನೂ ಓದಿ:ಪ್ರೀತಿಸಿ ಮದುವೆಯಾಗಿದ್ದ ಹೆಂಡತಿ, ಕುಟುಂಬದಿಂದಲೇ ಕೊಲೆಗೆ ಯತ್ನ; ಪೊಲೀಸರ ಸಮಯ ಪ್ರಜ್ಞೆಯಿಂದ ಉಳಿತು ಜೀವ

ಕಂಬದದೇವರಹಟ್ಟಿ ಗ್ರಾಮದಲ್ಲಿ ವ್ಯಕ್ತಿಯ ಭೀಕರ ಕೊಲೆ

ಚಿತ್ರದುರ್ಗ: ಹೊಳಲ್ಕೆರೆ ತಾಲೂಕಿನ ಕಂಬದದೇವರಹಟ್ಟಿ ಗ್ರಾಮದಲ್ಲಿ ವ್ಯಕ್ತಿಯೋರ್ವನನ್ನು ಮಲಗಿದ್ದಾಗ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ ಮಾಡಲಾಗಿದೆ. ರಂಗಪ್ಪ(48) ಮೃತ ರ್ದುದೈವಿ. ಇನ್ನು ಹತ್ಯೆ ಬಳಿಕ ಕೊಲೆ ಆರೋಪಿ ಪರಾರಿಯಾಗಿದ್ದು, ಈವರೆಗೂ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:10 pm, Wed, 5 June 24

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು