ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ; ಲಾಂಗ್​​​ನಿಂದ ಹೊಡೆದು ಕೊಲೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 28, 2024 | 4:29 PM

ತಲಘಟಪುರ(Talaghattapura)ದ ಚಿಕ್ಕೆಗೌಡನ ಪಾಳ್ಯದಲ್ಲಿ ರೌಡಿಶೀಟರ್​(Rowdysheeter) ನನ್ನು ಲಾಂಗ್​​​ನಿಂದ ಹೊಡೆದು​​​​ ಬರ್ಬರ ಹತ್ಯೆ ಮಾಡಲಾಗಿದೆ. ಗಾಳಪ್ಪ ಅಲಿಯಾಸ್​​ ಹುಚ್ಚುಗಾಳ ಕೊಲೆಯಾದ ರೌಡಿ ಶೀಟರ್.

ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ; ಲಾಂಗ್​​​ನಿಂದ ಹೊಡೆದು ಕೊಲೆ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು,ಜ.28: ನಗರದ ತಲಘಟಪುರ(Talaghattapura)ದ ಚಿಕ್ಕೆಗೌಡನ ಪಾಳ್ಯದಲ್ಲಿ ರೌಡಿಶೀಟರ್​(Rowdysheeter) ನನ್ನು ಲಾಂಗ್​​​ನಿಂದ ಹೊಡೆದು​​​​ ಬರ್ಬರ ಹತ್ಯೆ ಮಾಡಲಾಗಿದೆ. ಗಾಳಪ್ಪ ಅಲಿಯಾಸ್​​ ಹುಚ್ಚುಗಾಳ ಕೊಲೆಯಾದ ರೌಡಿ ಶೀಟರ್. ಈ ಹಿಂದೆ ಎರಡು ಕೊಲೆಯಲ್ಲಿ ಭಾಗಿಯಾಗಿದ್ದ ಮೃತ ಗಾಳಪ್ಪನ ವಿರುದ್ದ ಕೆಂಗೇರಿ ಹಾಗೂ ತಾವರೆಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದವು. ಇಂದು ವೈಯಕ್ತಿಕ ಕೆಲಸದ ನಿಮಿತ್ತ ಚಿಕ್ಕೆಗೌಡನ ಪಾಳ್ಯಕ್ಕೆ ಬಂದಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ತಲಘಟ್ಟಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಂದಿಗಿರಿಧಾಮದಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಚಿಕ್ಕಬಳ್ಳಾಪುರ: ತಾಲೂಕಿನ ನಂದಿಗಿರಿಧಾಮದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಇತನನ್ನು ಚಿಂತಾಮಣಿ ತಾಲ್ಲೂಕಿನ ಬ್ಯಾಲಹಳ್ಳಿ ಗ್ರಾಮದ ನಾರಾಯಣಸ್ವಾಮಿ(37) ಎಮದು ಗುರುತಿಸಲಾಗಿದೆ. ಇನ್ನು ಇತ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಹೋಗಿದ್ದನಂತೆ. ಈ ಹಿನ್ನಲೆ ಚಿಕ್ಕಬಳ್ಳಾಫುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಯುವಕ ನಾಪತ್ತೆ ಪ್ರಕರಣ ದಾಖಲಾಗಿತ್ತು. ಇನ್ನು ಸ್ಥಳಕ್ಕೆ ನಂದಿಗಿರಿಧಾಮ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಬಾರ್​​ನಲ್ಲಿ ಶುರುವಾದ ಗೆಳೆಯರ ಗಲಾಟೆ ಮನೆ ಮುಂದೆ ಕೊಲೆಯಲ್ಲಿ ಅಂತ್ಯ

ನಿಯಂತ್ರಣ ತಪ್ಪಿ ಬೈಕ್ ಡಿವೈಡರ್ ಗೆ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ತಾಲೂಕಿನ ಜಿಂದಾಲ್​ ಸಿಟಿಯಲ್ಲಿ ಡಿವೈಡರ್​ಗೆ ಬೈಕ್​ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ನೆಲಮಂಗಲದ ವಾಜರಹಳ್ಳಿಯ ಕಿರಣ್​ ಕುಮಾರ್(34) ಮೃತ ರ್ದುದೈವಿ. ಖಾಸಗಿ ಬ್ಯಾಂಕ್ ಇನ್ಶುರೆನ್ಸ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕಿರಣ್, ನೆಲಮಂಗಲದಿಂದ ಬೆಂಗಳೂರಿಗೆ ಬರುವ ವೇಳೆ ನಡೆದ ಈ ದುರ್ಘಟನೆ ನಡೆದಿದೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ದಾಖಲಾಗಿದೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:24 pm, Sun, 28 January 24