AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆ ವೈಷಮ್ಯ: ಉಲ್ಲಾಳು ಬಳಿ ರೌಡಿಶೀಟರ್​ನ ಕೊಚ್ಚಿ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

Murder: ನಗರದ ಉಲ್ಲಾಳು ಬಳಿ ರೌಡಿಶೀಟರ್​ನ ಕೊಚ್ಚಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ. ಅರುಣ್ ಎಂಬ ರೌಡಿಶೀಟರ್​ನ ಬರ್ಬರ ಹತ್ಯೆಯಾಗಿದೆ. ಅರುಣ್​ ಅನ್ನಪೂರ್ಣೇಶ್ವರಿನಗರ ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್​ ಆಗಿದ್ದ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಅರುಣ್​ನನ್ನು ಕೊಂದಿರುವ ಶಂಕೆ ವ್ಯಕ್ತವಾಗಿದೆ.

ಹಳೆ ವೈಷಮ್ಯ: ಉಲ್ಲಾಳು ಬಳಿ ರೌಡಿಶೀಟರ್​ನ ಕೊಚ್ಚಿ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು
ರೌಡಿಶೀಟರ್ ಅರುಣ್
KUSHAL V
|

Updated on:Feb 16, 2021 | 11:33 PM

Share

ಬೆಂಗಳೂರು: ನಗರದ ಉಲ್ಲಾಳು ಬಳಿ ರೌಡಿಶೀಟರ್​ನ ಕೊಚ್ಚಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ. ಅರುಣ್ ಎಂಬ ರೌಡಿಶೀಟರ್​ನ ಬರ್ಬರ ಹತ್ಯೆಯಾಗಿದೆ. ಅರುಣ್​ ಅನ್ನಪೂರ್ಣೇಶ್ವರಿನಗರ ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್​ ಆಗಿದ್ದ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಅರುಣ್​ನನ್ನು ಕೊಂದಿರುವ ಶಂಕೆ ವ್ಯಕ್ತವಾಗಿದೆ.

ಇನ್ನು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಜ್ಞಾನಭಾರತಿ ಠಾಣೆ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದರು. ಮರಣೋತ್ತರ ಪರೀಕ್ಷೆಗಾಗಿ ಅರುಣ್​ ಶವವನ್ನು ರವಾನಿಸಲಾಗಿದೆ.

ಹಣಕ್ಕಾಗಿ ಭಿಕ್ಷುಕಿ ಕೊಲೆ ಇತ್ತ, ಅರಮನೆ ನಗರಿ ಮೈಸೂರಿನ ಕೆ.ಟಿ.ಸ್ಟ್ರೀಟ್​ನಲ್ಲಿ ಭಿಕ್ಷುಕಿಯೊಬ್ಬರನ್ನು ಕೊಲೆಮಾಡಿರುವ ಶಂಕೆ ವ್ಯಕ್ತವಾಗಿದೆ. ಹಣಕ್ಕಾಗಿ ಭಿಕ್ಷುಕಿಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ, ಪೊಲೀಸರ ತನಿಖೆ ನಂತರ ಸಾವಿನ ಬಗ್ಗೆ ಮಾಹಿತಿ ಸಿಗಲಿದೆ. ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರೌಡಿಗಳ ನಡುವೆ ಮಾರಾಮಾರಿಯಲ್ಲಿ ರೌಡಿಶೀಟರ್​ ಕೊಲೆ ಮುನೇಶ್ವರ ದೇವಸ್ಥಾನದ ಬಳಿ ಅರುಣ್ ಕುಮಾರ್​ ಕೊಲೆ ನಡಿದಿದೆ. ಕೃಷ್ಣ ಅಲಿಯಾಸ್ ಚಪ್ಪರ್ ಕೃಷ್ಣನ ಗ್ಯಾಂಗ್​ನಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮೃತ ರೌಡಿಶೀಟರ್​ ಅರುಣ್​ ಉಲ್ಲಾಳು ಕಾರ್ತಿಕ್, ಸಾದಿಕ್​ ಗ್ಯಾಂಗ್​ನಲ್ಲಿದ್ದ.

ಈ ಮೊದಲು ಒಂದೇ ಗುಂಪಿನಲ್ಲಿದ್ದ ಕೃಷ್ಣ, ಅರುಣ್​ ಕುಮಾರ್​ ವೈಮನಸ್ಸಿನಿಂದ ಬೇರೆ ಬೇರೆಯಾಗಿದ್ದರು. ಇಂದು, ಸ್ಥಳೀಯ ಜಾತ್ರೆಯಲ್ಲಿ ಮುಖಾಮುಖಿಯಾಗಿದ್ದ ಕೃಷ್ಣ, ಅರುಣ್​ ರೌಡಿಗಳ 2 ಗುಂಪಿನ ಮಧ್ಯೆ ಹೊಡೆದಾಟದಲ್ಲಿ ಅರುಣ್ ಹತ್ಯೆಯಾಗಿದೆ.

ಇದನ್ನೂ ಓದಿ: ರಸ್ತೆ ಡಿವೈಡರ್​ಗೆ ಬೈಕ್ ಡಿಕ್ಕಿ: ತಾಯಿ, ಮಾವನ ಜೊತೆ ತೆರಳುತ್ತಿದ್ದ ಬಾಲಕಿ ಸ್ಥಳದಲ್ಲೇ ಸಾವು

Published On - 10:26 pm, Tue, 16 February 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?