AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆ ವೈಷಮ್ಯ: ಉಲ್ಲಾಳು ಬಳಿ ರೌಡಿಶೀಟರ್​ನ ಕೊಚ್ಚಿ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

Murder: ನಗರದ ಉಲ್ಲಾಳು ಬಳಿ ರೌಡಿಶೀಟರ್​ನ ಕೊಚ್ಚಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ. ಅರುಣ್ ಎಂಬ ರೌಡಿಶೀಟರ್​ನ ಬರ್ಬರ ಹತ್ಯೆಯಾಗಿದೆ. ಅರುಣ್​ ಅನ್ನಪೂರ್ಣೇಶ್ವರಿನಗರ ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್​ ಆಗಿದ್ದ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಅರುಣ್​ನನ್ನು ಕೊಂದಿರುವ ಶಂಕೆ ವ್ಯಕ್ತವಾಗಿದೆ.

ಹಳೆ ವೈಷಮ್ಯ: ಉಲ್ಲಾಳು ಬಳಿ ರೌಡಿಶೀಟರ್​ನ ಕೊಚ್ಚಿ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು
ರೌಡಿಶೀಟರ್ ಅರುಣ್
KUSHAL V
|

Updated on:Feb 16, 2021 | 11:33 PM

Share

ಬೆಂಗಳೂರು: ನಗರದ ಉಲ್ಲಾಳು ಬಳಿ ರೌಡಿಶೀಟರ್​ನ ಕೊಚ್ಚಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ. ಅರುಣ್ ಎಂಬ ರೌಡಿಶೀಟರ್​ನ ಬರ್ಬರ ಹತ್ಯೆಯಾಗಿದೆ. ಅರುಣ್​ ಅನ್ನಪೂರ್ಣೇಶ್ವರಿನಗರ ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್​ ಆಗಿದ್ದ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಅರುಣ್​ನನ್ನು ಕೊಂದಿರುವ ಶಂಕೆ ವ್ಯಕ್ತವಾಗಿದೆ.

ಇನ್ನು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಜ್ಞಾನಭಾರತಿ ಠಾಣೆ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದರು. ಮರಣೋತ್ತರ ಪರೀಕ್ಷೆಗಾಗಿ ಅರುಣ್​ ಶವವನ್ನು ರವಾನಿಸಲಾಗಿದೆ.

ಹಣಕ್ಕಾಗಿ ಭಿಕ್ಷುಕಿ ಕೊಲೆ ಇತ್ತ, ಅರಮನೆ ನಗರಿ ಮೈಸೂರಿನ ಕೆ.ಟಿ.ಸ್ಟ್ರೀಟ್​ನಲ್ಲಿ ಭಿಕ್ಷುಕಿಯೊಬ್ಬರನ್ನು ಕೊಲೆಮಾಡಿರುವ ಶಂಕೆ ವ್ಯಕ್ತವಾಗಿದೆ. ಹಣಕ್ಕಾಗಿ ಭಿಕ್ಷುಕಿಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ, ಪೊಲೀಸರ ತನಿಖೆ ನಂತರ ಸಾವಿನ ಬಗ್ಗೆ ಮಾಹಿತಿ ಸಿಗಲಿದೆ. ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರೌಡಿಗಳ ನಡುವೆ ಮಾರಾಮಾರಿಯಲ್ಲಿ ರೌಡಿಶೀಟರ್​ ಕೊಲೆ ಮುನೇಶ್ವರ ದೇವಸ್ಥಾನದ ಬಳಿ ಅರುಣ್ ಕುಮಾರ್​ ಕೊಲೆ ನಡಿದಿದೆ. ಕೃಷ್ಣ ಅಲಿಯಾಸ್ ಚಪ್ಪರ್ ಕೃಷ್ಣನ ಗ್ಯಾಂಗ್​ನಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮೃತ ರೌಡಿಶೀಟರ್​ ಅರುಣ್​ ಉಲ್ಲಾಳು ಕಾರ್ತಿಕ್, ಸಾದಿಕ್​ ಗ್ಯಾಂಗ್​ನಲ್ಲಿದ್ದ.

ಈ ಮೊದಲು ಒಂದೇ ಗುಂಪಿನಲ್ಲಿದ್ದ ಕೃಷ್ಣ, ಅರುಣ್​ ಕುಮಾರ್​ ವೈಮನಸ್ಸಿನಿಂದ ಬೇರೆ ಬೇರೆಯಾಗಿದ್ದರು. ಇಂದು, ಸ್ಥಳೀಯ ಜಾತ್ರೆಯಲ್ಲಿ ಮುಖಾಮುಖಿಯಾಗಿದ್ದ ಕೃಷ್ಣ, ಅರುಣ್​ ರೌಡಿಗಳ 2 ಗುಂಪಿನ ಮಧ್ಯೆ ಹೊಡೆದಾಟದಲ್ಲಿ ಅರುಣ್ ಹತ್ಯೆಯಾಗಿದೆ.

ಇದನ್ನೂ ಓದಿ: ರಸ್ತೆ ಡಿವೈಡರ್​ಗೆ ಬೈಕ್ ಡಿಕ್ಕಿ: ತಾಯಿ, ಮಾವನ ಜೊತೆ ತೆರಳುತ್ತಿದ್ದ ಬಾಲಕಿ ಸ್ಥಳದಲ್ಲೇ ಸಾವು

Published On - 10:26 pm, Tue, 16 February 21

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್