AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆಜಾನ್ ಕಂಪನಿಗೆ 30 ಕೋಟಿ ರೂ. ವಂಚನೆ: ಮಂಗಳೂರಿನಲ್ಲಿ ಇಬ್ಬರ ಬಂಧನ

ಮಂಗಳೂರಿನ ಉರ್ವಾ ಠಾಣೆ ಪೊಲೀಸರು ರಾಜಸ್ಥಾನದಿಂದ ಬಂದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಅಮೆಜಾನ್‌ಗೆ 30 ಕೋಟಿ ರೂಪಾಯಿಗಳ ವಂಚನೆ ಮಾಡಿದ ಆರೋಪ ಅವರ ಮೇಲಿದೆ. ಐದು ವರ್ಷಗಳಿಂದ ವಂಚನೆ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅಮೆಜಾನ್ ಕಂಪನಿಗೆ 30 ಕೋಟಿ ರೂ. ವಂಚನೆ: ಮಂಗಳೂರಿನಲ್ಲಿ ಇಬ್ಬರ ಬಂಧನ
ಆರೋಪಿಗಳು
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Nov 02, 2024 | 12:25 PM

Share

ಮಂಗಳೂರು, ನವೆಂಬರ್​ 02: ಅಮೆಜಾನ್‌ (Amazon) ಕಂಪನಿಗೆ ಬರೊಬ್ಬರಿ 30 ಕೋಟಿ ರೂ. ವಂಚಿಸಿದ್ದ ಆರೋಪಿಗಳನ್ನು ಮಂಗಳೂರಿನ (Mangaluru) ಉರ್ವಾ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ರಾಜಸ್ಥಾನ (Rajasthan) ರಾಜ್ಯದ ಧೋಪುರ್ ಜಿಲ್ಲೆಯ ನಿವಾಸಿ ರಾಜಕುಮಾರ್ ಮೀನಾ (23), ಕರೌಲಿ ಜಿಲ್ಲೆಯ ಸುಭಾಸ್ ಗುರ್ಜರ್ (27) ಬಂಧಿತರು.

ಆರೋಪಿಗಳು ಅಮೆಜಾನ್​ನಲ್ಲಿ ವಿವಿಧ ರೀತಿಯ ಬೆಲೆಬಾಳುವ ಸಾಮಗ್ರಿಗಳನ್ನು ಆರ್ಡರ್​​ ಮಾಡುತ್ತಿದ್ದರು. ವಸ್ತುಗಳ ಡಿಲೇವರಿ ಪಡೆಯಲು ಟೈಯರ್ ಟು ಸಿಟಿ ಲೋಕೆಷನ್ ಆಯ್ಕೆ ಮಾಡುತ್ತಿದ್ದರು. ಬುಕ್ ಮಾಡಿದ ವಸ್ತುಗಳನ್ನು ಡೆಲಿವರಿ ಪಡೆಯಲು ಆರೋಪಿಗಳು ವಿಮಾನದಲ್ಲಿ ಹೋಗುತ್ತಿದ್ದರು. ವಸ್ತುವಿನ ಬಾಕ್ಸ್​ ಮೇಲಿನ ಟ್ರ್ಯಾಕಿಂಗ್ ಐಡಿಯನ್ನು ಅದಲು ಬದಲು ಮಾಡಿ ಅಮೆಜಾನ್ ಸಂಸ್ಥೆಗೆ ವಂಚಿಸುತಿದ್ದರು.

ವಸ್ತುಗಳು ಡೆಲವರಿಯಾದ ಬಳಿಕ, ಅದರ ಮೇಲಿನ ಟ್ರ್ಯಾಕಿಂಗ್ ಲೇಬಲ್​ಗಳನ್ನು ಅದೇ ರೀತಿಯ ಕಡಿಮೆ ಬೆಲೆಯ ವಸ್ತುಗಳ ಬಾಕ್ಸ್​​ ಮೇಲೆ ಹಚ್ಚುತ್ತಿದ್ದರು. ನಂತರ, ರಿಟರ್ನ್​​ ಮಾಡುತ್ತಿದ್ದರು. ದುಬಾರಿ ಬೆಲೆಯ ವಸ್ತುಗಳನ್ನು ತಮ್ಮಲ್ಲೇ ಇಟ್ಟುಕೊಂಡು ವಂಚಿಸುತ್ತಿದ್ದರು.

ದುಬಾರಿ ಬೆಲೆಯ ವಸ್ತುಗಳನ್ನು ಸೆಕೆಂಡ್ ಹ್ಯಾಂಡ್​ಗೆ ಮಾರಾಟ ಮಾಡುತ್ತಿದ್ದರು. ಐಟಂ ರಿಟರ್ನ್ ಆದ ಬಳಿಕ ಆರ್ಡರ್​ಗೆ ಬಳಸಿದ ಸಿಮ್ ಕಿತ್ತೆಸೆಯುತ್ತಿದ್ದರು. ವಸ್ತು ಅಮೇಜಾನ್ ಗೋಡಾನ್ ತಲುಪಿದ ಬಳಿಕ ವಂಚನೆ ಬೆಳಕಿಗೆ ಬರುತ್ತಿತ್ತು.

ಇದನ್ನೂ ಓದಿ: ಸೈಬರ್​ ಕ್ರೈಂ: ಮಂಗಳೂರು ಪೊಲೀಸ್​ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್​ಬುಕ್​ ಖಾತೆ

ಆರೋಪಿಗಳು ಕಳೆದ‌ ಐದು ವರ್ಷಗಳಿಂದಲೂ ಈ ರೀತಿ ವಂಚನೆ ಮಾಡುತ್ತಿದ್ದಾರೆ. ತಮಿಳುನಾಡು, ಕೇರಳ, ಅಸ್ಸಾಂ, ಕರ್ನಾಟಕ, ದೆಹಲಿ, ಉತ್ತರ ಪ್ರದೇಶ, ಬಿಹಾರ ಸೇರಿದಂತೆ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ನೆಲೆಸಿ ವಂಚನೆ ಮಾಡಿದ್ದಾರೆ. ಆರೋಪಿಗಳು ಈವರೆಗೂ ಲಾಕ್ ಆಗಿರಲಿಲ್ಲ. ಆದರೆ, ಇದೀಗ ಮಂಗಳೂರಿನ ಉರ್ವಾ ಪೊಲೀಸರು ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಮಂಗಳೂರಿನ ಉರ್ವ ಠಾಣೆಯಲ್ಲಿ ಸೆ.21ರಂದು ಅಮೆಜಾನ್ ಕಂಪನಿಯ ಡೆಲಿವರಿ ಬಾಯ್ ಪ್ರಕರಣ ದಾಖಲಿಸದ್ದನು. ತನಿಖೆ ನಡೆಸಿ ಖದೀಮರ ಮೋಸದ ಜಾಲ ಭೇದಿಸಿದ ಮಂಗಳೂರಿನ‌ ಉರ್ವ ಠಾಣೆಯ ಪೊಲೀಸರು ಆರೋಪಿಗಳನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?