Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ನಶೆಯಲ್ಲಿ ಅಸಭ್ಯ ವರ್ತನೆ: ಮಂಗಳಮುಖಿಯಿಂದಲೇ ಯುವಕನಿಗೆ ಬಿತ್ತು ಗೂಸಾ

ರಾತ್ರಿ ಮನೆಗೆ ಮರಳುತ್ತಿದ್ದ ಮಂಗಳಮುಖಿಗೆ ಅವಾಚ್ಯವಾಗಿ ನಿಂದಿಸಿ ಯುವಕ ಅಸಭ್ಯವಾರ್ತನೆ ಮಾಡಿದ್ದಾನೆ. ಇದನ್ನ ಸಹಿಸಿಕೊಳ್ಳದ ಮಂಗಳಮುಖಿ ಕೂಡಲೇ ಸಾರ್ವಜನಿಕವಾಗಿಯೇ ಧರ್ಮದೇಟು ನೀಡಿದ್ದಾರೆ.

ಕುಡಿದ ನಶೆಯಲ್ಲಿ ಅಸಭ್ಯ ವರ್ತನೆ: ಮಂಗಳಮುಖಿಯಿಂದಲೇ ಯುವಕನಿಗೆ ಬಿತ್ತು ಗೂಸಾ
ಮಂಗಳಮುಖಿಯಿಂದಲ್ಲೇ ಯುವಕನಿಗೆ ಬಿತ್ತು ಗೂಸಾ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:May 29, 2022 | 7:12 AM

ಬೆಳಗಾವಿ: ಕುಡಿದ ನಶೆಯಲ್ಲಿ ಮಂಗಳಮುಖಿಯೊಂದಿಗೆ ಅಸಭ್ಯ ವರ್ತನೆ ತೋರಿದ್ದಕ್ಕೆ ಮಂಗಳಮುಖಿಯಿಂದಲ್ಲೇ ಯುವಕನಿಗೆ ಧರ್ಮದೇಟು ನೀಡಿರುವಂತಹ ಘಟನೆ ಜಿಲ್ಲೆಯ ಕಿತ್ತೂರು ಪಟ್ಟಣದ ಚನ್ನಮ್ಮ ವೃತ್ತದ ಬಳಿ ನಡೆದಿದೆ. ರಾತ್ರಿ ಮನೆಗೆ ಮರಳುತ್ತಿದ್ದ ಮಂಗಳಮುಖಿಗೆ ಅವಾಚ್ಯವಾಗಿ ನಿಂದಿಸಿ ಯುವಕ ಅಸಭ್ಯವಾರ್ತನೆ ಮಾಡಿದ್ದಾನೆ. ಇದನ್ನ ಸಹಿಸಿಕೊಳ್ಳದ ಮಂಗಳಮುಖಿ ಕೂಡಲೇ ಸಾರ್ವಜನಿಕವಾಗಿಯೇ ಧರ್ಮದೇಟು ನೀಡಿದ್ದಾರೆ. ಇನ್ನೂ ದೇಗುಲಹಳ್ಳಿ ಗ್ರಾಮದ ಯುವಕನೇ ಈ ರೀತಿ ಅಸಭ್ಯವಾಗಿ ತೋರಿದ್ದು, ಕೂಡಲೇ ಯುವಕನನ್ನ ಕಿತ್ತೂರು ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ರಾತ್ರಿಯಾದ್ರೇ ಸಾಕು ಕಿತ್ತೂರು ಚನ್ನಮ್ಮ ವೃತ್ತದ ಬಳಿ ಮಹಿಳೆಯರು, ಮಕ್ಕಳು, ಮಂಗಳಮುಖಿಯರು ಓಡಾಡದ ಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರು ಇನ್ನಾದರೂ ಪುಂಡರ ವಿರುದ್ಧ ಕ್ರಮ ಕೈಗೊಂಡು ರಕ್ಷಣೆ ನೀಡುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಭಾ.ಮಾ.ಹರೀಶ್ ಆಯ್ಕೆ

ಅನ್ಯಕೋಮಿನ ಯುವಕರಿಂದ ಚಾಕು ಇರಿತ

ತುಮಕೂರು: ಅನ್ಯಕೋಮಿನ ಯುವಕರಿಂದ ಚಾಕು ಇರಿದ (Stab the knife) ಘಟನೆಯೊಂದು ತುಮಕೂರು ನಗರದ ದಿಬ್ಬೂರಹಳ್ಳಿಯಲ್ಲಿ ನಡೆದಿದೆ. ವಿನೋದ್(17) ಎಂಬ ಯುವಕನ ಮೇಲೆ ದಾಳಿ ನಡೆಸಿದ ಇಬ್ಬರು ಆರೋಪಿಗಳು, ವಿನೋದ್​ನ ಹೊಟ್ಟೆಗೆ ಚಾಕುವಿನಿಂದ ಇರಿದಿದ್ದಾರೆ. ನಂತರ ಅಲ್ಲಿಂದ ಆರೋಪಿಗಳು ಪರಾರಿಯಾಗಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಗಾಯಾಳುವನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಟ್ಯಾಂಕರ್ ಮಾಲೀಕನ ಕಳ್ಳಾಟ

ಬೆಂಗಳೂರು: ಟ್ಯಾಂಕರ್ ಹರಿದು 3 ವರ್ಷದ ಮಗು ಸಾವು ಪ್ರಕರಣ ಸಂಬಂಧ ಪೊಲೀಸ್ ಠಾಣೆಯಲ್ಲಿ ವಾಟರ್ ಟ್ಯಾಂಕರ್ ಮಾಲೀಕನ ಸಾಕ್ಷಿ ನಾಶಕ್ಕೆ ಯತ್ನಿಸಿದ್ದಾನೆ. ಕೃತ್ಯ ನಡೆದಾಗ ಟ್ಯಾಂಕರ್​ನಲ್ಲಿದ್ದ ಅಸಲಿ ಚಾಲಕನ ಬದಲಿಗೆ ಬೇರೊಬ್ಬ ಚಾಲಕನನ್ನು ಠಾಣೆಗೆ ಕರೆತಂದ ಟ್ಯಾಂಕರ್ ಮಾಲೀಕ ಆನಂದ್​ ಸಾಕ್ಷಿ ನಾಶಕ್ಕೆ ಯತ್ನಿಸಿದ್ದಾನೆ. ವಿಚಾರಣೆ ವೇಳೆ ಅಸಲಿಯತ್ತು ಬೆಳಕಿಗೆ ಬಂದಿದ್ದು, ಹಣದ ಆಸೆಗೆ ರಮೇಶ್ ಬಾಬು ಆರೋಪಿಯಾಗಿ ಬಂದಿದ್ದನು. ಈ ಬಗ್ಗೆ ಸ್ವತಃ ರಮೇಶ್ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ. ನಂತರ ಅಸಲಿ ಚಾಲಕ ರಖಿಬ್​ನನ್ನು ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಪ್ರಕರಣ ಸಂಬಂಧ ಎಚ್​ಎಸ್​ಆರ್ ಲೇಔಟ್​ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 7:07 am, Sun, 29 May 22

ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ