AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಖ್ರಿ ಸರ್ಕಲ್‌ ಅಪಘಾತಕ್ಕೆ ಟ್ವಿಸ್ಟ್: ಲ್ಯಾಂಬೋರ್ಗಿನಿ ಕಾರು ಓಡಿಸಿದವರು ಯಾರು ಗೊತ್ತಾ?

ಬೆಂಗಳೂರು: ಫೆಬ್ರವರಿ 9ರಂದು ನಗರದ ಮೇಖ್ರಿ ಸರ್ಕಲ್‌ ಬಳಿ ಲ್ಯಾಂಬೋರ್ಗಿನಿ ಕಾರು ಸರಣಿ ಅಪಘಾತ ಸಂಬಂಧ ಶಾಸಕ ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್​ಗೆ ಸದಾಶಿವನಗರ ಸಂಚಾರಿ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಫೆ.9ರಂದು ಲ್ಯಾಂಬೋರ್ಗಿನಿ ಕಾರಿನಿಂದ ಸರಣಿ ಅಪಘಾತವಾಗಿತ್ತು. ಘಟನೆಯಲ್ಲಿ ಬೈಕ್ ಸವಾರ ಪ್ರಫುಲ್ ಎಂಬಾತನ ಕಾಲು ಮೂಳೆ ಮುರಿದಿತ್ತು. ಅಪಘಾತದ ಬಳಿಕ ದುಬಾರಿ ಕಾರನ್ನ ಬಿಟ್ಟು ಚಾಲಕ ಮತ್ತೊಂದು ಕಾರಿನಲ್ಲಿ ಪರಾರಿಯಾಗಿದ್ದ. ಘಟನೆ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಘಟನಾ ಸ್ಥಳಕ್ಕೆ […]

ಮೇಖ್ರಿ ಸರ್ಕಲ್‌ ಅಪಘಾತಕ್ಕೆ ಟ್ವಿಸ್ಟ್: ಲ್ಯಾಂಬೋರ್ಗಿನಿ ಕಾರು ಓಡಿಸಿದವರು ಯಾರು ಗೊತ್ತಾ?
Follow us
ಸಾಧು ಶ್ರೀನಾಥ್​
|

Updated on:Feb 12, 2020 | 1:02 PM

ಬೆಂಗಳೂರು: ಫೆಬ್ರವರಿ 9ರಂದು ನಗರದ ಮೇಖ್ರಿ ಸರ್ಕಲ್‌ ಬಳಿ ಲ್ಯಾಂಬೋರ್ಗಿನಿ ಕಾರು ಸರಣಿ ಅಪಘಾತ ಸಂಬಂಧ ಶಾಸಕ ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್​ಗೆ ಸದಾಶಿವನಗರ ಸಂಚಾರಿ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಫೆ.9ರಂದು ಲ್ಯಾಂಬೋರ್ಗಿನಿ ಕಾರಿನಿಂದ ಸರಣಿ ಅಪಘಾತವಾಗಿತ್ತು. ಘಟನೆಯಲ್ಲಿ ಬೈಕ್ ಸವಾರ ಪ್ರಫುಲ್ ಎಂಬಾತನ ಕಾಲು ಮೂಳೆ ಮುರಿದಿತ್ತು. ಅಪಘಾತದ ಬಳಿಕ ದುಬಾರಿ ಕಾರನ್ನ ಬಿಟ್ಟು ಚಾಲಕ ಮತ್ತೊಂದು ಕಾರಿನಲ್ಲಿ ಪರಾರಿಯಾಗಿದ್ದ. ಘಟನೆ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸದಾಶಿವನಗರ ಪೊಲೀಸರು ಕಾರನ್ನು ಜಪ್ತಿ ಮಾಡಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಪ್ರಕರಣ ಬೆನ್ನು ಹತ್ತಿದ ಪೊಲೀಸರು, ಪ್ರತ್ಯಕ್ಷದರ್ಶಿಗಳ ಹೇಳಿಕೆ ಹಾಗೂ ಟೆಕ್ನಿಕಲ್ ಸಾಕ್ಷ್ಯಗಳನ್ನ ಆಧರಿಸಿ ತನಿಖೆ ನಡೆಸಿದ್ದಾರೆ.

ಈ ನಡುವೆ ಅಪಘಾತ ಮಾಡಿದ್ದು ತಾನೇ ಎಂದು ಓರ್ವ ವ್ಯಕ್ತಿ ಮುಂದೆ ಬಂದಿದ್ದ. ಆದ್ರೆ ಸಾಕ್ಷ್ಯಾಧಾರಗಳಿಂದ ಕಾರು ಚಲಾಯಿಸುತ್ತಿದ್ದದ್ದು ಮಹಮ್ಮದ್ ನಲಪಾಡ್ ಎಂದು ಸಾಬೀತಾದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸದಾಶಿವನಗರ ಸಂಚಾರಿ ಠಾಣೆ ಪೊಲೀಸರಿಂದ ನಲಪಾಡ್​ಗೆ ನೋಟಿಸ್ ಜಾರಿಗೊಳಿಸಿದ್ದಾರೆ.

ಕಾರು ಚಾಲನೆ ಮಾಡಿದ್ದು ನಲಪಾಡ್ ಅಪಘಾತ ನಡೆದ ದಿನ ವಾಹನ ಚಾಲನೆ ಮಾಡುತ್ತಿದ್ದವರು ಬೇರೆ ವಾಹನದಲ್ಲಿ ಪರಾರಿಯಾಗಿದ್ದಾರೆ. ಈ ಸಂಬಂಧ ನಿನ್ನೆ ಪೊಲೀಸ್ ಠಾಣೆಗೆ ಸೆರೆಂಡರ್ ಆಗಲು ಒಬ್ಬ ಬಂದಿದ್ದ. ವಿಚಾರಣೆ ವೇಳೆ ಅಪಘಾತ ಮಾಡಿದವನು ಈತನಲ್ಲ ಎಂದು ತಿಳಿದು ಬಂದಿದೆ.

ಖಚಿತವಾದ ಸಾಕ್ಷ್ಯ, ಆಧಾರಗಳ ಮೇಲೆ ಮೊಹಮದ್ ನಲಪಾಡ್ ಕಾರು ಚಾಲನೆ ಮಾಡುತ್ತಿದ್ದ ಎಂಬುದು ಖಚಿತವಾಗಿ ತಿಳಿದುಬಂದಿದೆ. ಹಾಗಾಗಿ ನಲಪಾಡ್​ಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲು ಮುಂದಾಗಿದ್ದೇವೆ. ವಿಚಾರಣೆಗೆ ಹಾಜರಾದ ನಂತರ ಪ್ರಕರಣ ಸಂಬಂಧ ಮುಂದಿನ ತನಿಖೆ ಕೈಗೊಳ್ಳುತ್ತೇವೆ ಎಂದು ಸಂಚಾರಿ ವಿಭಾಗದ ಜಂಟಿ ಆಯುಕ್ತ ರವಿಕಾಂತೇ ಗೌಡ ಹೇಳಿದ್ದಾರೆ.

ಇದು ಸಣ್ಣ ಆಕ್ಸಿಡೆಂಟ್ ಅಷ್ಟೆ: ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್, ಅಪಘಾತ ಸಂಬಂಧ ನನಗೆ ಸಂಪೂರ್ಣ ಮಾಹಿತಿ ಇಲ್ಲ. ಶಾಸಕರ ಮಗ ಇರಬಹುದು ಅಥವಾ ಶಾಸಕರೇ ಆಗಿರಬಹುದು ಕಾನೂನುಬಾಹಿರವಾಗಿ ವರ್ತನೆ ಮಾಡಿದರೆ ಕ್ರಮ ಕೈಗೊಳ್ಳಬೇಕು. ಇದು ಸಣ್ಣ ಆಕ್ಸಿಡೆಂಟ್ ಅಷ್ಟೇ, ದೊಡ್ಡ ಆಕ್ಸಿಡೆಂಟ್ ಅಲ್ಲ ಎಂದಿದ್ದಾರೆ.

ಮಾಧ್ಯಮಗಳಿಗೆ ಸೆಲ್ಯೂಟ್​ ಹೊಡೆದ ಶಾಸಕ ಹ್ಯಾರಿಸ್: ಮೇಖ್ರಿ ಸರ್ಕಲ್ ಬಳಿ ಐಷಾರಾಮಿ ಕಾರು ಅಪಘಾತ ಪ್ರಕರಣದಲ್ಲಿ ಪುತ್ರ ನಲಪಾಡ್ ಕಾರು ಚಾಲನೆ ಬಗ್ಗೆ ಪ್ರತಿಕ್ರಿಯೆಗೆ ಶಾಸಕ ಹ್ಯಾರಿಸ್ ನಿರಾಕರಿಸಿದ್ದಾರೆ.  ಮಾಧ್ಯಮಗಳಿಗೆ ನಮಸ್ಕಾರ ಹೊಡೆದು ಹೊರಟ ಶಾಸಕ ಹ್ಯಾರಿಸ್, ಕೆಪಿಸಿಸಿ ಕಚೇರಿಯಲ್ಲಿ ಸಭೆ ಬಳಿಕ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

Published On - 4:27 pm, Tue, 11 February 20

ಕ್ರೀಡಾ ಸ್ಫೂರ್ತಿ ಅಲ್ಲ... ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ
ಕ್ರೀಡಾ ಸ್ಫೂರ್ತಿ ಅಲ್ಲ... ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ
VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು